ಬಂಟ್ವಾಳ | ಚಾಲಕನ ನಿಯಂತ್ರಣ ತಪ್ಪಿ ಅಡಿಕೆ ತೋಟಕ್ಕೆ ನುಗ್ಗಿದ ಕಾರು: ಮಹಿಳೆ ಸಾವು

Date:

Advertisements

ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಪಲ್ಟಿ ಹೊಡೆದು ಆಳದಲ್ಲಿರುವ ಅಡಿಕೆ ತೋಟಕ್ಕೆ ಬಿದ್ದು, ಮಹಿಳೆಯೋರ್ವರು ಮೃತಪಟ್ಟ ಘಟನೆ ಅ. 14 ರ ಸೋಮವಾರ ಮುಂಜಾನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನಲ್ಲಿ ನಡೆದಿದೆ.

ಬಂಟ್ವಾಳ ತಾಲೂಕಿನ ಬಿ.ಸಿ.ರೋಡು- ಬೆಳ್ತಂಗಡಿ ರಾಷ್ಟ್ರೀಯ ಹೆದ್ದಾರಿಯ ಬಾಂಬಿಲ ಎಂಬಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಮೃತಪಟ್ಟ ಮಹಿಳೆಯನ್ನು ಮಂಗಳೂರು ನಗರದ ಕೊಡಿಯಾಲುಬೈಲು ನಿವಾಸಿ ಭಾಗೀರಥಿ (62) ಎಂದು ಗುರುತಿಸಲಾಗಿದೆ.

ಇನ್ನು ಘಟನೆಯಲ್ಲಿ ಕಾರು ಚಲಾಯಿಸುತ್ತಿದ್ದ ರೂಪೇಶ್(39) ಗಂಭೀರವಾಗಿ ಗಾಯಗೊಂಡಿದ್ದು, ಮಂಗಳೂರು ನಗರದ ಯುನಿಟಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ರೂಪೇಶ್ ಅವರ ಪತ್ನಿ ಸುಚಿತ್ರಾ (33) ಅವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Advertisements

“ಪೂಂಜಾಲಕಟ್ಟೆ ಕಡೆಯಿಂದ ಬರುತ್ತಿದ್ದ ಚಾವರ್ ಲೆಟ್ ಸ್ಪಾರ್ಕ್ ಕಾರು ಮುಂಜಾನೆ ಸುಮಾರು 4.30ರ ಸುಮಾರಿಗೆ ಬಾಂಬಿಲ ಮಸೀದಿ ಮುಂಭಾಗದ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ತೋಟಕ್ಕೆ ಉರುಳಿ ಬಿದ್ದಿದೆ. ರೂಪೇಶ್ ಅವರು ತುಮಕೂರು ಜಿಲ್ಲೆಯವರಾಗಿದ್ದು, ಮಂಗಳೂರಿನ ತನ್ನ ಪತ್ನಿ, ಅತ್ತೆಯ ಜೊತೆಗೆ ತುಮಕೂರಿನಿಂದ ಪ್ರಯಾಣ ಬೆಳೆಸಿದ್ದರು. ದಾರಿಯ ಮಧ್ಯೆ ಧರ್ಮಸ್ಥಳ ದೇವಸ್ಥಾನಕ್ಕೆ ತೆರಳಿ ವಾಪಾಸು ಮಂಗಳೂರಿಗೆ ಬರುತ್ತಿದ್ದ ಬಾಂಬಿಲದಲ್ಲಿ ಕಾರು ನಿಯಂತ್ರಣ ತಪ್ಪಿ ಈ ದುರ್ಘಟನೆ ನಡೆದಿದೆ ಎಂದು ಬಂಟ್ವಾಳ ಸಂಚಾರಿ ಪೊಲೀಸರು ಈ ದಿನ.ಕಾಮ್‌ಗೆ ಮಾಹಿತಿ ನೀಡಿದ್ದಾರೆ.

ಮೂಲತಃ ಮಂಗಳೂರು ಕೊಡಿಯಾಲ್ ಬೈಲು ನಿವಾಸಿಯಾದ ಪಿಡಬ್ಲ್ಯೂಡಿ ಇಂಜಿಜಿನಿಯರ್ ಗೋಪಾಲ ಎಂಬುವವರ ಸಹೋದರಿ ಭಾಗೀರಥಿ ಅವರ ಪುತ್ರಿ ಸುಚಿತ್ರಾ ಮತ್ತು ಅಳಿಯ ರೂಪೇಶ್ ಜತೆ ಪ್ರಯಾಣಿಸುತ್ತಿದ್ದರು. ರೂಪೇಶ್ ಅವರು ತುಮಕೂರು ಜಿಲ್ಲೆಯವರಾಗಿದ್ದು, ಭಾಗೀರಥಿ ಅವರು ದಸರಾ ರಜೆಯಲ್ಲಿ ಅಳಿಯ ಮಗಳ ಜೊತೆ ತುಮಕೂರಿಗೆ ಹೋಗಿ, ಬಳಿಕ ಅಲ್ಲಿಂದ ಧರ್ಮಸ್ಥಳ ದೇವಸ್ಥಾನಕ್ಕೆ ತೆರಳಿ ವಾಪಾಸು ಮಂಗಳೂರಿಗೆ ಬರುತ್ತಿದ್ದ ಬಾಂಬಿಲದಲ್ಲಿ ಕಾರು ನಿಯಂತ್ರಣ ತಪ್ಪಿ ಈ ದುರ್ಘಟನೆ ನಡೆದಿದೆ ಎಂದು ತಿಳಿದುಬಂದಿದೆ.

ಇದನ್ನು ಓದಿದ್ದೀರಾ? ದೇಶದ ಜನ ಜಾಗೃತ ಪ್ರಜೆಗಳಾಗದಿದ್ದಲ್ಲಿ ಪ್ರಜಾಪ್ರಭುತ್ವ ಯಶಸ್ಸಾಗಲು ಸಾಧ್ಯವಿಲ್ಲ: ನಿಕೇತ್ ರಾಜ್ ಮೌರ್ಯ

ನಿಯಂತ್ರಣ ತಪ್ಪಿದ ರಭಸಕ್ಕೆ ಕಾರು ಹೆದ್ದಾರಿಯಿಂದ ಸುಮಾರು 200 ಮೀಟರ್ ದೂರವಿದ್ದ ಅಡಿಕೆ ತೋಟಕ್ಕೆ ನುಗ್ಗಿದ್ದು, ತೋಟದಲ್ಲಿದ್ದ ಮಣ್ಣಿನ ದಿಬ್ಬವೊಂದರ ಮೇಲೆ ಬಿದ್ದಿದೆ. ಘಟನೆಯಲ್ಲಿ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.

ಘಟನಾ ಸ್ಥಳಕ್ಕೆ ಬಂಟ್ವಾಳ ಸಂಚಾರಿ ಠಾಣೆಯ ಪೊಲೀಸರು ಭೇಟಿ ನೀಡಿದ್ದು, ಘಟನೆಯ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಫೋಟೋ, ವಿಡಿಯೋ ಕೃಪೆ: ಮೊಹಮ್ಮದ್ ರಾಝಿಕ್, ಎನ್‌ ಸಿ ರೋಡ್

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X