ಬೆಳಗಾವಿ | ಜಗದೀಶ್ ಶೆಟ್ಟರ್ ಸಿಎಂ ಆಗಿದ್ದಾಗಲೂ ಅನ್ಯಾಯ, ಸಂಸದರಾದಾಗಲೂ ಅನ್ಯಾಯ: ಜನರ ಆರೋಪ

Date:

Advertisements

ಜಗದೀಶ್ ಶೆಟ್ಟರ್ 2024ರ ಲೋಕಸಭಾ ಚುನಾವಣೆಯಲ್ಲಿ ಸ್ಥಳೀಯ ಬಿಜೆಪಿ ಮುಖಂಡರ ವಿರೋಧದ ನಡುವೆಯೂ ಬಿಜೆಪಿ ಟಿಕೆಟ್ ಪಡೆದು ಬೆಳಗಾವಿ ಲೋಕಸಭಾ ಸಂಸದರಾಗಿದ್ದಾರೆ. ಇವರು 2012 ಮತ್ತು 2013ರ ಅವಧಿಯಲ್ಲಿ ಮುಖ್ಯಮಂತ್ರಿಯಾಗಿದ್ದಾಗಲೂ ಬೆಳಗಾವಿಗೆ ಅನ್ಯಾಯ ಮಾಡಿದ್ದರು. ಈಗಲೂ ಸಂಸದರಾಗಿಯೂ ಕೂಡ ಬೆಳಗಾವಿಗೆ ಅನ್ಯಾಯ ಮಾಡುತ್ತಿದ್ದಾರೆ ಎಂದು ಜಿಲ್ಲೆಯ ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಜಗದೀಶ್ ಶೆಟ್ಟರ್ ಮುಖ್ಯಮಂತ್ರಿಯಾಗಿದ್ದಾಗ ಬೆಳಗಾವಿಗೆ ಬರಬೇಕಿದ್ದ ಹೈಕೋರ್ಟ್ ಪೀಠವನ್ನು ವಿರೋಧ ಮಾಡಿ ಧಾರವಾಡಕ್ಕೆ ಆಗುವಂತೆ ನೋಡಿಕೊಂಡಿದ್ದರು. ಆ ಸಂದರ್ಭದಲ್ಲಿಯೂ ಬೆಳಗಾವಿ ಜಿಲ್ಲೆಯ ಜನರಿಂದ ಆಕ್ರೋಶ ವ್ಯಕ್ತವಾಗಿತ್ತು.

ವಂದೇ ಭಾರತ್ ಎ‌ಕ್ಸ್‌ಪ್ರೆಸ್‌ ರೈಲು ಸಂಚಾರ ಧಾರವಾಡದವರೆಗೆ ಮಾತ್ರವೇ ಇತ್ತು. ನಂತರ ಬೆಳಗಾವಿಗೂ ವಂದೇ ಭಾರತ್ ರೈಲು ಸಂಚಾರವನ್ನು ವಿಸ್ತರಿಸಬೇಕೆಂಬ ಉದ್ದೇಶದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವು ಜನಪ್ರತಿನಿಧಿಗಳ ಒತ್ತಾಯಕ್ಕೆ ರೈಲ್ವೆ ಇಲಾಖೆ ಮಣಿಯಿತು. ರೈಲು ಸೇವೆಯನ್ನು ಬೆಳಗಾವಿಗೆ ವಿಸ್ತರಣೆ ಮಾಡಲಾಗುತ್ತದೆಂದು ಘೋಷಣೆ ಮಾಡಿತು. 2024ರ ನವೆಂಬರ್‌ನಲ್ಲಿ ಬೆಂಗಳೂರು-ಬೆಳಗಾವಿ ನಡುವಿನ ಪ್ರಾಯೋಗಿಕ ಸಂಚಾರವೂ ಯಶಸ್ವಿಯಾಗಿ ಮುಕ್ತಾಯಗೊಂಡಿತು.
ಧಾರವಾಡದಿಂದ ಬೆಳಗಾವಿವರೆಗೆ ಲೋಂಡಾ ಪ್ರದೇಶದಲ್ಲಿ ಹೆಚ್ಚು ತಿರುವುಗಳಿರುವುದರಿಂದ ವೇಗದ ಸಂಚಾರ ಅಸಾಧ್ಯವೆಂಬ ಕಾರಣ ನೀಡಲಾಗಿತ್ತು.

Advertisements

ಆದರೆ, ಈಗ ಇದೇ ಮಾರ್ಗದಲ್ಲಿ ಪುಣೆಯಿಂದ ಬೆಳಗಾವಿ, ಬೆಳಗಾವಿಯಿಂದ ಹುಬ್ಬಳ್ಳಿಗೆ ವಂದೇ ಭಾರತ್‌ ರೈಲು ಸಂಚರಿಸಲು ಗ್ರೀನ್‌ ಸಿಗ್ನಲ್‌ ನೀಡಲಾಗಿದೆ. ಈ ರೈಲಿಗೆ ಆ ತಿರುವುಗಳು ಅಡ್ಡಿಯಾಗುವುದಿಲ್ಲ ಏಕೆ ಎಂಬುದು ಬೆಳಗಾವಿ ಜಿಲ್ಲೆಯ ಜನರ ಆಕ್ರೋಶಕ್ಕೆ ಕಾರಣವಾಗಿದೆ.

ಬಿಜೆಪಿಯಿಂದ ಬೆಳಗಾವಿ ಲೋಕಸಭಾ ಟಿಕೆಟ್ ನೀಡಿದಾಗಲೂ ಇದೇ ಕಾರಣಕ್ಕೆ ʼಗೋ ಬ್ಯಾಕ್ ಜಗದೀಶ್ ಶೆಟ್ಟರ್ ಬೆಳಗಾವಿಗೆ ವಂದೇ ಭಾರತ್‌ ಎಕ್ಸ್‌ಪ್ರೆಸ್ ರೈಲು ಬೇಕು, ಜಗದೀಶ್ ಶೆಟ್ಟರ್ ಬೇಡʼವೆಂದು ಸಾಮಾಜಿಕ ಜಾಲತಾಣಗಳಲ್ಲಿ ಅಭಿಯಾನವನ್ನೂ ಮಾಡಿದ್ದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಸಿಎಂ ಬದಲಾವಣೆ ಪರಿಸ್ಥಿತಿ ಬಂದರೆ ನಾನೂ ಸಿಎಂ ಆಕಾಂಕ್ಷಿ: ಶಾಮನೂರು ಶಿವಶಂಕರಪ್ಪ

ಈ ಕುರಿತು ಸ್ವಾಭಿಮಾನಿ ಶೇತಕರಿ ರೈತ ಸಂಘಟನೆಯ ಮುಖಂಡರಾದ ಶಿವಲೀಲಾ ಮಿಸಾಳೆಯವರು ಈ ದಿನ.ಕಾಮ್ ಜೊತೆ ಮಾತನಾಡಿ, “ನಮ್ಮ ಜಿಲ್ಲೆಯ ಮೊದಲ ಬೇಡಿಕೆ ಧಾರವಾಡದಿಂದ ಬೆಳಗಾವಿಗೆ ವಂದೇ ಭಾರತ್ ರೈಲು ಸಂಚಾರ ಆಗಿಬೇಕಿತ್ತು. ಆದರೆ ಮಹಾರಾಷ್ಟ್ರದ ವಿಧಾನಸಭಾ ಚುನಾವಣೆಯ ಲಾಭಕ್ಕಾಗಿ ಪೂನಾದಿಂದ ಬೆಳಗಾವಿಗೆ ವಂದೇ ಭಾರತ್ ರೈಲು ಸಂಚಾರ ಆರಂಭವಾಗಿದೆ. ಇದರಲ್ಲಿ ಜಿಲ್ಲೆಯ ಜನರ ಹಿತಾಸಕ್ತಿ ಏನಿಲ್ಲ” ಎಂದು ತಿಳಿಸಿದ್ದಾರೆ.

ಬೆಳಗಾವಿ ಜಿಲ್ಲೆಯ ವಿಷಯದಲ್ಲಿ ಕೇಂದ್ರ ಸರ್ಕಾರದ ಅನ್ಯಾಯ ಧೋರಣೆ ಏಕೆ ಎಂಬ ಪ್ರಶ್ನೆಗೆ ಜಗದೀಶ್ ಶೆಟ್ಟರ್ ಮತ್ತು ಕೇಂದ್ರ ಸರ್ಕಾರ ಉತ್ತರಿಸಬೇಕಿದೆ

ಸುನಿಲ್
ಸುನಿಲ್ ಹಂಪನ್ನವರ
+ posts

ಬೆಳಗಾವಿ ಜಿಲ್ಲಾ ಸಂಯೋಜಕರು

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಸುನಿಲ್ ಹಂಪನ್ನವರ
ಸುನಿಲ್ ಹಂಪನ್ನವರ
ಬೆಳಗಾವಿ ಜಿಲ್ಲಾ ಸಂಯೋಜಕರು

3 COMMENTS

  1. ದೀರ್ಘ ಕಾಲದ ಅಧಿಕಾರದಲ್ಲಿ ಇದ್ದರೂ ಉತ್ತರ ಕರ್ನಾಟಕಕ್ಕೆ ವಿಶೇಷವಾಗಿ ಹುಬ್ಬಳ್ಳಿ ಧಾರವಾಡ ಗಳಿಗೆ ಇವರ ಕೊಡುಗೆ ಭಾಳಾ ಕಮ್ಮಿ,, ಸಮುದಾಯದ ಪರವಾಗಿ ಸಹ ನಿಲ್ಲದವರು,, ತಮ್ಮ ಅಭಿವೃದ್ಧಿ ಮಾಡಿಕೊಳ್ಳಲು ಹಿಂದೆ ಬಿದ್ದಿಲ್ಲ,,, ಎಲ್ಲಕ್ಕಿಂತ ಹೆಚ್ಚಾಗಿ ಅವರ ಪಕ್ಷದಲ್ಲಿ ಗಟ್ಟಿಯಾಗಿ ಮಾತಾಡುವ ಅವಕಾಶವೂ ಇಲ್ಲ ಧೈರ್ಯವೂ ಇಲ್ಲ

  2. ಜಗದೀಶ ಶೆಟ್ಟರ ಗಟ್ಟಿಯಾಗಿ ಮಾತನಾಡುವ ವ್ಯಕ್ತಿ ಅಲ್ಲ ಒಂದೇ ಭಾರತ ಅಲ್ಲದೆ ಧಾರವಾಡ ಬೆಳಗಾವಿ ನೇರ ರೈಲು ಮಾರ್ಗಕ್ಕೆ ಈ ವರ್ಷ ಬಜೆಟ್ಟಿನಲ್ಲಿ ಬರೀ 20 ಕೋಟಿ ಮಾತ್ರ ಇಟ್ಟಿದ್ದಾರೆ ಅದಕ್ಕೂ ಧ್ವನಿ ಎತ್ತುವುದಿಲ್ಲ ಮಹಾದಾಯಿ ವಿಚಾರದಲ್ಲೂ ಅನ್ಯಾಯ ಈ ಪ್ರಹ್ಲಾದ ಜೋಷಿ ಮೋದಿ ಜೊತೆ ಇದ್ದು ನಮಗೆ ಬರಬೇಕಾದ ನೀರನ್ನು ತರಲು ಆಗುತ್ತಿಲ್ಲ ಬರೀ ಮಾತು ಕೇಳಿ

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

Download Eedina App Android / iOS

X