ಬಂಟ್ವಾಳ | ಅನುಗ್ರಹ ಮಹಿಳಾ ಕಾಲೇಜಿನಲ್ಲಿ ಮೊಹರಂ‌ ಸಂದೇಶ

Date:

Advertisements

ಬಂಟ್ವಾಳ ತಾಲೂಕಿನ ಕಲ್ಲಡ್ಕದಲ್ಲಿರುವ ಅನುಗ್ರಹ ಮಹಿಳಾ ಕಾಲೇಜಿನ ಮೌಲ್ಯ ಶಿಕ್ಷಣ ವಿಭಾಗದ ವತಿಯಿಂದ ಮೊಹರಂ ಸಂದೇಶ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.

ಕಾಲೇಜಿನ ಪ್ರಾಂಶುಪಾಲರಾದ ಡಾ. ಹೇಮಲತ ಬಿ.ಡಿ ಯವರ ಅಧ್ಯಕ್ಷತೆಯಲ್ಲಿ ಜರಗಿದ ಕಾರ್ಯಕ್ರಮದಲ್ಲಿ ಮೌಲ್ಯ ಶಿಕ್ಷಣ ವಿಭಾಗದ ಉಪನ್ಯಾಸಕಿ ರಾಬಿಯಾ ಅಬ್ದುಲ್ ರಹೀಮ್ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿದರು.

ಹಿಜರಿ ಕ್ಯಾಲೆಂಡರ್‌ನ ಚರಿತ್ರೆಯನ್ನು ವಿವರಿಸುವುದರೊಂದಿಗೆ ಅದರ ಪ್ರಥಮ ತಿಂಗಳಾದ ಮೊಹರಂ ತಿಂಗಳ ಮಹತ್ವವನ್ನು ಸವಿಸ್ತಾರವಾಗಿ ತಿಳಿಸಿದರು.

Advertisements

ಮರ್ದಿತರಿಗೆ ದೇವನ ಕಡೆಯಿಂದ ಸಹಾಯ ಒದಗಿ ಬಂದ ಮಾಸವಾಗಿದೆ ಅದು. ಮರ್ದಿತನು ನಿರಂತರ ಮರ್ದಿಸಲ್ಪಡುತ್ತಲೇ ಇರಲು ಸಾಧ್ಯವಿಲ್ಲ. ಒಂದು ದಿನ ಅವನ ಪಾಲಿಗೆ ಖಂಡಿತ ದೇವನ ಸಹಾಯ ಬಂದೇ ಬರುವುದು. ಅದಕ್ಕಾಗಿ ಸಹನೆಯಿಂದ ಅವನು ಸತ್ಯ ಮತ್ತು ನ್ಯಾಯದ ಮೇಲೆ ಸ್ಥಿರವಾಗಿ ನಿಂತು ಮರ್ದಕನ ವಿರುದ್ಧ ಹೋರಾಡುತ್ತಲೇ ಇರಬೇಕಾಗುತ್ತದೆ ಎಂದು ವಿವರಿಸಿದರು.

ang

ವೇದಿಕೆಯಲ್ಲಿ ಕಾಲೇಜಿನ ಸಲಹಾ ಸಮಿತಿಯ ಕಾರ್ಯದರ್ಶಿ ಶ್ರೀಮತಿ ತಾರಾಕ್ಷಿ, ಪದವಿ ಪೂರ್ವ ವಿಭಾಗದ ಸಂಯೋಜಕಿ ಶ್ರೀಮತಿ ಮಮಿತಾ ಎಸ್.ರೈ, ಪದವಿ ವಿಭಾಗದ ಸಂಯೋಜಕಿ ಶ್ರೀಮತಿ ಆಬಿದಾ ಬಿ.ಉಪಸ್ಥಿತರಿದ್ದರು.ಇ

ಇದನ್ನು ಓದಿದ್ದೀರಾ? ‘ಸಿಗಂದೂರು ಚೌಡೇಶ್ವರಿ ಸೇತುವೆ’ ಹೆಸರಿಗೆ ಸ್ಥಳೀಯರ ಭಾರೀ ವಿರೋಧ; ಸಂಸದ ರಾಘವೇಂದ್ರ ತರಾತುರಿ ಮಾಡಿದ್ದೇಕೆ?

ಕಾಲೇಜಿನ ಸಲಹಾ ಸಮಿತಿಯ ಸದಸ್ಯರಾದ ಶ್ರೀಮತಿ ನವ್ಯ ಮತ್ತು ಶ್ರೀಮತಿ ಶಫೀಕಾ, ಉಪನ್ಯಾಸಕ ವೃಂದದವರು ಮತ್ತು ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ದ್ವಿತೀಯ ವಿಜ್ಞಾನ ವಿಭಾಗದ ಖದೀಜ ಮಾಹಿರಾ ಇವರು ಸ್ವಾಗತಿಸಿ, ವಂದಿಸಿ ಕಾರ್ಯಕ್ರಮವನ್ನು ನಿರೂಪಿಸಿದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಕಲಬುರಗಿ | ಯುವಕರು ಮಾರಕಾಸ್ತ್ರ ಹಿಡಿದ ವಿಡಿಯೊ ವೈರಲ್: ನಾಲ್ವರು ಯುವಕರ ವಿರುದ್ಧ ಎಫ್‌ಐಆರ್

ಕಲಬುರಗಿಯ ದೇವಿ ನಗರದಲ್ಲಿ ನಾಲ್ವರು ಯುವಕರು ಕೈಯಲ್ಲಿ ಮಾರಕಾಸ್ತ್ರಗಳು ಹಿಡಿದು ವಿಡಿಯೋ...

ಸಕಲೇಶಪುರ | ಮಿತಿ ಮೀರಿರುವ ಮಾದಕ ವಸ್ತು ಸೇವನೆ ಆಧುನಿಕತೆಗೆ ಮಾರಕವಾಗಿದೆ: ಗಾಂಧಿವಾದಿ ಪ್ರಸನ್ನ

ಮಾದಕ ವಸ್ತು ಮುಕ್ತ ಭಾರತವನ್ನು ಕಟ್ಟುವ ಸಕಲೇಶಪುರದ ಜನತೆಯ ಜತೆಗೆ ನಾನೂ...

Download Eedina App Android / iOS

X