ಬೆಳಗಾವಿ | ಆಸ್ತಿಗಾಗಿ ಜಗಳ: ತಮ್ಮನ ಮೇಲೆ ಟ್ರ್ಯಾಕ್ಟರ್ ಹತ್ತಿಸಿ ಕೊಲೆಗೈದ ಸಹೋದರ

Date:

Advertisements

ಆಸ್ತಿ ವಿವಾದದ ಹಿನ್ನೆಲೆಯಲ್ಲಿ ಟ್ರ್ಯಾಕ್ಟರ್ ಹತ್ತಿಸಿ ಒಡಹುಟ್ಟಿದ ತಮ್ಮನನ್ನೇ ಅಣ್ಣನೋರ್ವ ಭೀಕರವಾಗಿ ಕೊಲೆಗೈದಿರುವ ಘಟನೆ ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣ ಹೊರವಲಯದ‌ ಜಮೀನಿನಲ್ಲಿ ನಡೆದಿದೆ.

ಯರಗಟ್ಟಿ ಪಟ್ಟಣದಲ್ಲಿ ಆಸ್ತಿ ವಿಚಾರಕ್ಕೆ ಸಂಬಂಧಿಸಿದ ಕಿರುಕುಳಕ್ಕೆ ಬೇಸತ್ತು ಸಹೋದರನ ಹತ್ಯೆಗೈದಿರುವ ಶಂಕೆ ವ್ಯಕ್ತವಾಗಿದ್ದು ಆರೋಪಿಯ ಬಂಧನಕ್ಕೆ ಪೊಲೀಸರು ಶೋಧ ಕಾರ್ಯ ಕೈಗೊಂಡಿದ್ದಾರೆ.

ಯರಗಟ್ಟಿಯ ಗೋಪಾಲ ಬಾವಿಹಾಳ (27) ಹತ್ಯೆಯಾದ ವ್ಯಕ್ತಿಯಾಗಿದ್ದು, ಮಾರುತಿ ಬಾವಿಹಾಳ (30) ತಮ್ಮನನ್ನೇ ಹತ್ಯೆಗೈದ ಆರೋಪಿ ಸಹೋದರ.

Advertisements

ನಿತ್ಯ ಮದ್ಯ ಸೇವಿಸಿ ಬಂದು ಪಿತ್ರಾರ್ಜಿತ ಆಸ್ತಿ ಅನುಭವಿಸಲು ನಿಮಗೆ ಬಿಡಲ್ಲ‌ ಎಂದು ಗೋಪಾಲ ಕಿರಿಕಿರಿ ಮಾಡುತ್ತಿದ್ದ ಹಾಗೂ ತನ್ನ ಪಾಲಿಗೆ ಬಂದಿದ್ದ ಟ್ರ್ಯಾಕ್ಟರ್ ಅನ್ನು ಗೋಪಾಲ ಪತ್ನಿಯ ಮನೆಯಲ್ಲಿ ಇರಿಸಿದ್ದ. ಹೀಗಾಗಿ, ತಮ್ಮನ ಕಿರಿಕಿರಿಗೆ ಬೇಸತ್ತು ಬೈಕಿನಲ್ಲಿ ಹೊರಟಿದ್ದ ಗೋಪಾಲನ ಮೇಲೆ ಟ್ರ್ಯಾಕ್ಟರ್ ಹರಿಸಿ ಮಾರುತಿ ಕೊಲೆಗೈದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಬೆಳಗಾವಿ 37

ಗೋಪಾಲನ ತಂದೆ ಅರ್ಜುನ್‌ ಬಾವಿಹಾಳ ಅವರಿಗೆ ಮೂವರು ಗಂಡು ಮಕ್ಕಳಿದ್ದು, ಕಳೆದ 15 ದಿನಗಳ ಹಿಂದಷ್ಟೇ ತಮಗೆ ಬಂದ ಜಮೀನು ಪಾಲು, ಹಣ ಪಡೆದು ಸಹೋದರರು ಬೇರೆ ಬೇರೆಯಾಗಿದ್ದರು. ಮೂವರೂ ಸಹೋದರರಿಗೂ ಒಂದೊಂದು ಟ್ರ್ಯಾಕ್ಟರ್ ಪಾಲಿಗೆ ಬಂದಿದ್ದವು. ಮೃತ ಗೋಪಾಲನಿಗೆ ಬಂದಿದ್ದ ಟ್ರ್ಯಾಕ್ಟರ್ ಅನ್ನು ಹೆಂಡತಿ ಮನೆಯಲ್ಲಿ ಇಟ್ಟಿದ್ದಕ್ಕೆ ಗಲಾಟೆ ಆಗಿತ್ತು. ನಾನು ದುಡಿದಿರುವುದನ್ನು ಹಾಳು ಮಾಡುತ್ತಿರುವೆ ಎಂದು ಆಗಾಗ್ಗೆ ಇಬ್ಬರು ಸಹೋದರ ನಡುವೆ ಜಗಳ ನಡೆಯುತ್ತಲೇ ಇತ್ತು.‌ ಗೋಪಾಲ ವಿಪರೀತ ಕುಡಿತದ ಚಟ ಹೊಂದಿದ್ದು, ಟ್ರ್ಯಾಕ್ಟರ್ ವಿಚಾರಕ್ಕೆ ಇಬ್ಬರು ಸಹೋದರರ ಮಧ್ಯೆ ಮತ್ತೆ ನಡೆದ ಗಲಾಟೆ ವಿಕೋಪಕ್ಕೆ ತಿರುಗಿ ಕೊಲೆಯಲ್ಲಿ ಅಂತ್ಯವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ಗದಗ | ಅಮಿತ್ ಶಾ ರಾಜೀನಾಮೆಗೆ ಆಗ್ರಹಿಸಿ ಡಿ.24ಕ್ಕೆ ಬಂದ್‌ಗೆ ಕರೆ

ತಮ್ಮನನ್ನು ಕೊಲೆ‌ ಮಾಡಲೆಂದೇ ಹೊಂಚುಹಾಕಿ ಕುಳಿತಿದ್ದ ಮಾರುತಿ, ಯರಗಟ್ಟಿ ಹೊರವಲಯದ ಬೂದಿಗೊಪ್ಪ ರಸ್ತೆಯಲ್ಲಿ ಬೈಕ್ ಮೇಲೆ ಬರುತ್ತಿದ್ದ ಗೋಪಾಲನಿಗೆ ಟ್ರ್ಯಾಕ್ಟರ್​​ನಿಂದ ಡಿಕ್ಕಿ ಹೊಡೆದಿದ್ದಾನೆ. ಅವಘಡದಲ್ಲಿ ಜಮೀನಿನಲ್ಲಿ ಬಿದ್ದ ಗೋಪಾಲ ಮೇಲೆ ಮನಬಂದಂತೆ ಟ್ರ್ಯಾಕ್ಟರ್ ಹಾಯಿಸಿ ಹತ್ಯೆ ಮಾಡಿದ್ದಾನೆ. ಆರೋಪಿಯನ್ನು ಶೀಘ್ರದಲ್ಲೇ ಬಂಧಿಸಲಾಗುವುದು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಟ್ರ್ಯಾಕ್ಟರ್​​ನಡಿ ಸಿಲುಕಿದ್ದ ಭಯಾನಕ ದೃಶ್ಯವನ್ನು ಸ್ಥಳೀಯರು ಮೊಬೈಲಿನಲ್ಲಿ ಸೆರೆ ಹಿಡಿದಿದ್ದಾರೆ ಎಂದು ತಿಳಿದು ಬಂದಿದೆ. ಮುರಗೋಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ನಗರದ ವಿವಿಧ ಬಡಾವಣೆಗಳಲ್ಲಿ ಸಿಸಿ ರಸ್ತೆ ಕಾಮಗಾರಿಗೆ ಅಡಿಗಲ್ಲು

ರಾಯಚೂರು ನಗರದ ವಾರ್ಡ್ ನಂ.34ರ ಬಂದೇನವಾಜ ಕಾಲೋನಿ, ದೇವರಾಜ ಅರಸ್ ಕಾಲೋನಿ,...

ಬಳ್ಳಾರಿ | ನಶಿಸಿ ಹೋಗುತ್ತಿರುವ ತೊಗಲುಗೊಂಬೆ ಪ್ರದರ್ಶನ ಉಳಿಸಿ ಬೆಳೆಸಬೇಕು: ಜೋಳದರಾಶಿ ತಿಮ್ಮಪ್ಪ

ನಶಿಸಿ ಹೋಗುತ್ತಿರುವ ತೊಗಲು ಗೊಂಬೆ ಪ್ರದರ್ಶನ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ...

ಭಟ್ಕಳ | ಮಗಳ ಅಶ್ಲೀಲ ವಿಡಿಯೊ ವೈರಲ್ ಮಾಡುವುದಾಗಿ ಬೆದರಿಕೆ: ಮೂವರ ಬಂಧನ

ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ನಗರದ ಕಿದ್ವಾಯಿ ರಸ್ತೆಯೊಂದರ ತರಕಾರಿ ವ್ಯಾಪಾರಿಯನ್ನು...

ಬೆಳಗಾವಿ : ಬಸ್ ಲಾರಿ ಡಿಕ್ಕಿ 20 ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ತಿಗಡಿ ಕ್ರಾಸ್ ಹತ್ತಿರ ಭಾನುವಾರ ಬೆಳಿಗ್ಗೆ...

Download Eedina App Android / iOS

X