ಬೆಳಗಾವಿ | ಕಿತ್ತೂರು ಉತ್ಸವ; ವೇದಿಕೆಯಲ್ಲೇ ಭಜನಾ ಕಲಾವಿದ ಹೃದಯಾಘಾತದಿಂದ ನಿಧನ

Date:

Advertisements

ಬೆಳಗಾವಿ ಜಿಲ್ಲೆಯ ಕಿತ್ತೂರು ಚೆನ್ನಮ್ಮ ಕೋಟೆ ಆವರಣದಲ್ಲಿ ಕಿತ್ತೂರು ಉತ್ಸವ ಪ್ರಯುಕ್ತ ಹಮ್ಮಿಕೊಂಡಿದ್ದ ಭಜನೆ ಸ್ಪರ್ಧೆಯಲ್ಲಿ ಭಜನಾ ಕಲಾವಿದ ಹೃದಯಾಘಾತದಿಂದ ನಿಧನರಾಗಿರುವ ಘಟನೆ ನಡೆದಿದೆ.

ಕಿತ್ತೂರು ತಾಲೂಕಿನ ಬಸಾಪುರ-ಶೀಗಿಹಳ್ಳಿಯ ಭಜನಾ ತಂಡದ ಸದಸ್ಯ ಈರಪ್ಪ ಫಕ್ಕೀರಪ್ಪ ಬಬ್ಲಿ(48) ಮೃತಪಟ್ಟವರು. ಅವರಿಗೆ ಪತ್ನಿ, ಪುತ್ರ, ಇಬ್ಬರು ಪುತ್ರಿಯರು ಇದ್ದಾರೆ ಎಂದು ತಿಳಿದುಬಂದಿದೆ.

ಕಿತ್ತೂರು ಉತ್ಸವ ಪ್ರಯುಕ್ತ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಭಾನುವಾರ ಆಯೋಜಿಸಿದ್ದ ಭಜನಾ ಸ್ಪರ್ಧೆಯಲ್ಲಿ ಭಜನಾ ಕಲಾವಿದ ಈರಪ್ಪ ಫಕ್ಕೀರಪ್ಪ ಬಬ್ಲಿ ತಮ್ಮ ತಂಡದೊಂದಿಗೆ ಭಾಗಿಯಾಗಿದ್ದರು.

Advertisements

ಈ ಸುದ್ದಿ ಓದಿದ್ದೀರಾ? ತುರುವೇಕೆರೆ | ಸರೋಜಿನಿ ಮಹಿಷಿ ವರದಿ ಅನುಷ್ಠಾನಗೊಳಿಸಲು ಹಿರಿಯ ಸಾಹಿತಿ ಎಸ್.ಜಿ.ಸಿದ್ದರಾಮಯ್ಯ ಆಗ್ರಹ

“ಹಾಡು ಮುಗಿದ ನಂತರ ಕೈಯಲ್ಲಿ ಹಿಡಿದಿದ್ದ ತಾಳದೊಂದಿಗೆ ಇಳಿಯುತ್ತಿದ್ದಾಗ ವೇದಿಕೆಯಲ್ಲಿಯೇ ಕುಸಿದು ಬಿದ್ದರು. ಕೂಡಲೇ ನೋಡುವಷ್ಟರಲ್ಲಿ ಅಲ್ಲಿಯೇ ಅವರು ಉಸಿರು ಚೆಲ್ಲಿದ್ದರು” ಎಂದು ಸ್ಥಳದಲ್ಲಿಯೇ ಇದ್ದ ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

Download Eedina App Android / iOS

X