ಬೆಳಗಾವಿ | ಜಮೀನು ವಿಚಾರಕ್ಕೆ ಜಗಳ; ಮಹಿಳೆಯನ್ನು‌ ವಿವಸ್ತ್ರಗೊಳಿಸಿ ಹಲ್ಲೆ

Date:

Advertisements

ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಹರ್ಲಾಪುರ ಗ್ರಾಮದಲ್ಲಿ ಜಮೀನು ವಿಚಾರಕ್ಕೆ ಜಗಳ ನಡೆದಿದ್ದು, ಮಹಿಳೆಯೊಬ್ಬರನ್ನು‌ ವಿವಸ್ತ್ರಗೊಳಿಸಿ ಹಲ್ಲೆ ಮಾಡಿದ ಆರೋಪ ಕೇಳಿಬಂದಿದೆ.

4 ಎಕರೆ 19 ಗುಂಟೆ ಜಮೀನಿಗೆ ಸಂಬಂಧಿಸಿದಂತೆ ಕಳೆದ ಕೆಲವು ವರ್ಷಗಳಿಂದ ತಂಟೆ-ತಕರಾರು ನಡೆದಿದ್ದವು. 2025ರ ಫೆಬ್ರವರಿ 20ರಂದು ಇದೇ ವಿಚಾರವಾಗಿ ಮತ್ತೆ ಜಗಳ ನಡೆದಿದ್ದು, ಪೊಲೀಸರ ಎದುರೇ ವಿವಸ್ತ್ರಗೊಳಿಸಿ ಹಲ್ಲೆ ಮಾಡಿದ್ದಾರೆಂದು ಅರೋಪಿಸಲಾಗಿದೆ.

“15ಕ್ಕೂ ಅಧಿಕ ಮಂದಿ ರೈತ ಸಂಘದವರ ಮುಂದಾಳತ್ವದಲ್ಲಿ ಬಂದು ಹಲ್ಲೆ ಮಾಡಿದ್ದಾರೆ. ಆಗ ನಾನು ಪೊಲೀಸರಿಗೆ ಫೋನ್ ಮಾಡಿದೆ. ಪೊಲೀಸರು ಸ್ಥಳಕ್ಕೆ ಬಂದಾಗಲೇ ಅವರ ಮುಂದೆಯೇ ನನ್ನ ಬಟ್ಟೆ‌ ಹರಿದು ಹಲ್ಲೆ ಮಾಡಿದ್ದಾರೆ” ಎಂದು ಸಂತ್ರಸ್ತ ಮಹಿಳೆ ದೂರಿದ್ದಾರೆ.

Advertisements

“ಅರೆಬೆತ್ತಲೆಯಾಗಿಯೇ ನಾನು ಸವದತ್ತಿ ಪೊಲೀಸ್ ಠಾಣೆಗೆ ಹೋದೆ. ಆದರೆ ಪೊಲೀಸರು ಬೆತ್ತಲೆ ಮಾಡಿ ಹೊಡೆದಿದ್ದಕ್ಕೆ ಸಾಕ್ಷಿ ಕೊಡಿ ಎಂದು ಕೇಳಿದರು. ದೂರು ಪಡೆಯಲಿಲ್ಲ. ನನ್ನ ಹೊಟ್ಟೆಗೆ ತೀವ್ರ ಪೆಟ್ಟಾಗಿದ್ದರಿಂದ ಸವದತ್ತಿ ತಾಲೂಕು ಆಸ್ಪತ್ರೆಯಲ್ಲಿ ಪ್ರಾಥಮಿಕ‌ ಚಿಕಿತ್ಸೆ ಪಡೆದು, ನಂತರ ಧಾರವಾಡದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದೆ” ಎಂದು ಹೇಳಿದ್ದಾರೆ.

“ಇದೇ‌ ಜಮೀನು ವಿವಾದಕ್ಕೆ ಸಂಬಂಧಿಸಿದಂತೆ 2024ರ ಜೂನ್ 18 ಹಾಗೂ 2025ರ ಜನವರಿ 1ರಂದು ಎರಡು ಬಾರಿ ದೂರು‌ ನೀಡಲಾಗಿದೆ. ಜೂನ್ 15ರಂದು ಜಮೀನಿನಲ್ಲಿ ಬಿತ್ತಲು ಮುಂದಾದಾಗ ಏಳು ಜನರ ಗುಂಪು ಕಟ್ಟಿಕೊಂಡು ಬಂದು ಬಿತ್ತನೆ ಕಾರ್ಯಕ್ಕೆ ತಕರಾರು‌ ಮಾಡಿದರು. ನನ್ನ ಮೇಲೆ ಹಲ್ಲೆ ಕೂಡ ಮಾಡಿದ್ದರು. ಹಾಗಾಗಿ ಜೂನ್ 18ರಂದು‌ ಸವದತ್ತಿ ಠಾಣೆಗೆ ದೂರು ನೀಡಿದ್ದೆ. ನಂತರ ಡಿಸೆಂಬರ್ 19ರಂದು ಹೊಲದಲ್ಲಿ ಕಳೆ ತೆಗೆಯುತ್ತಿದ್ದಾಗ ಯಲ್ಲಪ್ಪ‌ ಉರೂಫ್ ಪಟ್ಟಣಗೌಡ ಪಾಟೀಲ ಎಂಬುವವರು ಹೊಲಕ್ಕೆ ಬಂದು‌ ಜಗಳ ತೆಗೆದರು‌. ನನ್ನ ಬಟ್ಟೆ ಹರಿದು ಮಾನಭಂಗ ಮಾಡಲು‌ ಯತ್ನಿಸಿದರು” ಎಂದು ಸಂತ್ರಸ್ತೆ ಜನವರಿ 1ರಂದು ದೂರು ದಾಖಲಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಉಡುಪಿ | ಮಲ್ಪೆ ಕಡಲ ತೀರದಲ್ಲಿ ಅಕ್ರಮವಾಗಿ ಸರಕಾರಿ ಜಾಗ ಒತ್ತುವರಿ,ಜಿಲ್ಲಾಡಳಿತದಿಂದ ತೆರವು

“ಇದೇ ವಿಚಾರವಾಗಿ ಮತ್ತೆ ಫೆಬ್ರವರಿ 20ರಂದು ಕಲಹ ನಡೆದಿದೆ. ಹೊಲ ತಮ್ಮದೆಂದು ಹೇಳಿಕೊಂಡು ಆರೋಪಿಗಳು ರೈತ ಸಂಘಟನೆಯವರನ್ನು ಕರೆದುಕೊಂಡು ಬಂದು ಗಲಾಟೆ ಮಾಡಿದ್ದಾರೆ. ಬೆಳೆದ ಬೆಳೆಯನ್ನೂ ತಾವೇ‌ ತೆಗೆದುಕೊಂಡು‌‌ ಹೋಗುವುದಾಗಿ ಹೇಳಿದ್ದಾರೆ. ಇದಕ್ಕೆ ವಿರೋಧಿಸಿದ್ದರಿಂದ ಪುರುಷರು‌, ಮಹಿಳೆಯರು ಸೇರಿ ಬಟ್ಟೆ ಹರಿದು‌ ಹೊಡೆದಿದ್ದಾರೆ” ಎಂದು ಸಂತ್ರಸ್ತೆ ಆರೋಪ ಮಾಡಿದ್ದಾರೆ.‌

“4 ಎಕರೆ 19 ಗುಂಟೆ ಜಮೀನಿಗೆ ಸಂಬಂಧಿಸಿದಂತೆ ಗಲಾಟೆಗಳಾಗಿರುವುದು ನಿಜ. ಮಹಿಳೆಯ ವಿಚಾರವಾಗಿ ಈ ಹಿಂದೆ ಕೂಡ ದೂರು ಪಡೆದು ಕ್ರಮ‌ ವಹಿಸಲಾಗಿದೆ. ಪೊಲೀಸರ ಮುಂದೆ ವಿವಸ್ತ್ರಗೊಳಿಸಿ ಹೊಡೆದಿದ್ದಾರೆ ಎಂಬ ಅರೋಪ ಪರಿಶೀಲನೆ ಮಾಡಲಾಗುವುದು” ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಭೀಮಾಶಂಕರ ಗುಳೇದ ಮಾಧ್ಯಮವೊಂದಕ್ಕೆ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಒಳಮೀಸಲಾತಿ ಅಂಗೀಕಾರ ಸ್ವಾಗತಾರ್ಹ: ಬಸವರಾಜ ಕಡೇಮನಿ

"ಒಳಮೀಸಲಾತಿ ಜಾರಿಗಾಗಿ ಒತ್ತಾಯಿಸಿ ಮೂವತ್ತೈದು ವರ್ಷಗಳ ನಿರಂತರ ಹೋರಾಟದ ಫಲದಿಂದ ರಾಜ್ಯ...

ಸಕಲೇಶಪುರ | ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣ ಬೆಂಬಲ ನೀಡಬೇಕು: ಬಿ ಆರ್‌ ಪಾಟೀಲ್

ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣವಾಗಿ ಬೆಂಬಲ ನೀಡಿದಾಗ ಮಾತ್ರ ವ್ಯಸನವನ್ನು...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

Download Eedina App Android / iOS

X