ವಿಪಕ್ಷ ನಾಯಕ ಆಯ್ಕೆ | ಕ್ಷಣಕ್ಕೊಂದು ಹೇಳಿಕೆ, ಮನಸಲ್ಲೇ ಮಂಡಿಗೆ ತಿನ್ನುತ್ತಿದ್ದಾರಾ ಕುಮಾರಸ್ವಾಮಿ?

Date:

ವಿಪಕ್ಷ ನಾಯಕ ಆಯ್ಕೆ, ಎನ್‌ಡಿಎ ಮೈತ್ರಿಕೂಟ ಸೇರುವುದು ಹಾಗೂ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಜೊತೆ ಮೈತ್ರಿ ಮಾಡಿಕೊಳ್ಳುವ ವಿಚಾರವಾಗಿ ಮಾಜಿ ಮುಖ್ಯಮಂತ್ರಿ ಎಚ್‌ ಡಿ ಕುಮಾರಸ್ವಾಮಿ ಅವರು ತಾವು ತೆರಳುವ ಕಡೆ ಮಾಧ್ಯಮ ಪ್ರತಿನಿಧಿಗಳಿಗೆ ಭಿನ್ನ ಭಿನ್ನವಾಗಿ ಹೇಳಿಕೆ ನೀಡುತ್ತಿದ್ದಾರೆ.

- Advertisement -

ಕುಮಾರಸ್ವಾಮಿ ಆಡುವ ಪ್ರತಿ ಮಾತುಗಳ ಹಿಂದೆ ರಾಜಕೀಯ ತಂತ್ರಗಾರಿಕೆ ಎದ್ದು ಕಾಣುತ್ತಿದೆ. ತಾವು ಆಡುವ ಮಾತುಗಳಿಗೆ ಆಡಳಿತ ಪಕ್ಷದಿಂದ, ಬಿಜೆಪಿಯಿಂದ ಹಾಗೂ ಮಾಧ್ಯಮಗಳಿಂದ ಹೇಗೆಲ್ಲ ಪ್ರತಿಕ್ರಿಯೆ ಬರಬಹುದು ಎಂಬುದನ್ನು ಲೆಕ್ಕಾಚಾರವಿಟ್ಟುಕೊಂಡು ದಿನಕ್ಕೊಮ್ಮೆ ಅಚ್ಚರಿ ಹೇಳಿಕೆಗಳನ್ನು ನೀಡುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಮುಂಬರುವ ಲೋಕಸಭಾ ಚುನಾವಣೆಗೆ ಬಿಜೆಪಿ ಮತ್ತು ಜೆಡಿಎಸ್‌ ಮೈತ್ರಿ ಮಾಡಿಕೊಂಡು, ರಾಜ್ಯದಲ್ಲಿ ಎಚ್‌ ಡಿ ಕುಮಾರಸ್ವಾಮಿ ಅವರು ವಿರೋಧ ಪಕ್ಷದ ನಾಯಕರಾಗಲಿದ್ದಾರೆ ಎನ್ನುವ ಮಾತುಗಳು ಹೆಚ್ಚು ಕೇಳಿಬರುತ್ತಿವೆ. ಇದೇ ಕಾರಣದಿಂದ ವಿರೋಧ ಪಕ್ಷದ ನಾಯಕನ ಆಯ್ಕೆ ವಿಳಂಬವಾಗಿದೆ ಎನ್ನಲಾಗಿದೆ. ಈ ನಡುವೆ ಕುಮಾರಸ್ವಾಮಿ ನೀಡುತ್ತಿರುವ ಹೇಳಿಕೆಗಳು ವಿಪಕ್ಷ ನಾಯಕ ಸ್ಥಾನ ಮತ್ತು ತಮ್ಮ ಪಕ್ಷದ ಮುಂದಿನ ನಡೆಯ ಕುತೂಹಲವನ್ನು ಮತ್ತಷ್ಟು ಹೆಚ್ಚಿಸುತ್ತಿದೆ.

ಮಂಗಳವಾರ ರಾಮನಗರದಲ್ಲಿ ಮಾತನಾಡಿದ ಕುಮಾರಸ್ವಾಮಿ, “ನಾವು ಗೆದ್ದಿರುವುದು ಕೇವಲ 19 ಸ್ಥಾನ. ನಾನು ವಿರೋಧ ಪಕ್ಷದ ನಾಯಕ ಆಗಲು ಹೇಗೆ ಸಾಧ್ಯ? ವಿರೋಧ ಪಕ್ಷದ ನಾಯಕನ ಸ್ಥಾನಕ್ಕೂ ನನಗೂ ಏನು ಸಂಬಂಧ? ಎಂದು ಮಾಧ್ಯಮ ಪ್ರತಿನಿಧಿಗಳನ್ನೇ ಪ್ರಶ್ನಿಸಿದ್ದಾರೆ.

Advertisements

ವಿರೋಧ ಪಕ್ಷಗಳು ಬೆಂಗಳೂರಿನಲ್ಲಿ ಸಭೆ ನಡೆಸುತ್ತಿದ್ದರೆ, ಅತ್ತ ದಿಲ್ಲಿಯಲ್ಲಿ ಇಂದು (ಜು.18) ಎನ್‌ಡಿಎ ಸಭೆ ಕೂಡ ಇದೆ. ಈ ಸಭೆಗೆ ಎಚ್‌ ಡಿ ಕುಮಾರಸ್ವಾಮಿ ತೆರಳಲಿದ್ದಾರೆ ಎಂಬುದು ಮಾಧ್ಯಮಗಳಲ್ಲಿ ಸುದ್ದಿ ಪ್ರಸಾರವಾಗಿತ್ತು. ಈ ವಿಚಾರವಾಗಿ ಮಂಗಳವಾರ ಬೆಳಿಗ್ಗೆ ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿರುವ ಕುಮಾರಸ್ವಾಮಿ, ”ಎನ್‌ಡಿಎ, ಯುಪಿಎ ಸಭೆಗಳಿಗೆ ಆಹ್ವಾನ ಬಂದಿಲ್ಲ. ಎನ್‌ಡಿಎ ಕಡೆಯಿಂದ ಆಮಂತ್ರಣ ಬಂದರೆ ಖಂಡಿತ ಹೋಗುತ್ತೇನೆ. ಹಲವಾರು ವಿಚಾರ ಚರ್ಚೆ ಮಾಡುತ್ತೇನೆ” ಎಂದಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಿಜೆಪಿ, ಜೆಡಿಎಸ್ ಮತ್ತು ಪ್ರಾದೇಶಿಕ ಅಸ್ಮಿತೆ

ಮುಂದುವರಿದು, “ಇನ್ನೊಂದೆಡೆ ಕೇಂದ್ರದಲ್ಲಿ ಸಚಿವ ಸ್ಥಾನ ಸೇರಿದಂತೆ ಯಾವುದೇ ಹುದ್ದೆ ಕೇಳಿಲ್ಲ. ನನಗೆ ಅದರ ಅವಶ್ಯಕತೆಯೂ ಇಲ್ಲ. ಬಿಜೆಪಿಯಲ್ಲೇ ಸಮರ್ಥರಿದ್ದಾರೆ. ಅಂಥವರನ್ನೇ ಪ್ರತಿಪಕ್ಷದ ನಾಯಕನಾಗಿ ಆಯ್ಕೆ ಮಾಡುವಂತೆ ಬಿಜೆಪಿ ವರಿಷ್ಠರಿಗೆ ಹೇಳುತ್ತೇನೆ. ನಾನು ಜನರು ಕೊಟ್ಟಿರುವ ಸ್ಥಾನದಲ್ಲಿ ಕುಳಿತುಕೊಳ್ಳಲು ಸಿದ್ಧ. ಅದನ್ನು ನಿಭಾಯಿಸುತ್ತಿದ್ದೇನೆ” ಎಂದು ತಿಳಿಸಿದ್ದಾರೆ.

ಹೀಗೆ ದಿನಕ್ಕೊಮ್ಮೆ ನಾನಾ ತರ ಹೇಳಿಕೆಗಳನ್ನು ನೀಡುತ್ತ ತಮ್ಮ ಮತ್ತು ಜೆಡಿಎಸ್‌ ಪಕ್ಷದ ಸ್ಪಷ್ಟ ನಿಲುವು ಏನು ಎಂಬುದನ್ನು ರಾಜ್ಯದ ಜನತೆ ಮುಂದಿಡಲು ಕುಮಾರಸ್ವಾಮಿ ಅವರಿಗೆ ಈವರೆಗೂ ಆಗಿಲ್ಲ. ಜೆಡಿಎಸ್ ಪಕ್ಷವು ಬಿಜೆಪಿ ಜೊತೆ ಮೈತ್ರಿ ಮಾಡಿಕೊಳ್ಳುತ್ತದೆ, ಎನ್ ಡಿಎ ಮೈತ್ರಿಕೂಟ ಸೇರುತ್ತದೆ ಎಂಬಿತ್ಯಾದಿ ಊಹಾಪೋಹಗಳಿಗೆ ಸ್ಪಷ್ಟ ಉತ್ತರ ನೀಡುತ್ತಿಲ್ಲ. ಆದರೆ, ಅವರ ಮಾತುಗಳ ಹಿಂದಿನ ತಂತ್ರ ಮೈತ್ರಿ ಬಗ್ಗೆ ಪುಷ್ಟಿ ನೀಡುವಂತಿವೆ. ವಿಪಕ್ಷ ನಾಯಕ ಸ್ಥಾನದ ಬಗ್ಗೆ ಕುಮಾರಸ್ವಾಮಿ ಅವರು ಮನಸಲ್ಲೇ ಮಂಡಿಗೆ ತಿನ್ನುತ್ತಿದ್ದಾರಾ ಎನ್ನುವ ಪ್ರಶ್ನೆ ಕೂಡ ಮೂಡುತ್ತಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ ನಿರೂಪಣೆ

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ,...

ಮುಂಬೈ ಗರ್ಬಾ ಉತ್ಸವಕ್ಕೆ ಮುಸ್ಲಿಮರ ಪ್ರವೇಶಕ್ಕೆ ನಿರ್ಬಂಧ: ತಿಲಕ, ಆಧಾರ್ ಕಾರ್ಡ್ ಹಾಗೂ ಕುಟುಂಬ ಸಮೇತ ಆಗಮನ ಕಡ್ಡಾಯ!

ಮುಂಬೈನ ಬೋರಿವಲಿಯಲ್ಲಿ ಆಯೋಜಿಸಲಾಗುತ್ತಿರುವ ಮುಂಬರುವ ನವರಾತ್ರಿ ಗರ್ಬಾ ಮತ್ತು ದಾಂಡಿಯಾ ಉತ್ಸವದಲ್ಲಿ...

ಯುಪಿ ಚುನಾವಣೆ | ಪ್ರತಿ ಕ್ಷೇತ್ರದಲ್ಲೂ ಬಿಜೆಪಿ ಮತಗಳನ್ನು 27,000 ಕಡಿತಗೊಳಿಸುತ್ತೇವೆ: ಅಖಿಲೇಶ್ ಪ್ರತಿಜ್ಞೆ

2027ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಎಲ್ಲ ಪಕ್ಷಗಳು ಸಿದ್ದತೆಯಲ್ಲಿ ತೊಡಗಿವೆ....