ಗದಗ | ಭಾರತದಲ್ಲಿ ಸಮಾನತೆ ಸಾರಿದವರ ಬಸವಣ್ಣ, ಅಂಬೇಡ್ಕರ್: ಡಿ ಮಾಳಮ್ಮ

Date:

Advertisements
  • ದೇವದಾಸಿ ಮಹಿಳೆಯರ ವಿಮೋಚನಾ ಸಂಘದಿಂದ ಸರಳ ವಿವಾಹ
  • ದೇವದಾಸಿ ಕುಟುಂಬಕ್ಕೆ ಭೂಮಿ‌, ಮನೆ, ಮಕ್ಕಳಿಗೆ ಉಚಿತ ಶಿಕ್ಷಣ ನೀಡಿ

12ನೇ ಶತಮಾನದಲ್ಲಿ ಅಸಮಾನತೆ, ಜಾತಿ ಅಸಮಾನತೆಯನ್ನು ತೊಲಗಿಸಿ ಬಸವಣ್ಣ ಸಮಾನತೆ ಸಾರಿದರೆ, ಡಾ. ಬಿ ಆರ್ ಅಂಬೇಡ್ಕರ್ ಮನುವಾದಿಗಳ ವಿರುದ್ಧ ಹೋರಾಟ ಮಾಡಿದರು ಎಂದು ಕರ್ನಾಟಕ ದೇವದಾಸಿ ಮಹಿಳೆಯರ ವಿಮೋಚನಾ ರಾಜ್ಯ ಪ್ರಧಾನ ಕಾರ್ಯದರ್ಶಿ ಡಿ ಮಾಳಮ್ಮ ಹೇಳಿದರು.

ಕರ್ನಾಟಕ ದೇವದಾಸಿ ಮಹಿಳೆಯರ ವಿಮೋಚನಾ ಸಂಘದ ತಾಲೂಕು ಸಮಿತಿ ಸಹಯೋಗದಲ್ಲಿ ಡಾ. ಬಿ ಆರ್ ಅಂಬೇಡ್ಕರ್ ಮತ್ತು ಬಸವ ಜಯಂತಿ ಅಂಗವಾಗಿ ಗದಗ ಜಿಲ್ಲೆಯ ರೋಣ ಪಟ್ಟಣದ ಅಕ್ಕಮಹಾದೇವಿ ಕಲ್ಯಾಣ ಮಂಟಪದಲ್ಲಿ ಸರಳ ಸಾಮೂಹಿಕ ವಿವಾಹ ಏರ್ಪಡಿಸಲಾಗಿತ್ತು.

ಕಾರ್ಯಕ್ರಮದ ಮುಖ್ಯ ಅತಿಥಿ ಡಿ ಮಾಳಮ್ಮ ಮಾತನಾಡಿ, “ಸಮಾಜದಲ್ಲಿ ಜಾತಿವ್ಯವಸ್ಥೆಯನ್ನು ತೀವ್ರವಾಗಿ ಪ್ರಶ್ನೆ ಮಾಡಿದವರೆಂದರೆ ಬಸವಣ್ಣ ಮತ್ತು ಅಂಬೇಡ್ಕರ್, ಇವರ ಜಯಂತಿ ಪ್ರಯುಕ್ತ ಸಾಮೂಹಿಕ ವಿವಾಹ ಸಮಾರಂಭ ಹಮ್ಮಿಕೊಳ್ಳಲಾಗಿದ್ದು, ಸಮಾಜದಲ್ಲಿ ಸಮಾನತೆ ತರುವಲ್ಲಿ ಈ ಕಾರ್ಯಕ್ರಮ ಮಹತ್ವದ ಕಾರ್ಯ ಶ್ಲಾಘನೀಯ” ಎಂದರು.

Advertisements

ಈ ಸುದ್ದಿ ಓದಿದ್ದೀರಾ? :ಸಕಲೇಶಪುರ | ಲಂಚ ಮುಕ್ತ ಕರ್ನಾಟಕ ನಿರ್ಮಾಣಕ್ಕೆ ಕೆಆರ್‌ಎಸ್‌ ಗೆಲ್ಲಿಸಿ: ರವಿ ಕೃಷ್ಣಾರೆಡ್ಡಿ

Advertisements
Bose Military School

ದಲಿತರು ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕವಾಗಿ ಶೋಷಣೆಗೆ ಒಳಗಾದವರು. ಇಂದಿಗೂ ಇವರಿಗೆ ಊಳಲು ಭೂಮಿ ಇಲ್ಲ. ಸಮಾಜದಲ್ಲಿ ಅಂದಿನಿಂದಲೂ ಈವರೆಗೂ ಒಂದಲ್ಲ ಒಂದು ರೀತಿಯಲ್ಲಿ ಶೋಷಣೆಗೆ ಒಳಗಾಗುತ್ತಲೇ ಇದ್ದಾರೆ. ಅಷ್ಟೇ ಅಲ್ಲದೇ ದೇವದಾಸಿ ಮಹಿಳೆಯರು ಅನೇಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ದೇವದಾಸಿ ಕುಟುಂಬಕ್ಕೆ ಭೂಮಿ‌, ಮನೆ ಹಾಗೂ ಅವರ ಮಕ್ಕಳಿಗೆ ಉಚಿತ ಶಿಕ್ಷಣವನ್ನು ಸರ್ಕಾರ ಕೊಡಬೇಕು” ಎಂದು ಒತ್ತಾಯಿಸಿದರು.

ಕಾರ್ಯಕ್ರಮದಲ್ಲಿ ದಿವ್ಯ ಸಾನಿಧ್ಯ ವಹಿಸಿದ ಬಸವಲಿಂಗ ಸ್ವಾಮಿಜಿ, ನವ ಜೋಡಿಗಳಿಗೆ ಬಸವಣ್ಣ ಅವರ ವಚನ ಬೋಧಿಸಿದರು. ಎಂ ಎಸ್‌ ಹಡಪದ ಪ್ರಸ್ತಾವಿಕ ಮಾತುಗಳನ್ನಾಡಿದರು. ವೇದಿಕೆಯಲ್ಲಿ ಪೀರು ರಾಠೋಡ್, ಬಾಲು ರಾಠೋಡ್, ಮಾರುತಿ ಚಟಗಿ ಮಹೇಶ ಹಿರೇಮಠ ಹಾಗೂ ಕಾರ್ಮಿಕ ಸಂಘದ ಮುಖಂಡರು ಉಪಸ್ಥಿತರಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

Advertisements
Advertisements
Advertisements

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೇವನಹಳ್ಳಿ ರೈತ ಹೋರಾಟ: ಹತ್ತು ದಿನಗಳ ಗಡುವು ಪಡೆಯುವುದೇ ಸರ್ಕಾರ?

ದೇವನಹಳ್ಳಿ ಭೂಸ್ವಾಧೀನ ಕುರಿತು ಚನ್ನರಾಯಪಟ್ಟಣ ರೈತರ ಹೋರಾಟ ಮತ್ತು ಬೇಡಿಕೆಗಳ ಕುರಿತಂತೆ...

ಉಡುಪಿ | “ಸರ್ವರಿಗೂ ಸೂರು” ಮನೆ ನಿರ್ಮಾಣಕ್ಕೆ ಸಹಾಯಧನ – ಅರ್ಜಿ ಆಹ್ವಾನ

ಸರ್ಕಾರವು ಪ್ರಧಾನ ಮಂತ್ರಿ ಆವಾಸ್ ಯೋಜನೆ (ನಗರ) 2.0 ಯೋಜನೆಯಡಿ “ಸರ್ವರಿಗೂ...

ಉಡುಪಿ | ಮಹಿಳೆಯರನ್ನು ಮಾತೆ ಎಂದು ಸಂಭೋಧಿಸುವ ಬಿಜೆಪಿಗರ ನಿಜ ಬಣ್ಣ ಪದೇ ಪದೇ ಬಯಲಾಗುತ್ತಿದೆ

ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ...

ಶಿಕ್ಷಕರ ಖಾಲಿ ಹುದ್ದೆಗಳ ಭರ್ತಿ ಆಗ್ರಹಿಸಿ ಕಲಬುರಗಿ, ಯಾದಗಿರಿಯಲ್ಲಿ ಪ್ರತಿಭಟನೆ

ಸರ್ಕಾರಿ ಶಾಲೆಗಳಿಗೆ ಖಾಲಿ ಇರುವ ಶಿಕ್ಷಕರ ಹುದ್ದೆಗಳ ಭರ್ತಿ, ಮೂಲಸೌಕರ್ಯ ಸೇರಿದಂತೆ...

Download Eedina App Android / iOS

X