ಬೆಳಗಾವಿ | ಬಸ್ ಟಿಕೆಟ್ ದರ ಏರಿಕೆ ಅನಿವಾರ್ಯ: ಶಾಸಕ ರಾಜು ಕಾಗೆ

Date:

Advertisements

ರಾಜ್ಯದಲ್ಲಿ ಸಾರಿಗೆ ಬಸ್‌ ಟಿಕೆಟ್ ದರ ಏರಿಕೆಯ ವಿಚಾರ ಚರ್ಚೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಅಧ್ಯಕ್ಷ ಹಾಗೂ ಶಾಸಕ ರಾಜು ಕಾಗೆ, “ಬಸ್ ಟಿಕೆಟ್ ದರ ಏರಿಕೆ ಅನಿವಾರ್ಯ” ಎಂದು ತಿಳಿಸಿದ್ದಾರೆ.

ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಉಗಾರ ಪಟ್ಟಣದಲ್ಲಿ ಮಾತನಾಡಿದ ಶಾಸಕರು, “ರಾಜ್ಯದಲ್ಲಿ ಕಳೆದ ಏಳೆಂಟು ವರ್ಷಗಳಿಂದ ಬಸ್ ಟಿಕೆಟ್‌ ದರ ಏರಿಕೆಯಾಗಿಲ್ಲ. ಡೀಸೆಲ್, ಆಯಿಲ್, ಟೈರ್ ಹಾಗೂ ಬಿಡಿ ಭಾಗಗಳ ದರ ಏರಿಕೆಯಾಗಿದೆ. ಸರ್ಕಾರ ಅನಿವಾರ್ಯವಾಗಿ ಟಿಕೆಟ್ ದರ ಏರಿಕೆ ಮಾಡಿದೆ. ಪ್ರತಿ ದಿನ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಒಂದು ಕೋಟಿ ನಷ್ಟದಲ್ಲಿದೆ. ಹೊಸ ಬಸ್‌ಗಳನ್ನು ಈಗಾಗಲೇ ಖರೀದಿ ಮಾಡಿದ್ದೇವೆ. ಕಳೆದ ಐದಾರು ವರ್ಷಗಳಿಂದ ಬಸ್‌ ಖರೀದಿ ಮಾಡಿಲ್ಲ. ಈಗ ಐದನೂರು ಹೊಸ ಬಸ್‌ ಖರೀದಿ ಮಾಡಿದ್ದೇವೆ” ಎಂದು ತಿಳಿಸಿದರು.

ರಾಜ್ಯ ಸರ್ಕಾರ ಬಸ್ ಟಿಕೆಟ್ ದರ ಶೇ. 15 ಏರಿಕೆ ಮಾಡಿದ್ದು ಸರಿಯಿದೆ. ಕೆಲ ವರ್ಷಗಳ ಹಿಂದೆಯೇ ಟಿಕೆಟ್ ದರ ಏರಿಕೆಯಾಗಬೇಕಿತ್ತು. ಈಗ ಏರಿಕೆಯಾಗಿದೆ ಎಂದು ಶಾಸಕ ರಾಜು ಕಾಗೆ ಹೇಳಿದರು.

Advertisements

ಇದನ್ನು ಓದಿದ್ದೀರಾ? ರಾಯಚೂರು | ಅಂಬೇಡ್ಕರ್‌ಗೆ ಅವಮಾನ: ಅಮಿತ್ ಶಾ ಹೇಳಿಕೆ ಖಂಡಿಸಿ ಜ.7ರಂದು ‘ದೇವದುರ್ಗ ಬಂದ್‌’

ಜನರ ಸೇವೆಗೆ ಬಸ್ ಖರೀದಿ ಮಾಡಿದಾಗ ಬಸ್ ಟಿಕೆಟ್ ದರ ಏರಿಕೆ ಮಾಡುವುದು ಅನಿವಾರ್ಯ. ಡೀಸೆಲ್ ₹50 ಇದ್ದಾಗ ಇದೇ ಟಿಕೆಟ್ ದರ ಇತ್ತು. ಆದರೆ ಈಗ ಡೀಸೆಲ್ ದರ ಏರಿಕೆಯಾಗಿದೆ. ಟಿಕೆಟ್ ದರ ಏರಿಕೆ ಮಾಡಿದ್ದೇವೆ. ಕಳೆದ ಬಿಜೆಪಿ ಸರ್ಕಾರ ಕೆಎಸ್‌ಆರ್‌ಟಿಸಿಯನ್ನು ನಷ್ಟಕ್ಕೆ ದೂಡಿದ್ದಾರೆ’ ಎಂದು ಬಿಜೆಪಿ ವಿರುದ್ಧ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಅಧ್ಯಕ್ಷ ರಾಜು ಕಾಗೆ ಆಕ್ರೋಶ ವ್ಯಕ್ತಪಡಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

ಕೋಲಾರ | ಎಫ್ಆರ್‌ಎಸ್ ನಿಲ್ಲಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

ಬೀದರ್‌ | ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ : ಎರಡು ದಿನ ರಾಷ್ಟ್ರೀಯ ವಿಚಾರ ಸಂಕಿರಣ

ಭಾಲ್ಕಿ ಹಿರೇಮಠ ಸಂಸ್ಥಾನದ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ ...

ಶಿರಸಿ | NWKRTC ವತಿಯಿಂದ ಅಪ್ರೆಂಟಿಸ್ ಹುದ್ದೆಗಳಿಗೆ WALK-IN-INTERVIEW

ಕರ್ನಾಟಕ ರಾಜ್ಯ ವಾಯುವ್ಯ ಸಾರಿಗೆ ಸಂಸ್ಥೆ, ಶಿರಸಿ ವಿಭಾಗದಲ್ಲಿ ವಿವಿಧ ಅಪ್ರೆಂಟಿಸ್...

Download Eedina App Android / iOS

X