ಬೆಂಗಳೂರು | ಮತಗಟ್ಟೆ ಬಳಿ ಮಹಿಳೆಗೆ ಹೃದಯಾಘಾತ; ಮತದಾನ ಮಾಡಲು ಬಂದ ವೈದ್ಯನಿಂದ ಜೀವ ರಕ್ಷಣೆ

Date:

Advertisements

ಬೆಂಗಳೂರಿನ ಜೆ ಪಿ ನಗರದಲ್ಲಿರುವ ಜಂಬೂ ಸವಾರಿ ದಿನ್ನೆ ಮತಗಟ್ಟೆಯಲ್ಲಿ ಮತದಾನ ಮಾಡಲು ಆಗಮಿಸಿದ ಮಹಿಳೆಯ ಹೃದಯ ಸ್ತಂಭನವಾಗಿದ್ದು, ಇದೇ ಮತಗಟ್ಟೆಗೆ ಮತದಾನ ಮಾಡಲು ಬಂದ ವೈದ್ಯರೊಬ್ಬರು ಮಹಿಳೆಯ ಜೀವ ಉಳಿಸಿದ್ದಾರೆ.

ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಮೊದಲ ಹಂತದ ಮತದಾನ ನಡೆಯುತ್ತಿದ್ದು, ಈವರೆಗೆ 19.2ರಷ್ಟು ಮತದಾನವಾಗಿದೆ. ಬೆಳಿಗ್ಗೆ 11ರ ಸುಮಾರಿಗೆ ಮಹಿಳೆ ಮತದಾನ ಮಾಡಲು ಬಂದಿದ್ದರು. ಈ ವೇಳೆ ಮಹಿಳೆಯ ಹೃದಯ ಸ್ತಂಭನವಾಗಿದೆ. ಇದೇ ಮತಗಟ್ಟೆಗೆ ಮತದಾನ ಮಾಡಲು ಬಂದಿದ್ದ ಬೊಮ್ಮಸಂದ್ರದ ನಾರಾಯಣ ಆರೋಗ್ಯ ಕೇಂದ್ರದ ಮೂತ್ರಪಿಂಡ ತಜ್ಞ ಡಾ ಗಣೇಶ್ ಶ್ರೀನಿವಾಸ ಪ್ರಸಾದ್ ಜೀವ ಉಳಿಸಿದ್ದಾರೆ.

“50 ಆಸುಪಾಸಿನ ಮಹಿಳೆಯೊಬ್ಬರು ಕ್ಯಾನ್‌ನಲ್ಲಿ ನೀರು ಕುಡಿಯಲು ಬಂದಿದ್ದರು. ನಾನು ಅವರ ನಾಡಿಮಿಡಿತವನ್ನು ಪರಿಶೀಲಿಸಿದೆ. ನಾಡಿಮಿಡಿತ ತುಂಬಾ ಕಡಿಮೆಯಾಗಿರುವುದು ಕಂಡುಬಂದಿತು. ಕಣ್ಣುಗಳನ್ನು ಮೇಲಕ್ಕೆತ್ತಿ ಏಕಾಏಕಿ ನೆಲಕ್ಕೆ ಕುಸಿದರು. ಅವರ ದೇಹದಲ್ಲಿ ಚಲನವಲ ಇರಲಿಲ್ಲ. ಅವರು ಉಸಿರುಗಟ್ಟುತ್ತಿದ್ದರು” ಎಂದು ವೈದ್ಯ ಗಣೇಶ್​ ಶ್ರೀನಿವಾಸ್​ ಪ್ರಸಾದ್​ ಹೇಳಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ಲೋಕಸಭಾ ಚುನಾವಣೆ; ಕರ್ತವ್ಯದಲ್ಲಿದ್ದ ಮಹಿಳಾ ಸಿಬ್ಬಂದಿ ಸಾವು

“ಅಸ್ವಸ್ಥವಾಗುತ್ತಿದ್ದ ಮಹಿಳೆಯನ್ನು ಕಂಡು ನಾನು ಕೂಡಲೇ ಸಿಪಿಆರ್ ಮಾಡಿದೆ. ಸ್ವಲ್ಪ ಗುಣಮುಖರಾದರು, ಬಳಿಕ ಅವರ ಸ್ಥಿತಿ ಸುಧಾರಿಸಿತು. ಚುನಾವಣಾ ಕರ್ತವ್ಯದಲ್ಲಿದ್ದವರು ಕೂಡಲೇ ಧಾವಿಸಿ ಜ್ಯೂಸ್ ನೀಡಿದರು. ಆಂಬುಲೆನ್ಸ್​ನಲ್ಲಿ ಆಸ್ಪತ್ರೆಗೆ ಸಾಗಿಸಲಾಯಿತು. 5 ನಿಮಿಷ ವಿಳಂಬವಾಗಿದ್ದರೂ ಕೂಡಾ ಅವರ ಜೀವಕ್ಕೆ ಅಪಾಯ ಉಂಟಾಗುತ್ತಿತ್ತು” ಎಂದು ತಿಳಿಸಿದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | KSRTC ನಗರ ಸಾರಿಗೆ ಬಸ್ ಮಲವಗೊಪ್ಪದ, ಚೆನ್ನಬಸವೇಶ್ವರ ದೇವಸ್ಥಾನ ಬಳಿ ಕಡ್ಡಾಯ ನಿಲುಗಡೆಗೆ ಆದೇಶ

ಶಿವಮೊಗ್ಗ, ಸಾರ್ವಜಕನಿಕ ಪ್ರಯಾಣಿಕರು/ಶಾಲಾ-ಕಾಲೇಜು ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಶಿವಮೊಗ್ಗ-ಭದ್ರಾವತಿ ಮಾರ್ಗದಲ್ಲಿ ಕಾರ್ಯಾಚರಣೆಯಾಗುವ ನಗರ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ಮೈಸೂರು | ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದ ಅತ್ತಿಗೋಡು ಸರ್ಕಾರಿ ಪ್ರೌಢಶಾಲೆ

ಕರ್ನಾಟಕದಲ್ಲಿ ಸರ್ಕಾರಿ ಶಾಲೆಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಸಾಕಷ್ಟು ಸವಾಲುಗಳನ್ನು ಸಹ ಎದುರಿಸುತ್ತಿದೆ....

ಗದಗ | ಹಾಸ್ಟೆಲ್‌ ವಿದ್ಯಾರ್ಥಿನಿ ಕೊಲೆ ಪ್ರಕರಣ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಎಸ್‌ಎಫ್‌ಐ ಆಗ್ರಹ

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕೋವೆರ ಹಟ್ಟಿಯ ವರ್ಷಿತಾ ಎಂಬ ಪದವಿ...

Download Eedina App Android / iOS

X