ಶಕ್ತಿಕೇಂದ್ರ ವಿಧಾನಸೌಧ ಎದುರು ಬಸವಣ್ಣ-ಕೆಂಪೇಗೌಡ ಪ್ರತಿಮೆ ಅನಾವರಣ

Date:

Advertisements
  • ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಂದ ಭಾನುವಾರ ಪ್ರತಿಮೆಗಳ ಅನಾವರಣ
  • ಕೆಂಪೇಗೌಡ, ಬಸವೇಶ್ವರ ಆದರ್ಶದಡಿ ಆಡಳಿತ ಮಾಡುತ್ತಿದ್ದೇವೆ: ಬೊಮ್ಮಾಯಿ

ನಾಡಿನ ಶಕ್ತಿಕೇಂದ್ರ ವಿಧಾನಸೌಧದ ಎದುರು ಸ್ಥಾಪಿಸಲಾಗಿರುವ ಜಗಜ್ಯೋತಿ ಬಸವಣ್ಣ ಮತ್ತು ನಾಡಪ್ರಭು ಕೆಂಪೇಗೌಡರ ಪ್ರತಿಮೆಗಳನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾನುವಾರ ಸಂಜೆ ಅನಾವರಣಗೊಳಿಸಿದರು.

ಬಳಿಕ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, “ಕೆಂಪೇಗೌಡರು ಮತ್ತು ಬಸವೇಶ್ವರರ ಆದರ್ಶಗಳ ಆಧಾರದಲ್ಲಿ ನಾವು ಆಡಳಿತ ಮಾಡುತ್ತಿದ್ದೇವೆ. ಈ ನಾಡಿನ ಶ್ರೇಷ್ಠ ಆಡಳಿತಾಗಾರರು, ತತ್ವಜ್ಞಾನಿಗಳು ಅವರಾಗಿದ್ದರು. ವಿದಾನಸೌಧದ ಮುಂದೆ ಈ ಇಬ್ಬರು ನಾಯಕರ ಪ್ರತಿಮೆ ಅನಾವರಣ ಬಹಳ ದಿನಗಳ ಹಿಂದೆ ಆಗಬೇಕಿತ್ತು. ಅದಕ್ಕೆ ನಾನು ಯಾರನ್ನು ದೂಷಿಸುವುದಿಲ್ಲ” ಎಂದರು.

“ಬಸವೇಶ್ವರರ ಪ್ರತಿಮೆ ವಿಧಾನಸೌಧದ ಮುಂದೆ ಅಷ್ಟೆ ಅಲ್ಲ, ಹೈಕೋರ್ಟ್ ಎದುರಿಗಿದೆ. ನಾಡ ಪ್ರಭು ‌ಕೆಂಪೇಗೌಡರು ಯಾವುದೇ ನದಿ ಇಲ್ಲದ ಪ್ರದೇಶದಲ್ಲಿ ನಗರ ನಿರ್ಮಾಣ ಮಾಡಿದ್ದಾರೆ. ಎಲ್ಲ ಸಮುದಾಯಗಳಿಗೆ ಮಾರುಕಟ್ಟೆ ನಿರ್ಮಿಸಿ, ನಿಜವಾಗಿ ಬಸವಣ್ಣನವರ ಆದರ್ಶಗಳನ್ನು ಜಾರಿಗೆ ತಂದವರು ಕೆಂಪೇಗೌಡರು” ಎಂದು ಬಣ್ಣಿಸಿದರು.

Advertisements

“ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಇಡೀ ದೇಶವನ್ನು ಮತ್ತೆ ಒಗ್ಗೂಡಿಸುವ ಕೆಲಸ ಮಾಡಿದ್ದಾರೆ. ನಮ್ಮ ರಾಜ್ಯ, ಆಂಧ್ರಪ್ರದೇಶ, ಓರಿಸ್ಸಾಗಳಲ್ಲಿ ನಕ್ಸಲರ ಹಾವಳಿ ಇತ್ತು. ಅಲ್ಲದೇ ಅನೇಕ‌ ವಿಚಿದ್ರಕಾರಿ ಶಕ್ತಿಗಳನ್ನು ದಮನ ಮಾಡಿ ಇಡಿ ದೇಶವನ್ನು ಅಭಿವೃದ್ಧಿ ಪತದಲ್ಲಿ ತೆಗೆದುಕೊಂಡು ಹೋಗುತ್ತಿದ್ದಾರೆ” ಎಂದರು.

ಈ ಸಂದರ್ಭದಲ್ಲಿಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ, ಡಾ. ನಿರ್ಮಾಲಾನಂದ ಸ್ವಾಮೀಜಿ, ತುಮಕೂರು ಶಿವಕುಮಾರ ಸ್ವಾಮೀಜಿ, ವಿಧಾನಸಭೆಯ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ವಿಧಾನ ಪರಿಷತ್ ಸಭಾಧ್ಯಕ್ಷ ಬಸವರಾಜ ಹೊರಟ್ಟಿ, ಸಚಿವರಾದ ಆರ್. ಅಶೋಕ, ಗೋವಿಂದ ಕಾರಜೋಳ, ಮುರಗೇಶ ನಿರಾಣಿ, ಸಿ ಸಿ ಪಾಟೀಲ, ಅಶ್ವತ್ಥನಾರಾಯಣ ಸೇರಿದಂತೆ ಇತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X