ಬೀದರ್‌ | ಉತ್ತಮ ಕವಿಯಾಗಲು ಬದ್ಧತೆ ಮತ್ತು ವಿಶ್ವಾಸ ಅಗತ್ಯ : ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರು

Date:

ಕವಿ, ಬರಹಗಾರನಿಗೆ ಬದ್ಧತೆ ಮತ್ತು ಬರವಣಿಗೆಯ ಮೇಲೆ ವಿಶ್ವಾಸವಿದ್ದಾಗ ಮಾತ್ರ ಉತ್ತಮ ಕವಿಯಾಗಬಲ್ಲ ಎಂದು ಬಸವಕಲ್ಯಾಣ ಅನುಭವ ಮಂಟಪ ಟ್ರಸ್ಟ್ ಅಧ್ಯಕ್ಷ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರು ನುಡಿದರು.

- Advertisement -

ಕಮಲನಗರ ಪಟ್ಟಣದ ಸಿದ್ಧರಾಮೇಶ್ವರ ಪದವಿ ಮಹಾವಿದ್ಯಾಲಯದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನಿಂದ ಬುಧವಾರ ಆಯೋಜಿಸಿದ್ದ ಸಾಹಿತಿ ಮಲ್ಲಿಕಾರ್ಜುನ ಮಾಲಿ ಪಾಟೀಲ್ ರಚಿಸಿದ ʼಚಲನಶೀಲʼ ಕವನ ಸಂಕಲನ ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ʻಬಳ್ಳಾರಿ ಚಲೋʼ ಕಾಂಗ್ರೆಸ್‌ ಭದ್ರಕೋಟೆಯಲ್ಲಿ ಬಿಜೆಪಿ ಪಾದಯಾತ್ರೆ; ಲಾಭ...

ವಿಧಾನಸಭೆ ಚುನಾವಣೆಯಲ್ಲಿ ಜಿಲ್ಲೆಯ ಎಲ್ಲಾ ಐದು ವಿಧಾನಸಭಾ ಕ್ಷೇತ್ರಗಳನ್ನು ಗೆದ್ದು ಕಾಂಗ್ರೆಸ್‌ ಬಿಜೆಪಿ ಪಕ್ಷವನ್ನು ಸಂಪೂರ್ಣವಾಗಿ ಮಣಿಸಿತ್ತು. ಲೋಕಸಭಾ ಚುನಾವಣೆಯಲ್ಲಿಯೂ ಕಾಂಗ್ರೆಸ್‌ ತನ್ನ ಪ್ರಾಬಲ್ಯವನ್ನು ಮುಂದುವರಿಸಿತು. ಇತ್ತೀಚೆಗೆ ನಡೆದ ಸಂಡೂರು ವಿಧಾನಸಭಾ ಕ್ಷೇತ್ರದ...

ಬಾಹ್ಯಾಕಾಶದಲ್ಲಿ ಶಸ್ತ್ರಾಸ್ತ್ರ ಸಮರ: ಕಕ್ಷೆಯಲ್ಲಿ ಆಯುಧಗಳನ್ನು ಇರಿಸಿದ್ದನ್ನು ಒಪ್ಪಿಕೊಂಡ...

ಉಪಗ್ರಹವನ್ನು ಸ್ಫೋಟಿಸದಿದ್ದರೂ ಬಾಹ್ಯಾಕಾಶದಲ್ಲಿ ಜಾಮರ್‌ಗಳು ಸಹ ಅತ್ಯಂತ ಮಾರಕವಾಗಿ ಪರಿಣಮಿಸಬಹುದು. ಇಂದಿನ ದಿನಗಳಲ್ಲಿ ಸಂಪರ್ಕ, ಹವಾಮಾನ ಮುನ್ಸೂಚನೆ, ವಿಮಾನ ಮತ್ತು ಹಡಗುಗಳ ಜಿಪಿಎಸ್ (GPS), ತುರ್ತು ಸೇವೆಗಳು ಮತ್ತು ಆರ್ಥಿಕ ಜಾಲಗಳು ಸಂಪೂರ್ಣವಾಗಿ...

ಗಣೇಶೋತ್ಸವ ಕೋಮು ಸೌಹಾರ್ದದ ಸೇತುವಾಗಲಿ; ಮನುಜ ಸಂಬಂಧದ ತಂತು...

ಗಣೇಶೋತ್ಸವ ಸಂಭ್ರಮ, ಭಕ್ತಿಯಿಂದ ಜನರು ಒಂದೆಡೆ ಸೇರಿ ಆಚರಿಸುವ ಹಬ್ಬ. ಆದರೆ ಇದೇ ಹಬ್ಬದ ಸಂದರ್ಭದಲ್ಲಿ ಕೆಲವೆಡೆ ಕೋಮು ಸಂಘರ್ಷಗಳು ನಡೆಯುತ್ತಿರುವುದು ಮಾತ್ರ ವಿಷಾದನೀಯ. ಭಾರತದಂತಹ ವಿವಿಧ ಧರ್ಮ, ಭಾಷೆ, ಸಂಸ್ಕೃತಿಗಳನ್ನು ಹೊಂದಿರುವ...

“ಸಾಹಿತಿಗೆ ಬರವಣಿಗೆ ನಿತ್ಯಕರ್ಮವಾಗಬೇಕು. ಬದ್ಧತೆ ಇಟ್ಟುಕೊಂಡವರೇ ನಿಜವಾದ ಸಾಹಿತಿಗಳು. ಬರಹಗಾರ ಮೊದಲು ತನ್ನನ್ನು ತಾನು ವಿಮರ್ಶೆ ಮಾಡಿಕೊಳ್ಳಬೇಕು. ಎಲ್ಲಿಯವರೆಗೆ ಅಧ್ಯಯನಶೀಲ, ಸಂವೇದನಾಶೀಲರು ಆಗುವುದಿಲ್ಲವೋ ಅಲ್ಲಿಯವರೆಗೆ ಪರಿಪೂರ್ಣತೆ ಪಡೆಯಲಾರ” ಎಂದರು.

ಹಲಬರ್ಗಾ ಸಂಸ್ಥಾನ ಮಠದ ಹಾವಗಿಲಿಂಗೇಶ್ವರ ಶಿವಾಚಾರ್ಯರು ಮಾತನಾಡಿ, “ಸಾಹಿತಿ ಮಲ್ಲಿಕಾರ್ಜುನ ಮಾಲಿ ಪಾಟೀಲ್ ಅವರು ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿ, ನಂತರ ಗ್ರಂಥಪಾಲಕರಾಗಿ ಸೇವೆ ಮುಂದುವರಿಸಿ, ಇದೀಗ ಅದ್ಭುತವಾದ ಕವನಗಳನ್ನು ರಚಿಸಿ ಸಾಹಿತ್ಯ ಕ್ಷೇತ್ರದಲ್ಲಿ ಸಾಧನೆಗೈಯುತ್ತಿರುವುದು ಹೆಮ್ಮೆಯ ಸಂಗತಿಯಾಗಿದೆ” ಎಂದರು.

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಸುರೇಶ ಚನಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಭಾಲ್ಕಿಯ ನಿವೃತ್ತ ಪ್ರಾಧ್ಯಾಪಕ ಪ್ರೊ.ಚಂದ್ರಶೇಖರ ಬಿರಾದಾರ ಕೃತಿ ಪರಿಚಯ ಮಾಡಿದರು. ಶರಣ ಸಾಹಿತ್ಯ ಪರಿಷತ್ತು ಜಿಲ್ಲಾಧ್ಯಕ್ಷ ಪ್ರೊ.ಶಂಭುಲಿಂಗ ಕಾಮಣ್ಣ, ಸಾಹಿತಿ ಸಂಗಮೇಶ ಮುರ್ಕೆ ಮಾತನಾಡಿದರು.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಕಾಂಗ್ರೆಸ್ಸಿನ ದಿಲ್ಲಿ ಚಲೋ ಮತ್ತು ಬಿಜೆಪಿಯ ಭಂಡತನ

ಭಾಲ್ಕಿ ಹಿರೇಮಠದ ಬಸವಲಿಂಗ ಸ್ವಾಮೀಜಿ, ತಹಸೀಲ್ದಾರ್ ಅಮಿತಕುಮಾರ ಕುಲಕರ್ಣಿ, ತಾಪಂ ಇಒ ಮಾಣಿಕರಾವ ಪಾಟೀಲ್, ಎಡಿ ಹಣಮಂತರಾಯ ಕೌಟಗೆ, ಕಸಾಪ ಜಿಲ್ಲಾ ಕೋಶಾಧ್ಯಕ್ಷ ಶಿವಶಂಕರ ಟೋಕರೆ,
ನಿವೃತ್ತ ಕಾರ್ಯನಿರ್ವಹಣಾಧಿಕಾರಿ ಮಾಣಿಕಪ್ಪಾ ಗೊರನಾಳೆ, ಪ್ರೊ.ಎಸ್.ಎನ್.ಶಿವಣಕರ, ಪ್ರಾಚಾರ್ಯ ಓಂಕಾಂತ ಪಾಟೀಲ್, ಬಸವರಾಜ ಪಾಟೀಲ್, ಪ್ರಕಾಶ ಮಾನಕರಿ, ಚಂದ್ರಕಾಂತ ಸಂಗಮೆ, ಶ್ರೀರಂಗ
ಪರಿಹಾರ, ಶಿವಕುಮಾರ ಧರಣೆ, ಯಶವಂತ ಬಿರಾದಾರ, ಧನರಾಜ ಭವರಾ, ಸಾಯಿನಾಥ ಕಾಂಬಳೆ, ಸಂತೋಷ ಸುಲಾಕೆ, ಪ್ರಶಾಂತ ಖಾನಾಪುರೆ, ಜನಾರ್ದನ ಸಾವರ್ಗೇಕರ್, ಸಂತೋಷ ಸುಲಾಕೆ ಇತರರಿದ್ದರು. ಸಾಕ್ಷಿ ಖಾನಾಪುರೆ ಪ್ರಾರ್ಥನೆ ಗೀತೆ ಹಾಡಿದರು. ಕಸಾಪ ತಾಲೂಕು ಅಧ್ಯಕ್ಷ ಪ್ರಶಾಂತ ಮಠಪತಿ ಸ್ವಾಗತಿಸಿದರು. ಡಾ.ಶ್ರೀನಿವಾಸ ಬೇಂದ್ರೆ ವಂದಿಸಿದರು. ಪ್ರಾಂಶುಪಾಲ ಶಿವಾಜಿ ಆರ್.ಎಚ್ ನಿರೂಪಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ಕುಮಧ್ವತಿ ನದಿಯ ನೀರು ಸಂಗ್ರಹಿಸಲು ರೈತರು ಪ್ರತಿಭಟನೆ

"ಕುಮಧ್ವತಿ ನದಿಗೆ ಅಡ್ಡಲಾಗಿ ಕಟ್ಟಿರುವ ಬ್ರಿಡ್ಜ್ ಕಂ ಬ್ಯಾರೇಜ್‌ಗಳಿಗೆ ಬರಗಾಲದ ಹಿನ್ನೆಲೆಯಲ್ಲಿ...

ಉತ್ತರ ಕನ್ನಡ | ಎಸ್‌ಐಆರ್‌: 65,248 ನೋಟಿಸ್‌; 18,904 ಪ್ರಕರಣಗಳ ವಿಚಾರಣೆ ಪೂರ್ಣ

ಉತ್ತರ ಕನ್ನಡ: ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್)-2026ರ ಭಾಗವಾಗಿ...

ಬಾಗಲಕೋಟೆ | ಕುರಿ ಸಂಗೋಪನೆ ಸಂಘಗಳಿಗೂ ಶೂನ್ಯ ಬಡ್ಡಿದರ ಸಾಲಕ್ಕೆ ಆಗ್ರಹ

ಕುರಿ ಸಂಗೋಪನೆ ಹಾಗೂ ಉಣ್ಣೆ ಉತ್ಪಾದಕ ಸಹಕಾರ ಸಂಘಗಳಿಗೆ ಸಾಲ ಸೇರಿದಂತೆ...

ರಾಯಚೂರು | ಅವ್ಯವಹಾರ ದೂರು ನೀಡಿದ್ದಕ್ಕೆ ಡಿಡಿಪಿಐ ಬೆದರಿಕೆ: ಚನ್ನಬಸವ ಅರೋಲಿ ಆರೋಪ

ಮಾನ್ವಿ ತಾಲೂಕಿನ ಅರೋಲಿ ಗ್ರಾಮದ ಉನ್ನತೀಕರಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ...