ಬೆಳಗಾವಿ | ಭಾರೀ ಮಳೆಗೆ ಬೆಳೆಹಾನಿ; ಶೀಘ್ರ ಪರಿಹಾರಕ್ಕೆ ರೈತಸಂಘ ಆಗ್ರಹ

Date:

Advertisements

ಪ್ರವಾಹದಿಂದ ಉಂಟಾಗಿರುವ ಬೆಳೆಹಾನಿಗೆ ಶೀಘ್ರವೇ ಪರಿಹಾರ ನೀಡುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿದ ರೈತರು ಬೆಳಗಾವಿ ಜಿಲ್ಲೆಯ ಗೋಕಾಕ್‌ ತಾಲೂಕಿನ ತಹಶೀಲ್ದಾರ್‌ ಅವರಿಗೆ ಮನವಿ ಸಲ್ಲಿಸಿದರು.

ಗೋಕಾಕ್ ಮತ್ತು ಮೂಡಲಗಿ ತಾಲೂಕಿನ ಕರ್ನಾಟಕ ರಾಜ್ಯ ರೈತ ಸಂಘದ ಕಾರ್ಯಕರ್ತರು ಗೋಕಾಕ ನಗರದ ಪ್ರಮುಖ ವೃತ್ತಗಳಲ್ಲಿ ಸಂಚರಿಸಿ ತಹಶೀಲ್ದಾರರಿಗೆ ಮನವಿ ಸಲ್ಲಿಸಿದರು. ಬಳಿಕ “ಈ ವರ್ಷದ ಪ್ರವಾಹದಿಂದ ಬೆಳೆ ನಾಶವಾಗಿದೆ. ಇದರಿಂದ ರೈತರ ಸ್ಥಿತಿ ಅಂತಂತ್ರವಾಗಿದ್ದು, ಸಾಲದ ಸುಳಿಯಲ್ಲಿ ಸಿಲುಕುವಂತಾಗಿದೆ. ಹಾಗಾಗಿ ಆದಷ್ಟು ಬೇಗ ಪರಿಹಾರ ನೀಡಬೇಕು” ಎಂದು ಒತ್ತಾಯಿಸಿದರು. ‌

ರೈತ ಸಂಘ ಗೋಕಾಕ್

“ಜಿಲ್ಲೆಯಲ್ಲಿ ಪ್ರವಾಹದಿಂದ ಸೋಯಾಬಿನ್, ಜೋಳ, ಕಬ್ಬು, ಹತ್ತಿ ಮುಂತಾದ ಬೆಳೆಗಳು ನಾಶವಾಗಿದ್ದು, ರೈತರಿಗೆ ಸಾಕಷ್ಟು ನಷ್ಟವಾಗಿದೆ. ಆದಷ್ಟು ಬೇಗನೆ ಬೆಳೆಸಮೀಕ್ಷೆ ನಡೆಸಿ ಪರಿಹಾರ ನೀಡಬೇಕು” ಎಂದು ಆಗ್ರಹಿಸಿದರು.

Advertisements

ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ರೈತ ಮುಖಂಡ ಶಿವಪುತ್ರಪ್ಪ ಜಕಬಾಳ್ ಮಾತನಾಡಿ, “ರಾಜ್ಯದ ಅನೇಕ ಭಾಗಗಳಲ್ಲಿ ಪ್ರವಾಹದಿಂದ ಸಾಕಷ್ಟು ಬೆಳೆಗಳು ನಾಶವಾಗಿ ರೈತರು ಸಂಕಷ್ಟದಲ್ಲಿದ್ದಾರೆ. ರೈತರು ಬೆಳೆದ ಕಬ್ಬು, ಜೋಳ, ಹತ್ತಿ, ಸೋಯಾಬೀನ್ ಬೆಳೆಗಳು ಸಂಪೂರ್ಣವಾಗಿ ನಾಶವಾಗಿವೆ. ಈವರೆಗೂ ಸರಿಯಾದ ಪರಿಹಾರ ಸಿಕ್ಕಿಲ್ಲ. ಆದಷ್ಟು ಬೇಗನೆ ಅಧಿಕಾರಿಗಳು ಬೆಳೆಸಮೀಕ್ಷೆ ಮಾಡಿ ರೈತರಿಗೆ ಪರಿಹಾರ ನೀಡಬೇಕು. ಅಲ್ಲದೆ ಕೇಂದ್ರ ಸರ್ಕಾರ ಹಾಗೂ ರೈತ ಹೋರಾಟಗಾರರ ಜೊತೆ ಮಾಡಿಕೊಂಡ ಒಡಂಬಡಿಕೆಯನ್ನು ಅನುಷ್ಠಾನಕ್ಕೆ ತರಬೇಕು” ಎಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ಉಡುಪಿ | ಹದಗೆಟ್ಟಿರುವ ರಸ್ತೆಯ ದುರಸ್ತಿಗೆ ಸ್ಥಳೀಯರ ಆಗ್ರಹ.

ಕರ್ನಾಟಕ ರಾಜ್ಯ ರೈತ ಸಂಘದ ಉಪಾಧ್ಯಕ್ಷ ಶಿವನಗೌಡ ಪಾಟಿಲ್, ಜಿಲ್ಲಾ ಉಪಾಧ್ಯಕ್ಷ ಬಾಳಪ್ಪ ಪಾಟಿಲ್, ಗೋಕಾಕ ತಾಲೂಕು ಅಧ್ಯಕ್ಷರಾದ ಪರಸಪ್ಪ ಸಣ್ಣಪಾಣಿ, ಯಮನಪ್ಪ ಚೂಂಚನೂರ, ಶಂಕರ ಹುಗ್ಗಿ ಮತ್ತು ರೈತ ಸಂಘಟನೆಯ ಸದಸ್ಯರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

Download Eedina App Android / iOS

X