ಬಂಟ್ವಾಳ | ಜಮಾಅತೆ ಇಸ್ಲಾಮೀ ಹಿಂದ್‌ ವತಿಯಿಂದ ವಿಧವೆಗೆ ಜನರಲ್ ಸ್ಟೋರ್‌ ಹಸ್ತಾಂತರ

Date:

Advertisements

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪಾಣೆಮಂಗಳೂರು ಸಮೀಪದ ನೆಹರೂ ನಗರದ ಮೂವರು ಅನಾಥ ಹೆಣ್ಣು ಮಕ್ಕಳ ತಾಯಿಯಾಗಿರುವ ಓರ್ವ ವಿಧವೆಗೆ ಸಮಾಜ ಸೇವಾ ಘಟಕ, ಜಮಾಅತೆ ಇಸ್ಲಾಮೀ ಹಿಂದ್‌, ಮಂಗಳೂರು ವತಿಯಿಂದ ನೀಡಿದ, ದಿನಬಳಕೆಯ ವಸ್ತುಗಳ ಮಾರಾಟದ ಶಾಂತಿ ಜನರಲ್‌ ಸ್ಟೋರ್‌ ಅನ್ನು ಹಸ್ತಾಂತರಿಸಲಾಯಿತು.

ಬೋಳಂಗಡಿಯ ಹವ್ವಾ ಜುಮಾ ಮಸೀದಿಯ ಖತೀಬರಾದ ಮೌಲಾನಾ ಯಹ್ಯಾ ತಂಙಳ್‌ ಮದನಿಯವರು ಅಂಗಡಿಯನ್ನು ಉದ್ಘಾಟಿಸಿದರು.

“ದುಡಿಯುವ ಕೈಗಳಿಗೆ ಶಕ್ತಿ ನೀಡುವ ಇಂತಹ ಸೇವೆಗಳು ಅತ್ಯುತ್ತಮವಾದುದೆಂದು ಶ್ಲಾಘಿಸಿ, ಇದಕ್ಕೆ ನೆರವಾದ ಮತ್ತು ಪರಿಶ್ರಮಿಸಿದ ಎಲ್ಲರಿಗೂ ಸೃಷ್ಟಿಕರ್ತನು ತಕ್ಕುದಾದ ಪ್ರತಿಫಲ ನೀಡಿ ಅನುಗ್ರಹಿಸಲಿ” ಎಂದು ಪ್ರಾರ್ಥಿಸಿದರು.

ಊರಿನ ಪ್ರಮುಖರಾದ ಪಿ. ಎಸ್‌. ಅಬ್ದುಲ್ ಹಮೀದ್‌, ಉಮರ್‌ ಕಾಸರಗೋಡು ಸಂದರ್ಭೋಚಿತವಾಗಿ ಮಾತನಾಡಿ ಶುಭ ಹಾರೈಸಿದರು.

1002554301

ಜಮಾಅತೆ ಇಸ್ಲಾಮೀ ಹಿಂದ್‌ ಪಾಣೆಮಂಗಳೂರು ಶಾಖೆಯ ಅಧ್ಯಕ್ಷರಾದ ಮುಖ್ತಾರ್‌ ಅಹ್ಮದ್‌ರವರು ಮಾತನಾಡುತ್ತಾ, ಇಸ್ಲಾಮ್‌ ಧರ್ಮದಲ್ಲಿ ಆರಾಧನೆಗಳಂತೆಯೇ, ಇಂತಹ ಸೇವಾ ಚಟುವಟಿಕೆಗಳಿಗೂ ಬಹಳ ಪ್ರಾಧಾನ್ಯತೆ ಇದೆ. ಜಮಾಅತೆ ಇಸ್ಲಾಮೀ ತನ್ನ ಆರಂಭದ ದಿನದಿಂದಲೇ ಸಮಾಜ ಸೇವೆಗೆ ಬಹಳ ಮಹತ್ವ ಕಲ್ಪಿಸಿಕೊಂಡು ಬಂದಿದೆ ಎಂದರು.

ಸಮಾಜ ಸೇವಾ ಘಟಕ, ಮಂಗಳೂರು ಸದಸ್ಯರಾದ ಮುಹಮ್ಮದ್ ಮುಹ್ಸಿನ್‌ ಮಾತನಾಡುತ್ತಾ, “ನಮ್ಮ ಸಮಾಜ ಸೇವಾ ಘಟಕ ಕಳೆದ ಹಲವಾರು ವರ್ಷಗಳಿಂದ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ವಿವಿಧ ಸೇವೆಗಳನ್ನು ಸಮರ್ಪಿಸುತ್ತಲೇ ಬಂದಿದೆ. ಇದು ಅದರದ್ದೇ ಮುಂದುವರಿದ ಭಾಗ” ಎಂದು ಸಮಾರೋಪದ ನುಡಿಗಳೊಂದಿಗೆ ಶುಭ ಹಾರೈಸಿದರು.

ಜಮಾಅತೆ ಇಸ್ಲಾಮಿ ಹಿಂದ್ ಪಾಣೆಮಂಗಳೂರು ಸಮಾಜ ಸೇವಾ ಘಟಕದ ಅಧ್ಯಕ್ಷರಾದ ಕಾಸಿಮ್‌ ಚೆಂಡಾಡಿ, ಆದಂ, ಇಬ್ರಾಹಿಂ ಚೆಂಡಾಡಿ, ಸಲೀಂ ಬೋಳಂಗಡಿ, ಮುಹಮ್ಮದ್ ಬೋಳಂಗಡಿ, ಶಂಶೀರ್‌ ಮೆಲ್ಕಾರ್‌ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

1002554296
1002554297
eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಕಾಡುಕೋಣ ದಾಳಿ ವ್ಯಕ್ತಿ ಗಂಭೀರ

ಕಾಡುಕೋಣ ದಾಳಿಯಿಂದ ವ್ಯಕ್ತಿ ಗಂಭೀರ ಗಾಯವಾಗಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಬಾಳೂರು...

ರಾಯಚೂರು | ರಕ್ತಹೀನತೆ, ತಾಯಿ ಶಿಶು ಮರಣ ನಿಯಂತ್ರಣಕ್ಕೆ ಒತ್ತಾಯಿಸಿ ಮಹಿಳಾ ಒಕ್ಕೂಟ ಪ್ರತಿಭಟನೆ

ಕಲ್ಯಾಣ ಕರ್ನಾಟಕ ಭಾಗದಲ್ಲಿ ಅತಿ ಹೆಚ್ಚು ಮಹಿಳೆಯರಲ್ಲಿ ರಕ್ತ ಹೀನತೆ ಹಾಗೂ...

ಚಿಕ್ಕಮಗಳೂರು l ಗುಡ್ಡಹಳ್ಳದಲ್ಲಿ ಪುಂಡಾನೆ ಸೆರೆ; ಕಾರ್ಯಾಚರಣೆ ಯಶಸ್ವಿಗೊಳಿಸಿದ ಅರಣ್ಯ ಇಲಾಖೆ

ಸುಮಾರು ಒಂದುವರೆ ವರ್ಷಗಳಿಂದ ಬೀಡು ಬಿಟ್ಟಿದ್ದ, ಪುಂಡಾನೆ ಕೊನೆಗೂ ಸೆರೆಯಾಗಿರುವ ಘಟನೆ,...

ಚಿಕ್ಕಮಗಳೂರು l 1% ಮೀಸಲಾತಿಯನ್ನು ಕೂಡಲೇ ಜಾರಿ ಮಾಡಬೇಕು; ಎದ್ದೇಳು ಕರ್ನಾಟಕ

ಬದುಕಿನ್ನುದ್ದಕ್ಕೂ ಅಲೆಯುತ್ತಲೇ ಬದುಕಿದ ಅಲೆಮಾರಿ ಬಂಧುಗಳು ಇಂದು ನ್ಯಾಯ ಅರೆಸುತ್ತಾ ದೆಹಲಿಗೆ...

Download Eedina App Android / iOS

X