ಬೆಂಗಳೂರು | ಭಾರೀ ಮಳೆಗೆ ಮನೆಗೆ ನುಗ್ಗಿದ ನೀರು; 63 ನಿವಾಸಿಗಳಿಗೆ ಶೀಘ್ರ ಪರಿಹಾರ: ಬಿಬಿಎಂಪಿ

Date:

Advertisements

ಬೆಂಗಳೂರು ನಗರದಲ್ಲಿ ಶನಿವಾರ ಮತ್ತು ಭಾನುವಾರ ಸುರಿದ ಭಾರೀ ಮಳೆಯಿಂದಾಗಿ ಹಾನಿಗೊಳಗಾದ ಮನೆಗಳಿಗೆ ಶೀಘ್ರವೇ ಪರಿಹಾರ ನೀಡಲಾಗುವುದು ಎಂದು ಬಿಬಿಎಂಪಿ ತಿಳಿಸಿದೆ. ಪಾಲಿಕೆ ತನ್ನ ನಿಧಿಯಿಂದ ನೇರ ಲಾಭ ವರ್ಗಾವಣೆಯಡಿ ಹಾನಿಗೊಂಡ ಪ್ರತಿ ಮನೆಗೆ ಹತ್ತು ಸಾವಿರ ರೂಪಾಯಿ ಪರಿಹಾರ ನೀಡಲಿದೆ ಎಂದು ತಿಳಿಸಿದರು.

ಮಳೆಯಿಂದಾಗಿ ಮಹಾಲಕ್ಷ್ಮಿ ಲೇಔಟ್‌ನಲ್ಲಿ ಅಧಿಕ ಮನೆಗಳಿಗೆ ಹಾನಿಯಾಗಿದೆ. ಯಲಹಂಕ ವಲಯದ ಕೇಂದ್ರೀಯ ವಿಹಾರ್ ಅಪಾರ್ಟ್‌ಮೆಂಟ್ ಸಮುಚ್ಚಯದಲ್ಲಿಯೂ ಹಲವು ಮನೆಗಳಿಗೆ ನೀರು ನುಗ್ಗಿದೆ. ಒಟ್ಟಾಗಿ 63 ಮನೆಗಳಿಗೆ ಮಳೆ ನೀರು ನುಗ್ಗಿದೆ. ಶೀಘ್ರವೇ ಈ ಮನೆಗಳಿಗೆ ಪರಿಹಾರ ನೀಡುವಂತೆ ವಲಯ ಆಯುಕ್ತರಿಗೆ ಸೂಚಿಸಲಾಗಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಸೋಮವಾರ ತಿಳಿಸಿದ್ದಾರೆ.

“ಕೇಂದ್ರೀಯ ವಿಹಾರದಲ್ಲಿರುವ ಅಪಾರ್ಟ್‌ಮೆಂಟ್ ಸಮುಚ್ಚಯವು ಯಲಹಂಕ ಕೆರೆಯ ಹೊರಗಿದೆ. ಸಮುಚ್ಚಯದ ಗೋಡೆಯು ಕುಸಿದು ಬಿದ್ದು ಹಲವು ಮನೆಗಳಿಗೆ ನೀರು ನುಗ್ಗಿದೆ. ನೀರನ್ನು ತೆಗೆಯುವ ಕಾರ್ಯ ಮಾಡಲಾಗುತ್ತಿದೆ. ಮಹಾಲಕ್ಷ್ಮಿ ಲೇಔಟ್‌ನಲ್ಲಿ 63 ಮನೆಗಳು ಜಲಾವೃತವಾಗಿದೆ” ಎಂದು ಮಾಹಿತಿ ನೀಡಿದರು.

Advertisements

ಇದನ್ನು ಓದಿದ್ದೀರಾ? ಕರ್ನಾಟಕದ 15 ಜಿಲ್ಲೆಗಳಲ್ಲಿ ಅಕ್ಟೋಬರ್ 10ರವರೆಗೂ ಧಾರಾಕಾರ ಮಳೆ: ಹವಾಮಾನ ಇಲಾಖೆ

“ಯಲಹಂಕದ ಅಪಾರ್ಟ್‌ಮೆಂಟ್‌ ಕೇಂದ್ರೀಯ ವಿಹಾರ ಕೆರೆ ದಂಡೆಯ ಕೆಳಗಿದೆ. ಅಲ್ಲಿ ಬಿಬಿಎಂಪಿ ಮಳೆನೀರು ಚರಂಡಿ ನಿರ್ಮಿಸಿದೆ. ಆದರೂ ಭಾರೀ ಮಳೆಯಿಂದಾಗಿ ಪ್ರದೇಶವು ಜಲಾವೃತವಾಗಿದೆ. ನಾವು ಸಮಸ್ಯೆಯನ್ನು ಪರಿಹರಿಸಲು ಪ್ರಯತ್ನಿಸುತ್ತೇವೆ” ಎಂದು ಬಿಬಿಎಂಪಿ ಮುಖ್ಯ ಆಯುಕ್ತರು ತಿಳಿಸಿದರು.

ಶನಿವಾರ ಬೆಂಗಳೂರಿನಲ್ಲಿ 115 ಮಿ.ಮೀ ಮಳೆ ಆಗಿತ್ತು. ಭಾನುವಾರವೂ ನಗರದಲ್ಲಿ ಭಾರೀ ಮಳೆ ಸುರಿದಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

Download Eedina App Android / iOS

X