ಬೆಂಗಳೂರು | ಶ್ರೀಪಾದ್ ಭಟ್ ಬರೆದ ‘ವಿಷವಟ್ಟಿ ಸುಡುವಲ್ಲಿ’ ಕೃತಿ ಬಿಡುಗಡೆ

Date:

Advertisements

ಇತಿಹಾಸವನ್ನು ತಿರುಚಿ ಪಠ್ಯದ ರೂಪದಲ್ಲಿ ಮತೀಯವಾದವನ್ನು ಹರಡುತ್ತಿರುವ ಇಂದಿನ ಅಪಾಯಕಾರಿ ಶಿಕ್ಷಣ ವ್ಯವಸ್ಥೆಯ ಬಗ್ಗೆ‌ ಹಿರಿಯ ಲೇಖಕ ಬಿ.ಶ್ರೀಪಾದ್ ಭಟ್ ಅವರು ಬರೆದಿರುವ ‘ವಿಷವಟ್ಟಿ ಸುಡುವಲ್ಲಿ’ ಕೃತಿ ಶುಕ್ರವಾರ ಬಿಡುಗಡೆಯಾಯಿತು.

ಬೆಂಗಳೂರಿನ ಸರ್ಕಾರಿ‌ ಕಲಾ ಕಾಲೇಜಿನ ಬಾಪೂಜಿ ‌ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿಶ್ರಾಂತ ಕುಲಪತಿಗಳಾದ ಪ್ರೊಫೆಸರ್ ಸಬೀಹಾ ಭೂಮಿಗೌಡ ಅವರು ಈ ವಿಶೇಷ ಕೃತಿಯನ್ನು ಬಿಡುಗಡೆಗೊಳಿಸಿದರು.

ಪುಸ್ತಕ ಬಿಡುಗಡೆಯ ಬಳಿಕ ಮಾತನಾಡಿದ ಪ್ರೊ. ಸಬೀಹಾ ಭೂಮಿಗೌಡ, ‘ಕೃತಿಯನ್ನು ಬಿಡುಗಡೆ ಮಾಡಿದ್ದು ನನಗೆ ಖುಷಿ ಮತ್ತು ಅಭಿಮಾನದ ಸಂಗತಿ. ಇಂದಿನ ವರ್ತಮಾನದಲ್ಲಿ ಮತೀಯ ವಿಷವನ್ನು ವಿವಿಧ ನೆಲೆಗಳಲ್ಲಿ ಜನರ ಮುಂದಿಡುವ ಪ್ರಜ್ಞಾಪೂರ್ವಕ ಮತ್ತು ವ್ಯವಸ್ಥಿತ ಹುನ್ನಾರಗಳು ನಡೆಯುತ್ತಲಿವೆ. ಇಂತಹ ಹೊತ್ತಿನಲ್ಲಿ ಶ್ರೀಪಾದ್ ಭಟ್ ಅವರು ಬರೆದಿರುವ ಈ ಕೃತಿ ನಮ್ಮೆಲ್ಲರ ಜವಾಬ್ದಾರಿಯನ್ನು ನೆನಪಿಸುವಂಥದ್ದು’ ಎಂದರು.

Advertisements

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ದಲಿತ ಮುಖಂಡ ಮಾವಳ್ಳಿ ಶಂಕರ್ ಮಾತನಾಡಿ, ” ಜನಪರ ಹೋರಾಟಗಳಲ್ಲಿ ತೊಡಗಿಕೊಂಡಿರುವ ಶ್ರೀಪಾದ ಭಟ್ಟರು ‘ವಿಷವಟ್ಟಿ ಸುಡುವಲ್ಲಿ’ ಕೃತಿಯ ಮತೀಯವಾದಿಕರಣದ ಮುಖವನ್ನು ಪರಿಚಯಿಸುವ ಪ್ರಯತ್ನ ಮಾಡಿದ್ದಾರೆ. ಸಾಂಸ್ಕೃತಿಕ ಗುಲಾಮಗಿರಿ ರಾಜಕೀಯ ಗುಲಾಮಿಗಿರಿಗಿಂತ ಹೆಚ್ಚು ಅಪಾಯಕಾರಿ. ಹಿಂದಿನಿಂದಲೂ ನಮ್ಮ ಇತಿಹಾಸವನ್ನು ಪುರಾಣದ ರೀತಿಯಲ್ಲಿ ಬಿಂಬಿಸಲಾಗಿದೆ. ನಮ್ಮ ಮಕ್ಕಳಿಗೆ ಇತಿಹಾಸ ಎಂದರೆ ಮನರಂಜನೆಯ ಎನ್ನುವಂತೆ ತೋರಿಸಲಾಗುತ್ತಿದೆ. ಇತಿಹಾಸವನ್ನು ತಿರುಚುವ ಪ್ರಯತ್ನಗಳು ವ್ಯವಸ್ಥಿತವಾಗಿ ನಡೆಯುತ್ತಿವೆ. ಈ ಕಾಲಘಟ್ಟದಲ್ಲಿ ನಾವುಗಳು ನಡೆಸುವ ಚರ್ಚೆಗಳು ಯುವ ಮತ್ತು ವಿದ್ಯಾರ್ಥಿ ಸಮುದಾಯಕ್ಕೆ ತಲುಪುವ ಅಗತ್ಯವಿದೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X