ಬೆಂಗಳೂರು | ಕಾರು ಮುಳುಗಿ ಯುವತಿ ಸಾವು ಪ್ರಕರಣ: ಅಂಡರ್‌ಪಾಸ್‌ಗೆ ಲೋಕಾಯುಕ್ತರ ಭೇಟಿ

Date:

Advertisements

ಬೆಂಗಳೂರು ನಗರದಲ್ಲಿ ಮೇ 21ರಂದು ಭಾರೀ ಮಳೆ ಸುರಿದ ಸಂದರ್ಭದಲ್ಲಿ ಕಾರು ಮುಳುಗಿ ಭಾನುರೇಖಾ ಎಂಬ ಯುವತಿ ಸಾವಿಗೀಡಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ತನಿಖೆ ಆರಂಭಿಸಿದ್ದಾರೆ. ದುರ್ಘಟನೆಗೆ ಕಾರಣವಾದ ಕೆ ಆರ್‌ ವೃತ್ತದ ಅಂಡರ್‌‍ಪಾಸ್‌ಗೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡು ವಿಚಾರಣೆ ಆರಂಭಿಸಿರುವ ಲೋಕಾಯುಕ್ತ ನ್ಯಾಯಮೂರ್ತಿ ಬಿ ಎಸ್‌ ಪಾಟೀಲ, ತನಿಖೆ ನಡೆಸುವಂತೆ ಲೋಕಾಯುಕ್ತ ಪೊಲೀಸ್‌ ವಿಭಾಗಕ್ಕೆ ಆದೇಶಿಸಿದ್ದರು. ಲೋಕಾಯುಕ್ತದ ಐಜಿಪಿ ಡಾ.ಸುಬ್ರಮಣ್ಯೇಶ್ವರ ರಾವ್‌ ನೇತೃತ್ವದ ಪೊಲೀಸ್‌ ಅಧಿಕಾರಿಗಳ ತಂಡ ಬುಧವಾರ ಕೆ ಆರ್‌ ವೃತ್ತದ ಅಂಡರ್‌ಪಾಸ್‌ಗೆ ಭೇಟಿ ನೀಡಿ ಮಾಹಿತಿ ಕಲೆಹಾಕಿತು.

ಲೋಕಾಯುಕ್ತದ ತಾಂತ್ರಿಕ ವಿಭಾಗದ ಎಂಜಿನಿಯರ್‌ಗಳೊಂದಿಗೆ ಘಟನಾ ಸ್ಥಳದಲ್ಲಿ ಪರಿಶೀಲನೆ ನಡೆಸಿದರು. ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ)ಯ ಮಳೆನೀರು ಕಾಲುವೆ ವಿಭಾಗದ ಅಧಿಕಾರಿಗಳು ಹಾಗೂ ಎಂಜಿನಿಯರಿಂಗ್‌ ವಿಭಾಗದ ಅಧಿಕಾರಿಗಳನ್ನು ಸ್ಥಳಕ್ಕೆ ಕರೆಸಿ ಅವರಿಂದ ವಿವರಣೆ ಪಡೆಯಲಾಯಿತು. ಟ್ಯಾಂಕರ್‌ನಲ್ಲಿ ನೀರು ತರಿಸಿ ಅಂಡರ್‌ಪಾಸ್‌ನ ಕಾಲುವೆಯಲ್ಲಿ ಹರಿಸಿ, ಪರೀಕ್ಷಿಸಲಾಯಿತು.

Advertisements

ದುರ್ಘಟನೆ ಸಂಭವಿಸಿದ ದಿನ ಅಂಡರ್‌ಪಾಸ್‌ನಲ್ಲಿ ಬೃಹತ್‌ ಪ್ರಮಾಣದ ನೀರು ಸಂಗ್ರಹ ಆಗಲು ಕಾರಣ, ಮಳೆನೀರು ಅಂಡರ್‌ಪಾಸ್‌ನಲ್ಲಿ ನಿಲ್ಲದಂತೆ ಕೈಗೊಂಡಿದ್ದ ಮುನ್ನೆಚ್ಚರಿಕೆ ಕ್ರಮಗಳ ಕುರಿತು ಬಿಬಿಎಂಪಿ ಅಧಿಕಾರಿಗಳನ್ನು ಪ್ರಶ್ನಿಸಲಾಯಿತು. ಕೆ ಆರ್‌ ವೃತ್ತದ ಅಂಡರ್‌ಪಾಸ್‌ ಮಾತ್ರವಲ್ಲ ನಗರದ ಯಾವುದೇ ಅಂಡರ್‌ಪಾಸ್‌ನಲ್ಲೂ ಸರಿಯಾದ ನಿರ್ವಹಣೆ ಇಲ್ಲ ಎಂಬ ಮಾಹಿತಿ ತನಿಖಾ ತಂಡಕ್ಕೆ ಲಭ್ಯವಾಗಿದೆ.

ಈ ಸುದ್ದಿ ಓದಿದ್ದೀರಾ? ಅವೈಜ್ಞಾನಿಕ ಕೆಳಸೇತುವೆಗೆ ಯುವತಿ ಬಲಿ; ಬಿಬಿಎಂಪಿ ಅಧಿಕಾರಿಗಳ ವಿರುದ್ಧ ದೂರು ದಾಖಲು

ಅಂಡರ್‌ಪಾಸ್‌ಗಳಲ್ಲಿ ಮಳೆನೀರು ನಿಲ್ಲುವುದನ್ನು ತಡೆಯಲು ಕಾಲುವೆಗಳಲ್ಲಿ ಹೂಳು ತೆಗೆಯಬೇಕಿತ್ತು. ಅಂಡರ್‌ಪಾಸ್‌ ಮತ್ತು ಅವುಗಳಿಗೆ ಹೊಂದಿಕೊಂಡ ಕಾಲುವೆಗಳಲ್ಲಿ ಹೂಳು ತೆಗೆದಿಲ್ಲ ಎಂಬ ಮಾಹಿತಿ ತನಿಖಾ ತಂಡಕ್ಕೆ ಸಿಕ್ಕಿದೆ. ಮಳೆಗಾಲಕ್ಕೂ ಮೊದಲು ಸರಿಯಾದ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿಲ್ಲ ಎಂಬುದು ಪರಿಶೀಲನೆ ವೇಳೆ ಗೊತ್ತಾಗಿದೆ.

“ಕೆ ಆರ್‌ ವೃತ್ತದ ಅಂಡರ್‌ಪಾಸ್‌ನಲ್ಲಿ ದುರ್ಘಟನೆ ಸಂಭವಿಸಲು ಕಾರಣವಾದ ಅಂಶಗಳ ಕುರಿತು ತನಿಖೆ ನಡೆಸುತ್ತಿದ್ದೇವೆ. ಅದರ ಜತೆಯಲ್ಲೇ ಇತರ ಅಂಡರ್‌ಪಾಸ್‌ಗಳ ನಿರ್ವಹಣೆಯಲ್ಲಿನ ಲೋಪಗಳ ಬಗ್ಗೆಯೂ ಪರಿಶೀಲನೆ ನಡೆಸಲಾಗುವುದು. ಕರ್ತವ್ಯಲೋಪದ ಕುರಿತು ಬಿಬಿಎಂಪಿಯ ಹಿರಿಯ ಅಧಿಕಾರಿಗಳಿಂದ ವಿವರಣೆ ಪಡೆಯಲಾಗುವುದು” ಎಂದು ತನಿಖಾ ತಂಡದ ಅಧಿಕಾರಿಗಳು ತಿಳಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X