ಸಮೀಕ್ಷೆ ನೆಪದಲ್ಲಿ ಬಿಬಿಎಂಪಿ ಕಚೇರಿಗಳು ಖಾಲಿ ಖಾಲಿ, ಸಾರ್ವಜನಿಕ ಕೆಲಸಗಳು ಅಸ್ತವ್ಯಸ್ತ : ಆಮ್ ಆದ್ಮಿ ಪಕ್ಷದಿಂದ ಗಂಭೀರ ಆರೋಪ

Date:

Advertisements

ಕಳೆದ 15 ದಿನಗಳಿಂದ ಸರ್ಕಾರ ನಡೆಸುತ್ತಿರುವ ಜಾತಿ ಸಮೀಕ್ಷೆಯ ನೆಪದಲ್ಲಿ ಬೆಂಗಳೂರಿನ ಎಲ್ಲಾ ನಗರ ಪಾಲಿಕೆ ಕಚೇರಿಗಳಲ್ಲಿನ ಸಿಬ್ಬಂದಿಗಳು ಕೆಲಸಕ್ಕೆ ಹಾಜರಾಗದೆ ಕಚೇರಿಗಳು ಸಂಪೂರ್ಣ ಬಣಗುಡುತ್ತಿವೆ. ಸಾರ್ವಜನಿಕರು ತಮ್ಮ ಕೆಲಸ ಕಾರ್ಯಗಳಿಗಾಗಿ ಅಲೆದಾಡುವಂತಹ ಪರಿಸ್ಥಿತಿ ಬಂದೊದಗಿದೆ ಎಂದು ಆಮ್‌ ಆದ್ಮಿ ಪಕ್ಷ ಗಂಭೀರ ಆರೋಪ ಕೂಡಲೇ ಮುಖ್ಯ ಆಯುಕ್ತರು ಇತ್ತ ಕಡೆ ಗಮನಹರಿಸಿ ಸಾರ್ವಜನಿಕ ಕೆಲಸಗಳು ಮುಂದುವರಿಯುವಂತೆ ಕ್ರಮ ತೆಗೆದುಕೊಳ್ಳಬೇಕೆಂದು ಆಮ್ ಆದ್ಮಿ ಪಕ್ಷ ಇಂದು ಆಗ್ರಹಿಸಿತು.

ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ನಗರಪಾಲಿಕೆ ಕಚೇರಿಯಲ್ಲಿ ಪಕ್ಷದ ಮುಖಂಡ ಅಣ್ಣ ನಾಯಕ್ ಫ್ಯಾಕ್ಟ್ ಚೆಕ್ ಮಾಡಿರುವ ವಿಡಿಯೋ ಒಂದನ್ನು ಹಂಚಿಕೊಂಡಿದ್ದಾರೆ. ಸಮೀಕ್ಷೆಗಾಗಿ ಸರ್ಕಾರ ಶಿಕ್ಷಣ ಇಲಾಖೆಯ ಸಿಬ್ಬಂದಿಗಳನ್ನು ನೇಮಿಸಿದೆ. ಆದರೆ ಬಿಬಿಎಂಪಿ ಸಿಬ್ಬಂದಿಗಳು ಕಳೆದ ಹಲವು ದಿನಗಳಿಂದ ಕಚೇರಿಗೆ ಬಾರದೆ ಗೈರು ಹಾಜರಾಗಿ ಸಾರ್ವಜನಿಕ ಕೆಲಸ ಕಾರ್ಯಗಳಿಗೆ ಭಂಗ ಉಂಟು ಮಾಡುತ್ತಿದ್ದಾರೆ. ಕೂಡಲೇ ಜಿಬಿಎ ಮುಖ್ಯ ಆಯುಕ್ತರು ಹಾಗೂ ನಗರ ಪಾಲಿಕೆ ಆಯುಕ್ತರುಗಳು ತಮ್ಮ ಸಿಬ್ಬಂದಿಗಳಿಗೆ ಎಚ್ಚರಿಕೆಯನ್ನು ನೀಡಿ ಕಚೇರಿಗಳಿಗೆ ಹಾಜರಾಗುವಂತೆ ಸೂಚಿಸಬೇಕು, ಹಾಗೂ ಸಿಬ್ಬಂದಿಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳ ಬೇಕೆಂದು ಆಗ್ರಹಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಸಂಸದ ರಾಘವೇಂದ್ರ, ವಿಜಯೇಂದ್ರ ಯಾವ ಕೋಟದಲ್ಲಿ ಹುದ್ದೆ ಪಡೆದಿದ್ದಾರೆ? ಆಯನೂರು ಮಂಜುನಾಥ ಪ್ರಶ್ನೆ

ಶಿವಮೊಗ್ಗ, ಸಂಸದ ರಾಘವೇಂದ್ರ ಮೊದಲ ಬಾರಿ ಯಾವ ಕೋಟದಲ್ಲಿ ಲೋಕಸಭಾ ಸದಸ್ಯರಾಗಿದ್ದಾರೆ,...

ಶಿವಮೊಗ್ಗ | ಅ. 9ರಿಂದ ವಿಮಾನ ನಿಲ್ದಾಣದ ಮುಖ್ಯದ್ವಾರದಲ್ಲಿ ಅನಿರ್ದಿಷ್ಟವಧಿ ಧರಣಿ

ಶಿವಮೊಗ್ಗ, ತಾಲೂಕಿನ ನಿಧಿಗೆ ಹೋಬಳಿ ಸೋಗಾನೆ ಗ್ರಾಮದ ವಿಮಾನ ನಿಲ್ದಾಣಕ್ಕೆ ಜಮೀನು...

ಕೊರಟಗೆರೆ | ರಾಮಾಯಣ ಮಹಾಕಾವ್ಯ ಬೇರೆ ದೇಶದಲ್ಲಿಯೂ ಪ್ರಚಲಿತದಲ್ಲಿದೆ : ಗೋಪಿನಾಥ್

ನಿಸರ್ಗದೊಂದಿಗೆ ನಿಕಟ ಸಂಪರ್ಕ ಹೊಂದಿದ್ದ ಮಹರ್ಷಿ ವಾಲ್ಮೀಕಿ ಅವರಲ್ಲಿ ಕವಿತ್ವ ಭಾವನೆ...

ವೀಲ್ ಚೇರ್ ಬ್ಯಾಸ್ಕೆಟ್ ಬಾಲ್ ರಾಜ್ಯ ತಂಡಕ್ಕೆ ಗುಬ್ಬಿಯ ಗಂಗರಾಜು ಆಯ್ಕೆ

 ಗೋವಾ ರಾಜ್ಯದಲ್ಲಿ ನಡೆದಿರುವ ಇಂಟರ್ ನ್ಯಾಷನಲ್ ಪರ್ಪಲ್ ಫೆಸ್ಟ್ 2025 ಹಿನ್ನಲೆ...

Download Eedina App Android / iOS

X