ಬೆಳಗಾವಿ | ಸವದತ್ತಿಯ ಭಕ್ತರ ಅನುಕೂಲಕ್ಕೆ ಮೂಲಸೌಕರ್ಯ ಒದಗಿಸಲು ತೀರ್ಮಾನ: ಸಿಎಂ ಸಿದ್ದರಾಮಯ್ಯ

Date:

Advertisements

ಬಡವರು ಹಾಗೂ ರೈತಾಪಿ ವರ್ಗದವರು ಹೆಚ್ಚು ಭೇಟಿ ನೀಡುವ ಸವದತ್ತಿಯ ಶ್ರೀರೇಣುಕಾ ಯಲ್ಲಮ್ಮ ದೇವಸ್ಥಾನ ಕ್ಷೇತ್ರದಲ್ಲಿ ಗುಣಮಟ್ಟದ ಮೂಲಸೌಕರ್ಯಗಳನ್ನು ಒದಗಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಶ್ರೀರೇಣುಕಾ ಯಲ್ಲಮ್ಮ ದೇವಸ್ಥಾನದ ಅಭಿವೃದ್ಧಿ ಪ್ರಾಧಿಕಾರದ ಪ್ರಥಮ ಸಭೆ ನಡೆಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

“ಪ್ರವಾಸೋದ್ಯಮ ಮಂಡಳಿ ಹಾಗೂ ಶ್ರೀರೇಣುಕಾ ಯಲ್ಲಮ್ಮ ದೇವಸ್ಥಾನದ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಅಭಿವೃದ್ಧಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಬಗ್ಗೆ ಸಭೆ ನಡೆಸಲಾಗಿದೆ. ಈ ಕ್ಷೇತ್ರಕ್ಕೆ ಸುಮಾರು ಎರಡು ಕೋಟಿ ಭಕ್ತಾದಿಗಳು ಭೇಟಿ ನೀಡುತ್ತಿದ್ದು, ಪ್ರವಾಸಿಗರ ಅನುಕೂಲಕ್ಕಾಗಿ ಕುಡಿಯುವ ನೀರು, ಶೌಚಾಲಯ, ಪಾರ್ಕಿಂಗ್, ತಂಗುದಾಣದ ವ್ಯವಸ್ಥೆಯನ್ನು ಪೂರೈಸಬೇಕಾಗಿದೆ. ಬಡವರು ಹಾಗೂ ರೈತಾಪಿ ವರ್ಗದವರು ಹೆಚ್ಚು ಭೇಟಿ ನೀಡುವ ಈ ಕ್ಷೇತ್ರದಲ್ಲಿ ಗುಣಮಟ್ಟದ ಮೂಲಸೌಕರ್ಯಗಳನ್ನು ಒದಗಿಸಲು ತೀರ್ಮಾನಿಸಲಾಗಿದೆ” ಎಂದರು.

Advertisements

“ಕ್ಷೇತ್ರದಲ್ಲಿ 1087 ಎಕರೆ ಪ್ರದೇಶ ಲಭ್ಯವಿದ್ದು, ಮೂಲಸೌಕರ್ಯ ವ್ಯವಸ್ಥೆ ಕಲ್ಪಿಸುವ ಉದ್ದೇಶಕ್ಕೆ ಈ ಪ್ರದೇಶವನ್ನು ಬಳಸಿಕೊಳ್ಳಲಾಗುವುದು. ಮನುಷ್ಯರಿಗೆ ದಾಸೋಹ ವ್ಯವಸ್ಥೆಯಿರುವಂತೆ ರಾಸುಗಳಿಗೂ ಮೇವು ಒದಗಿಸುವ ವ್ಯವಸ್ಥೆಯನ್ನು ಕಲ್ಪಿಸಲು ತೀರ್ಮಾನಿಸಲಾಗಿದೆ” ಎಂದರು.

ಇದನ್ನು ಓದಿದ್ದೀರಾ? ಆರ್‌ಎಸ್‌ಎಸ್‌ ಕಾರ್ಯಕ್ರಮಕ್ಕೆ ರಾಯಚೂರು ವಿವಿ ಕುಲಪತಿ ಮುಖ್ಯ ಅತಿಥಿ!

ಬೆಳಗಾವಿ ಅಧಿವೇಶನದ ವೇಳೆಗೆ ಮುಖ್ಯಮಂತ್ರಿಗಳು ಬದಲಾಗುತ್ತಾರೆ ಎಂಬ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡುತ್ತಾ, “ವಿಜಯೇಂದ್ರರವರ ತಂದೆ ಯಡಿಯೂರಪ್ಪನವರು ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ನಮ್ಮ ಮೇಲೆ ಇಂತಹ ಹೇಳಿಕೆಗಳನ್ನು ನೀಡಲು ಯಾವ ನೈತಿಕತೆ ಇದೆ? ಕಾಂಗ್ರೆಸ್ ಸರ್ಕಾರಕ್ಕೆ ಜನ ನೀಡುತ್ತಿರುವ ಬೆಂಬಲವನ್ನು ಸಹಿಸಲಾಗದೇ ಈ ರೀತಿ ಹೇಳಿಕೆಗಳನ್ನು ನೀಡುತ್ತಿದ್ದಾರೆ” ಎಂದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಒಳಮೀಸಲಾತಿ ಅಂಗೀಕಾರ ಸ್ವಾಗತಾರ್ಹ: ಬಸವರಾಜ ಕಡೇಮನಿ

"ಒಳಮೀಸಲಾತಿ ಜಾರಿಗಾಗಿ ಒತ್ತಾಯಿಸಿ ಮೂವತ್ತೈದು ವರ್ಷಗಳ ನಿರಂತರ ಹೋರಾಟದ ಫಲದಿಂದ ರಾಜ್ಯ...

ಸಕಲೇಶಪುರ | ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣ ಬೆಂಬಲ ನೀಡಬೇಕು: ಬಿ ಆರ್‌ ಪಾಟೀಲ್

ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣವಾಗಿ ಬೆಂಬಲ ನೀಡಿದಾಗ ಮಾತ್ರ ವ್ಯಸನವನ್ನು...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

Download Eedina App Android / iOS

X