ಬೆಳಗಾವಿ | ಜಗದೀಶ್ ಶೆಟ್ಟರ್ ಸಿಎಂ ಆಗಿದ್ದಾಗಲೂ ಅನ್ಯಾಯ, ಸಂಸದರಾದಾಗಲೂ ಅನ್ಯಾಯ: ಜನರ ಆರೋಪ

Date:

ಜಗದೀಶ್ ಶೆಟ್ಟರ್ 2024ರ ಲೋಕಸಭಾ ಚುನಾವಣೆಯಲ್ಲಿ ಸ್ಥಳೀಯ ಬಿಜೆಪಿ ಮುಖಂಡರ ವಿರೋಧದ ನಡುವೆಯೂ ಬಿಜೆಪಿ ಟಿಕೆಟ್ ಪಡೆದು ಬೆಳಗಾವಿ ಲೋಕಸಭಾ ಸಂಸದರಾಗಿದ್ದಾರೆ. ಇವರು 2012 ಮತ್ತು 2013ರ ಅವಧಿಯಲ್ಲಿ ಮುಖ್ಯಮಂತ್ರಿಯಾಗಿದ್ದಾಗಲೂ ಬೆಳಗಾವಿಗೆ ಅನ್ಯಾಯ ಮಾಡಿದ್ದರು. ಈಗಲೂ ಸಂಸದರಾಗಿಯೂ ಕೂಡ ಬೆಳಗಾವಿಗೆ ಅನ್ಯಾಯ ಮಾಡುತ್ತಿದ್ದಾರೆ ಎಂದು ಜಿಲ್ಲೆಯ ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

- Advertisement -

ಜಗದೀಶ್ ಶೆಟ್ಟರ್ ಮುಖ್ಯಮಂತ್ರಿಯಾಗಿದ್ದಾಗ ಬೆಳಗಾವಿಗೆ ಬರಬೇಕಿದ್ದ ಹೈಕೋರ್ಟ್ ಪೀಠವನ್ನು ವಿರೋಧ ಮಾಡಿ ಧಾರವಾಡಕ್ಕೆ ಆಗುವಂತೆ ನೋಡಿಕೊಂಡಿದ್ದರು. ಆ ಸಂದರ್ಭದಲ್ಲಿಯೂ ಬೆಳಗಾವಿ ಜಿಲ್ಲೆಯ ಜನರಿಂದ ಆಕ್ರೋಶ ವ್ಯಕ್ತವಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ವಂದೇ ಭಾರತ್ ಎ‌ಕ್ಸ್‌ಪ್ರೆಸ್‌ ರೈಲು ಸಂಚಾರ ಧಾರವಾಡದವರೆಗೆ ಮಾತ್ರವೇ ಇತ್ತು. ನಂತರ ಬೆಳಗಾವಿಗೂ ವಂದೇ ಭಾರತ್ ರೈಲು ಸಂಚಾರವನ್ನು ವಿಸ್ತರಿಸಬೇಕೆಂಬ ಉದ್ದೇಶದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವು ಜನಪ್ರತಿನಿಧಿಗಳ ಒತ್ತಾಯಕ್ಕೆ ರೈಲ್ವೆ ಇಲಾಖೆ ಮಣಿಯಿತು. ರೈಲು ಸೇವೆಯನ್ನು ಬೆಳಗಾವಿಗೆ ವಿಸ್ತರಣೆ ಮಾಡಲಾಗುತ್ತದೆಂದು ಘೋಷಣೆ ಮಾಡಿತು. 2024ರ ನವೆಂಬರ್‌ನಲ್ಲಿ ಬೆಂಗಳೂರು-ಬೆಳಗಾವಿ ನಡುವಿನ ಪ್ರಾಯೋಗಿಕ ಸಂಚಾರವೂ ಯಶಸ್ವಿಯಾಗಿ ಮುಕ್ತಾಯಗೊಂಡಿತು.
ಧಾರವಾಡದಿಂದ ಬೆಳಗಾವಿವರೆಗೆ ಲೋಂಡಾ ಪ್ರದೇಶದಲ್ಲಿ ಹೆಚ್ಚು ತಿರುವುಗಳಿರುವುದರಿಂದ ವೇಗದ ಸಂಚಾರ ಅಸಾಧ್ಯವೆಂಬ ಕಾರಣ ನೀಡಲಾಗಿತ್ತು.

ಆದರೆ, ಈಗ ಇದೇ ಮಾರ್ಗದಲ್ಲಿ ಪುಣೆಯಿಂದ ಬೆಳಗಾವಿ, ಬೆಳಗಾವಿಯಿಂದ ಹುಬ್ಬಳ್ಳಿಗೆ ವಂದೇ ಭಾರತ್‌ ರೈಲು ಸಂಚರಿಸಲು ಗ್ರೀನ್‌ ಸಿಗ್ನಲ್‌ ನೀಡಲಾಗಿದೆ. ಈ ರೈಲಿಗೆ ಆ ತಿರುವುಗಳು ಅಡ್ಡಿಯಾಗುವುದಿಲ್ಲ ಏಕೆ ಎಂಬುದು ಬೆಳಗಾವಿ ಜಿಲ್ಲೆಯ ಜನರ ಆಕ್ರೋಶಕ್ಕೆ ಕಾರಣವಾಗಿದೆ.

ಬಿಜೆಪಿಯಿಂದ ಬೆಳಗಾವಿ ಲೋಕಸಭಾ ಟಿಕೆಟ್ ನೀಡಿದಾಗಲೂ ಇದೇ ಕಾರಣಕ್ಕೆ ʼಗೋ ಬ್ಯಾಕ್ ಜಗದೀಶ್ ಶೆಟ್ಟರ್ ಬೆಳಗಾವಿಗೆ ವಂದೇ ಭಾರತ್‌ ಎಕ್ಸ್‌ಪ್ರೆಸ್ ರೈಲು ಬೇಕು, ಜಗದೀಶ್ ಶೆಟ್ಟರ್ ಬೇಡʼವೆಂದು ಸಾಮಾಜಿಕ ಜಾಲತಾಣಗಳಲ್ಲಿ ಅಭಿಯಾನವನ್ನೂ ಮಾಡಿದ್ದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಸಿಎಂ ಬದಲಾವಣೆ ಪರಿಸ್ಥಿತಿ ಬಂದರೆ ನಾನೂ ಸಿಎಂ ಆಕಾಂಕ್ಷಿ: ಶಾಮನೂರು ಶಿವಶಂಕರಪ್ಪ

ಈ ಕುರಿತು ಸ್ವಾಭಿಮಾನಿ ಶೇತಕರಿ ರೈತ ಸಂಘಟನೆಯ ಮುಖಂಡರಾದ ಶಿವಲೀಲಾ ಮಿಸಾಳೆಯವರು ಈ ದಿನ.ಕಾಮ್ ಜೊತೆ ಮಾತನಾಡಿ, “ನಮ್ಮ ಜಿಲ್ಲೆಯ ಮೊದಲ ಬೇಡಿಕೆ ಧಾರವಾಡದಿಂದ ಬೆಳಗಾವಿಗೆ ವಂದೇ ಭಾರತ್ ರೈಲು ಸಂಚಾರ ಆಗಿಬೇಕಿತ್ತು. ಆದರೆ ಮಹಾರಾಷ್ಟ್ರದ ವಿಧಾನಸಭಾ ಚುನಾವಣೆಯ ಲಾಭಕ್ಕಾಗಿ ಪೂನಾದಿಂದ ಬೆಳಗಾವಿಗೆ ವಂದೇ ಭಾರತ್ ರೈಲು ಸಂಚಾರ ಆರಂಭವಾಗಿದೆ. ಇದರಲ್ಲಿ ಜಿಲ್ಲೆಯ ಜನರ ಹಿತಾಸಕ್ತಿ ಏನಿಲ್ಲ” ಎಂದು ತಿಳಿಸಿದ್ದಾರೆ.

ಬೆಳಗಾವಿ ಜಿಲ್ಲೆಯ ವಿಷಯದಲ್ಲಿ ಕೇಂದ್ರ ಸರ್ಕಾರದ ಅನ್ಯಾಯ ಧೋರಣೆ ಏಕೆ ಎಂಬ ಪ್ರಶ್ನೆಗೆ ಜಗದೀಶ್ ಶೆಟ್ಟರ್ ಮತ್ತು ಕೇಂದ್ರ ಸರ್ಕಾರ ಉತ್ತರಿಸಬೇಕಿದೆ

WhatsApp Image 2025 11 17 at 5.27.06 PM
ಸುನಿಲ್ ಹಂಪನ್ನವರ
+ posts

ಬೆಳಗಾವಿ ಜಿಲ್ಲಾ ಸಂಯೋಜಕರು

ಪೋಸ್ಟ್ ಹಂಚಿಕೊಳ್ಳಿ:

ಸುನಿಲ್ ಹಂಪನ್ನವರ
ಸುನಿಲ್ ಹಂಪನ್ನವರ
ಬೆಳಗಾವಿ ಜಿಲ್ಲಾ ಸಂಯೋಜಕರು

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಜನಪ್ರತಿನಿಧಿಗಳನ್ನು ಕಡೆಗಣಿಸಿ ಕಾಮಗಾರಿ ನಡೆಸಿದರೆ ಸಹಿಸುವುದಿಲ್ಲ: ಶಾಸಕ ಡಾ.ಕೊತ್ತೂರು ಜಿ ಮಂಜುನಾಥ್ ಗರಂ

ಸ್ಥಳೀಯ ಜನಪ್ರತಿನಿಧಿಗಳ ಗಮನಕ್ಕೆ ತರದೆ ಹಾಗೂ ಶಿಷ್ಟಾಚಾರ ಪಾಲಿಸದೆ ಏಕಾಏಕಿ ಕಾಮಗಾರಿಗಳನ್ನು...

ಕೊಲ್ಹಾರ | ಶಾಸಕರಿಲ್ಲದ ಪ್ರಜಾಸೇವಾ ಆಂದೋಲನ: ಅಹವಾಲು ಹೊತ್ತುಬಂದವರಿಗೆ ನಿರಾಸೆ, ಅಧಿಕಾರಿಗಳಿಂದ ಪರಿಹಾರದ ಭರವಸೆ

ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಶಾಸಕರಿಲ್ಲದೆ ಪ್ರಜಾಸೇವಾ ಆಂದೋಲನ ನಡೆಯಿತು. ಇದರಿಂದಾಗಿ...

ಬಾಗಲಕೋಟೆ | ಹಾವು ಕಚ್ಚಿದರೆ ಕ್ಷಣವೂ ತಡಮಾಡದೆ, ಸರ್ಕಾರಿ ಆಸ್ಪತ್ರೆಯತ್ತ ಧಾವಿಸಿ: ಡಾ. ಮಹೇಶ ಕೋಣಿ

ಹಾವು ಕಡಿತಕ್ಕೆ ಒಳಗಾದವರು ಆತಂಕಕ್ಕೊಳಗಾಗಿ ನಾಟಿ ಚಿಕಿತ್ಸೆ, ನಕಲಿ ವೈದ್ಯರ ಮೊರೆ...

ರಾಯಚೂರು | ಕೆ. ಶಾಂತಪ್ಪ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿರುವುದು ಸಂತಸದ ವಿಚಾರ: ಬೋಸರಾಜು

ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಕೆ. ಶಾಂತಪ್ಪ ಅವರು ಜವಾಬ್ದಾರಿ...