ಮೊಳಕಾಲ್ಮೂರು | ಮಧ್ಯರಾತ್ರಿ ಆಂಜನೇಯ ದೇವಾಲಯಕ್ಕೆ ನುಗ್ಗಿದ ಕರಡಿ; ಗ್ರಾಮಸ್ಥರಲ್ಲಿ ಆತಂಕ

Date:

Advertisements

ಹಳ್ಳಿಯಲ್ಲಿರುವ ಆಂಜನೇಯ ಸ್ವಾಮಿ ದೇವಾಲಯಕ್ಕೆ ಕರಡಿಯೊಂದು ನಡುರಾತ್ರಿಯಲ್ಲಿ ಬಂದು ಸುತ್ತಾಡಿ ಹೋಗಿರುವ ಘಟನೆ ನಡೆದಿದೆ.

ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ಬೊಮ್ಮಲಿಂಗನಹಳ್ಳಿ ಹನುಮಪ್ಪನ ಗುಡಿಗೆ ಶನಿವಾರ ರಾತ್ರಿ 11ಕ್ಕೆ ಕರಡಿ ಬಂದು ಓಡಾಡಿದ್ದು , ಗ್ರಾಮದ ಜನರನ್ನು ಆತಂಕಕ್ಕೀಡು ಮಾಡಿದೆ. ಕೆಲವರು ಈ ದೃಶ್ಯವನ್ನು ಮರೆಯಲ್ಲಿ ನಿಂತು ಮೊಬೈಲ್ ಮೂಲಕ ಸೆರೆ ಹಿಡಿದಿದ್ದಾರೆ.

ಹನುಮನ ಗುಡಿಗೆ ಬಂದಿರುವ ಕರಡಿ ನೋಡಿ ನಾಯಿಗಳು ಶಬ್ದ ಮಾಡಲು ಆರಂಭಿಸಿವೆ. ಇದ್ಯಾವುದನ್ನೂ ಲೆಕ್ಕಿಸದೆ ಆವರಣದಲ್ಲಿ ಅಡ್ಡಾಡಿ, ನಂತರ ಗುಡಿಯಲ್ಲಿರುವ ದೀಪದಲ್ಲಿನ ಎಣ್ಣೆ ಕುಡಿದಿದ್ದು, ಈ ದೃಶ್ಯ ಮೊಬೈಲ್‍ನಲ್ಲಿ ಸೆರೆಯಾಗಿದೆ.

Advertisements

ಊರ ಒಳಗೆ ಅದರಲ್ಲೂ ದೇವಸ್ಥಾನಕ್ಕೆ ಕರಡಿ ಬಂದು ಹೋಗಿರುವ ಘಟನೆಯಿಂದ ಗ್ರಾಮಸ್ಥರು ಆತಂಕಕ್ಕೀಡಾಗಿದ್ದಾರೆ. ಗ್ರಾಮದ ಮುಖ್ಯರಸ್ತೆಯ ಪಕ್ಕದಲ್ಲಿರುವ ಆಂಜಿನೇಯಸ್ವಾಮಿ ದೇವಸ್ಥಾನಕ್ಕೆ ಬಂದು ಕೆಲವು ಗಂಟೆಗಳ ಕಾಲ ಅಲ್ಲಿಯೇ ಇರುವುದನ್ನು ನೋಡಿದ ಗ್ರಾಮಸ್ಥರು ರಾತ್ರಿಯಿಡೀ ಕರಡಿಯನ್ನು ಓಡಿಸಲು ಪ್ರಯತ್ನ ಪಟ್ಟರು ಆಗಿಲ್ಲ. ಈ ಕರಡಿಗೆ ಕಿವಿ ಕೇಳಿಸುವುದಿಲ್ಲ ಎಂದು ಸ್ಥಳೀಯರು ಹೇಳುತ್ತಿದ್ದು, ಇದೇ ಕರಡಿ ಈಗಾಗಲೇ ಐದಾರು ಬಾರೀ ಗ್ರಾಮದೊಳಗೆ ನುಗ್ಗಿದೆ ಎಂದು ತಿಳಿಸಿದ್ದಾರೆ.

ಜನರು ಜೋರಾಗಿ ಕೂಗಿ, ಅರಚಾಡಿದರೂ, ನಾಯಿಗಳು ಬೊಗಳಿದರು ಸಹ ಇದ್ಯಾವುದನ್ನು ಲೆಕ್ಕಿಸದೆ ತನ್ನ ಪಾಡಿಗೆ ಅದು ರಾತ್ರಿಯಿಡೀ ಊರಿನಲ್ಲಿ ಬೀಡು ಬಿಡುತ್ತದೆ. ಹಲವು ಬಾರಿ ಇಲ್ಲಿ ಕರಡಿ ಕಾಣಿಸಿಕೊಂಡಿದ್ದು, ಅರಣ್ಯ ಇಲಾಖೆ ಅಧಿಕಾರಿಗಳಿಗೆ ಹಿಡಿಯಲು ಮನವಿ ಮಾಡಿದರೂ ಕ್ರಮ ಕೈಗೊಂಡಿಲ್ಲ ಎಂದು ದೂರಿದ್ದಾರೆ.

ಅನೇಕ ಸಲ ದೇವಸ್ಥಾನಗಳಲ್ಲಿ ವೃದ್ಧರು ಮಲಗುತ್ತಾರೆ.
ಆ ಸಮಯದಲ್ಲಿ ಯಾರೂ ಗುಡಿಯಲ್ಲಿ ಇರದಿದ್ದ ಕಾರಣ ಅಪಾಯವಾಗಿಲ್ಲ. ಸಾಮಾನ್ಯವಾಗಿ ಕರಡಿಗಳು ಹಸಿವಿನಿಂದ ಇದ್ದಾಗ, ಸಿಟ್ಟಿಗೆದ್ದಾಗ ದಾಳಿ ಮಾಡುವ ಸಾಧ್ಯತೆ ಹೆಚ್ಚು.‌ ಹೀಗಿದ್ದಾಗ ಕರಡಿ ಬಂದು ಹೋಗುವುದರಿಂದ ಜೀವಕ್ಕೆ ಅಪಾಯ ಕಟ್ಟಿಟ್ಟಬುತ್ತಿ ಎನ್ನುತ್ತಾರೆ ಗ್ರಾಮಸ್ಥರು.

ಆಹಾರ ಅರಸಿ ರಾತ್ರಿ ವೇಳೆಯಲ್ಲಿ ಗ್ರಾಮದೊಳಗೆ ನುಗ್ಗುವ ಈ ದೊಡ್ಡ ಕರಡಿಯ ಸಂಚಾರದಿಂದ ಗ್ರಾಮಸ್ಥರು ನಿದ್ದೆಗೆಟ್ಟು ಆತಂಕಕ್ಕೆ ಒಳಗಾಗಿದ್ದಾರೆ.

ಇತ್ತೀಚೆಗೆ ಚಳ್ಳಕೆರೆ ತಾಲೂಕಿನಲ್ಲಿ ದನ ಮೇಯಿಸುತ್ತಿದ್ದ ವೃದ್ಧನ ಮೇಲೆ ಕರಡಿ ದಾಳಿ ನಡೆಸಿ ಮುಖವನ್ನೆಲ್ಲಾ ಕಿತ್ತು ಹಾಕಿರುವ ಭೀಕರ ಘಟನೆ ನಡೆದಿತ್ತು. ನೋಡಲು ಸೌಮ್ಯ, ವಿಶೇಷ ಎನಿಸಿದರೂ ಬಹಳಷ್ಟು ಅಪಾಯಕಾರಿ ಪ್ರಾಣಿಯಾಗಿರುವುದರಿಂದ ಕರಡಿಯನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಸೆರೆ ಹಿಡಿದು, ದೂರ ಸಾಗಿಸಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಅನ್ಯಾಯ ಸರಿಪಡಿಸಿ; ಮಹಾನಾಯಕ ದಲಿತ ಸೇನೆ

ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಪ್ರತ್ಯೇಕ ಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯ ಎತ್ತಿ...

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

Download Eedina App Android / iOS

X