ರಾಜ್ಯ ವಿಧಾನಸಭೆ ಚುನಾವಣೆ ಮತದಾನ ಮೇ.10 ರಂದು ಭರ್ಜರಿಯಾಗಿ ನಡೆದಿತ್ತು. ಅದರಂತೆ ಮೇ.13ರ ಇಂದು 224 ಕ್ಷೇತ್ರದ ಫಲಿತಾಂಶಕ್ಕಾಗಿ ಇಡೀ ರಾಜ್ಯವೇ ಕಾದು ನೋಡುತ್ತಿದೆ. ಬೆಳ್ಳಂಬೆಳಿಗ್ಗೆ ಕಾಂಗ್ರೆಸ್ ಅಭ್ಯರ್ಥಿ ಲಕ್ಷ್ಮೀ ಹೆಬ್ಬಾಳ್ಕರ್ ದೇವಾಲಯದ ದರ್ಶನ ಮಾಡಿದ್ದಾರೆ.
ಬೆಳಗಾವಿ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಐತಿಹಾಸಿಕ ಹಿಂಡಲಗಾ ಗಣಪತಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ಮೈಸೂರಿನಲ್ಲಿ ಭರ್ಜರಿ ಆರಂಭ ಪಡೆದ ಕಾಂಗ್ರೆಸ್: ಮಾಜಿ ಸಿಎಂ ಸಿದ್ದರಾಮಯ್ಯ ಮುನ್ನಡೆ
“ವಿಜಯಕ್ಕೆ, ಸಿದ್ಧಿಗೆ ಹೆಸರಾಗಿರುವ ಹಿಂಡಲಗಾ ಗಣಪತಿಗೆ ಪೂಜೆ ಮಾಡಿದ್ದೇನೆ. ನನ್ನ ಕ್ಷೇತ್ರ, ತಮ್ಮ ಕಾಂಗ್ರೆಸ್ನ ಎಲ್ಲ ಕಾರ್ಯಕರ್ತರು ಹಾಗೂ ಪಕ್ಷಕ್ಕೆ ಒಳ್ಳೆಯದಾಗುವಂತೆ ಗಣೇಶನಲ್ಲಿ ಕೇಳಿಕೊಂಡಿದ್ದೇನೆ. ಈ ಬಾರಿ ನಾನು ಗೆದ್ದೇ ಗೆಲ್ಲುತ್ತೇನೆ. ಯಾರದೇ ಬೆಂಬಲವಿಲ್ಲದೇ ಈ ಬಾರಿ ಕರ್ನಾಟಕದಲ್ಲಿ ನಮ್ಮ ಪಕ್ಷ ಸ್ವತಂತ್ರವಾಗಿ ಅಧಿಕಾರಕ್ಕೆ ಬರುತ್ತದೆ. ನಾನೂ ಕೂಡ ಗೆದ್ದೇ ಗೆಲ್ಲುತ್ತೇನೆ” ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.