ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಘೋಷಿಸಿರುವ ಗ್ಯಾರಂಟಿಗಳ ಜಾರಿಗೆ ಕ್ರಮ ಕೈಗೊಳ್ಳಬೇಕು ಎಂದು ಬೆಳಗಾವಿಯ ಹಲವೆಡೆ ಸ್ಥಳೀಯರು ಆಗ್ರಹಿಸಿದ್ದಾರೆ. ಬೆಳಗಾವಿಯ ಸದಾಶಿವನಗರದಲ್ಲಿ ಜನರು ಈ ತಿಂಗಳ ವಿದ್ಯುತ್ ಶುಲ್ಕ ಪಾವತಿ ಮಾಡದೇ ಇರಲು ನಿರ್ಧರಿಸಿದ್ದು, ಸಾಮಾಜಿಕ ಕಾರ್ಯಕರ್ತ ಪ್ರಸಾದ್ ಚೌಗುಲೆ ಎಂಬವರು ‘ಫ್ರೀ ಕರೆಂಟ್, ನೋ ರೀಡಿಂಗ್’ ಎಂದು ಬರೆದು ವಿದ್ಯುತ್ ಮೀಟರ್ಗೆ ಅಂಟಿಸಿದ್ದಾರೆ.
“ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ 200 ಯುನಿಟ್ ಫ್ರೀ ವಿದ್ಯುತ್ ನೀಡುವುದಾಗಿ ಚುನಾವಣೆಗೂ ಮುನ್ನ ಭರವಸೆ ನೀಡಿತ್ತು. ಇದೀಗ ಕಾಂಗ್ರೆಸ್ ನೇತೃತ್ವದ ಸರ್ಕಾರ ರಾಜ್ಯದಲ್ಲಿ ಅಸ್ತಿತ್ವಕ್ಕೆ ಬಂದಿದೆ. ಹೀಗಾಗಿ ಹೆಸ್ಕಾಂ ಸಿಬ್ಬಂದಿ ರೀಡಿಂಗ್ ಪಡೆಯಬಾರದು. ನಾನು ವಿದ್ಯುತ್ ಪಾವತಿಸುವುದಿಲ್ಲ” ಎಂದು ಪ್ರಸಾದ್ ಚೌಗುಲೆ ಹೇಳಿದ್ದಾರೆ.
ಈ ಸುದ್ದಿ ಓದಿದ್ದೀರಾ? ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ ಶೇ. 31ರಿಂದ 35ಕ್ಕೆ ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ
ವಿದ್ಯುತ್ ಬಿಲ್ ಕಟ್ಟುವುದಿಲ್ಲ ಎಂದು ರಾಜ್ಯದ ಹಲವು ಕಡೆಗಳಲ್ಲಿ ಜನರು ಈಗಾಗಲೇ ಪಟ್ಟು ಹಿಡಿದಿದ್ದಾರೆ. ಈ ಮಧ್ಯೆ, ಬೆಳಗಾವಿಯ ಜನರು ಶುಲ್ಕ ಪಾವತಿಸದೇ ಇರಲು ಒಗ್ಗಟ್ಟಿನಿಂದ ಮುಂದಾಗಿದ್ದಾರೆ.