ಬಂಟ್ವಾಳ | ಸಾರ್ವಜನಿಕರ ಮನವಿಗೆ ಸ್ಪಂದಿಸಿದ ಕೆಎಸ್‌ಆರ್‌ಟಿಸಿ: ‘ಬೋಳಂಗಡಿ’ಯಲ್ಲಿ ಬಸ್‌ ನಿಲ್ಲಿಸಲು ಆದೇಶ

Date:

Advertisements

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕಲ್ಲಡ್ಕ-ಮೆಲ್ಕಾರ್ ನಡುವೆ ಬರುವ ‘ಬೋಳಂಗಡಿ’ ಪ್ರದೇಶದಲ್ಲಿ ಇನ್ನು ಮುಂದೆ ಎಲ್ಲ ಸಾರಿಗೆ ಬಸ್‌ಗಳು ಕಡ್ಡಾಯವಾಗಿ ನಿಲುಗಡೆ ನೀಡಬೇಕು ಎಂದು ಕೆಎಸ್‌ಆರ್‌ಟಿಸಿ ಪುತ್ತೂರು ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

ಕಲ್ಲಡ್ಕ-ಮೆಲ್ಕಾರ್ ನಡುವೆ ಬರುವ ‘ಬೋಳಂಗಡಿ’ ಪ್ರದೇಶದಲ್ಲಿ ಕೆಎಸ್‌ಆರ್‌ಟಿಸಿ ಬಸ್‌ಗಳು ಸರಿಯಾಗಿ ನಿಲುಗಡೆ ನೀಡುತ್ತಿರಲಿಲ್ಲ. ಇದರಿಂದಾಗಿ ಸಾರ್ವಜನಿಕ ಪ್ರಯಾಣಿಕರು ಹಾಗೂ ವಿದ್ಯಾರ್ಥಿಗಳಿಗೆ ಅನಾನುಕೂಲವಾಗುತ್ತಿತ್ತು. ಇದರಿಂದ ಕೊನೆಗೆ ಬೇಸತ್ತ ಕೆಲವು ಸ್ಥಳೀಯ ನಿವಾಸಿಗಳು ಪುತ್ತೂರು ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿಗಳನ್ನು ಮುಖತಃ ಭೇಟಿಯಾಗಿ ಇತ್ತೀಚೆಗೆ ದೂರನ್ನು ಸಲ್ಲಿಸಿದ್ದಲ್ಲದೇ, ತಮ್ಮ ನೋವನ್ನು ತೋಡಿಕೊಂಡಿದ್ದರು.

ಈ ಮನವಿಗೆ ಸ್ಪಂದಿಸಿದ ಎಸ್‌ಆರ್‌ಟಿಸಿ ಪುತ್ತೂರು ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿಗಳು ಜೂನ್ 18ರಂದು ಆದೇಶ ಹೊರಡಿಸಿ, “ಬೋಳಂಗಡಿ ಪ್ರದೇಶದಲ್ಲಿ ಇನ್ನು ಮುಂದೆ ಎಲ್ಲ ಸಾರಿಗೆ ಬಸ್‌ಗಳು ಕಡ್ಡಾಯವಾಗಿ ನಿಲುಗಡೆ ನೀಡಬೇಕು” ಎಂದು ಕೆಎಸ್‌ಆರ್‌ಟಿಸಿಯ ಪುತ್ತೂರು, ಧರ್ಮಸ್ಥಳ, ಸುಳ್ಯ, ಬಿಸಿ ರೋಡು, ಮಡಿಕೇರಿ ಘಟಕಗಳ ವ್ಯವಸ್ಥಾಪಕರಿಗೆ ಸೂಚನೆ ನೀಡಿದ್ದಾರೆ.

Advertisements
Bolangady

ಅಲ್ಲದೇ ಆದೇಶದಲ್ಲಿ, “ಕಲ್ಲಡ್ಕ-ಮೆಲ್ಕಾರ್ ನಡುವೆ ಬೋಳಂಗಡಿಯೆಂಬ ಸ್ಥಳದಲ್ಲಿ ಸಾರ್ವಜನಿಕ ಪ್ರಯಾಣಿಕರನ್ನು ಹಾಗೂ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ನಿಲುಗಡೆಯನ್ನು ನೀಡದಿರುವ ಬಗ್ಗೆ ಸಾರ್ವಜನಿಕ ಪ್ರಯಾಣಿಕರು ಹಾಗೂ ವಿದ್ಯಾರ್ಥಿಗಳು ದೂರನ್ನು ನೀಡಿರುತ್ತಾರೆ. ಸದರಿ ದೂರನ್ನು ಪರಿಶೀಲಿಸಲಾಗಿದೆ. ಪುತ್ತೂರು- ಸ್ಟೇಟ್ ಬ್ಯಾಂಕ್ ಹಾಗೂ ವಿಟ್ಲ- ಸೇಟ್ ಬ್ಯಾಂಕ್ ಮಾರ್ಗದಲ್ಲಿ ಸಂಚರಿಸುವ ಸಾರಿಗೆಗಳು ಕಲ್ಲಡ್ಕ-ಮೆಲ್ಕಾರ್ ನಡುವೆ ಬರುವ ಬೋಳಂಗಡಿಯೆಂಬ ಸ್ಥಳದಲ್ಲಿ ಕಡ್ಡಾಯವಾಗಿ ನಿಲುಗಡೆಯನ್ನು ಕಲ್ಪಿಸಿ ಸಾರ್ವಜನಿಕ ಪ್ರಯಾಣಿಕರನ್ನು ಹಾಗೂ ವಿದ್ಯಾರ್ಥಿಗಳನ್ನು ಹತ್ತಿಸಿ/ ಇಳಿಸಿ ಕಾರ್ಯಾಚರಣೆ ಮಾಡುವಂತೆ ಆದೇಶಿಸಲಾಗಿದೆ. ಯಾವುದೇ ದೂರುಗಳಿಗೆ ಅವಕಾಶ ವಾಗದಂತೆ ಕಾರ್ಯ ನಿರ್ವಹಿಸಬೇಕು” ಎಂದು ಪುತ್ತೂರು ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

order 2
ಆದೇಶ ಪತ್ರ

ಇದನ್ನು ಓದಿದ್ದೀರಾ? ಮಂಗಳೂರು | ಅಶ್ರಫ್, ರಹ್ಮಾನ್‌ರಿಗೆ ನ್ಯಾಯ ಕೋರಿ ಎಸ್.ಐ.ಓ, ಸೋಲಿಡಾರಿಟಿ ಪ್ರತಿಭಟನೆ

ತಮ್ಮ ಮನವಿಗೆ ಸ್ಪಂದಿಸಿರುವುದಕ್ಕೆ ಬೋಳಂಗಡಿಯ ನಿವಾಸಿಗಳಾದ ನಜೀಬ್ ಪಿ ಡಿ, ಬಿ ಎ ಸಲೀಂ ಬೋಳಂಗಡಿ, ರಫೀಕ್ ಪುತ್ತೂರು ಅವರು ಕೆಎಸ್‌ಆರ್‌ಟಿಸಿ ಪುತ್ತೂರು ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿಗಳಾದ ಬಿ ಎಂ ಜೈಶಾಂತ್ ಕುಮಾರ್ ಅವರಿಗೆ ಧನ್ಯವಾದ ಸಲ್ಲಿಸಿದ್ದಾರೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

ಕೋಲಾರ | ಎಫ್ಆರ್‌ಎಸ್ ನಿಲ್ಲಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

ಬೀದರ್‌ | ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ : ಎರಡು ದಿನ ರಾಷ್ಟ್ರೀಯ ವಿಚಾರ ಸಂಕಿರಣ

ಭಾಲ್ಕಿ ಹಿರೇಮಠ ಸಂಸ್ಥಾನದ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ ...

ಶಿರಸಿ | NWKRTC ವತಿಯಿಂದ ಅಪ್ರೆಂಟಿಸ್ ಹುದ್ದೆಗಳಿಗೆ WALK-IN-INTERVIEW

ಕರ್ನಾಟಕ ರಾಜ್ಯ ವಾಯುವ್ಯ ಸಾರಿಗೆ ಸಂಸ್ಥೆ, ಶಿರಸಿ ವಿಭಾಗದಲ್ಲಿ ವಿವಿಧ ಅಪ್ರೆಂಟಿಸ್...

Download Eedina App Android / iOS

X