ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆ; ಮರಾಠಿಗ ಮಂಗೇಶ ಮೇಯರ್, ಉಪಮೇಯರ್ ಸ್ಥಾನಕ್ಕೆ ವಾಣಿ ಆಯ್ಕೆ

Date:

ಬೆಳಗಾವಿ ಮಹಾನಗರ ಪಾಲಿಕೆಯ 23ನೇ ಅವಧಿಯ ಮೇಯರ್ ಆಗಿ ಮಂಗೇಶ ಪವಾರ ಹಾಗೂ‌ ಉಪಮೇಯರ್ ಆಗಿ ವಾಣಿ‌ ವಿಲಾಸ ಜೋಶಿ‌ ಶನಿವಾರ ಬಹುಮತದಿಂದ ಆಯ್ಕೆಯಾದರು.

- Advertisement -

ಮೇಯರ್ ಸ್ಥಾನ ಸಾಮಾನ್ಯ ಹಾಗೂ ಉಪಮೇಯರ್ ಸ್ಥಾನ ಸಾಮಾನ್ಯ ಮಹಿಳೆಗೆ ಮೀಸಲಾಗಿತ್ತು. 40 ಸದಸ್ಯರನ್ನು ಹೊಂದಿರುವ ಬಿಜೆಪಿ ಗುಂಪು ಮತ್ತೊಮ್ಮೆ ಪಾಲಿಕೆ‌ ಚುಕ್ಕಾಣಿ ‌ಹಿಡಿದಿದೆ. ಮರಾಠಿಗರಾದ ಮಂಗೇಶ 41ನೇ ವಾರ್ಡಿನ ಸದಸ್ಯ, ಕನ್ನಡತಿಯಾದ ವಾಣಿ 43ನೇ ವಾರ್ಡಿನ ಸದಸ್ಯೆಯಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...

ಈ ಎರಡೂ‌ ವಾರ್ಡುಗಳು ದಕ್ಷಿಣ ವಿಧಾನಸಭಾ‌ ಕ್ಷೇತ್ರಕ್ಕೆ ಬರುತ್ತವೆ. ಪಾಲಿಕೆ ಮೇಲೆ ಬಿಗಿ ಹಿಡಿತ ಸಾಧಿಸಿರುವ ಶಾಸಕ ಅಭಯ ಈ ಅಯ್ಕೆಗೆ ಮುಂಚೂಣಿ ನಾಯಕತ್ವ ವಹಿಸಿದ್ದರು.

ಚುನಾವಣಾ ಪ್ರಕ್ರಿಯೆ: ಸರಿಯಾಗಿ 1 ಗಂಟೆಗೆ ಪ್ರಾದೇಶಿಕ ಆಯುಕ್ತ ಎಸ್ ಬಿ ಶೆಟ್ಟೆನ್ನವರ ಚುನಾವಣಾ ಪ್ರಕ್ರಿಯೆ ಆರಂಭಿಸಿದರು. ಮೇಯರ್ ಸ್ಥಾನಕ್ಕೆ ಬಿಜೆಪಿಯ ಮಂಗೇಶ ಪವಾರ್, ರಾಜು ಭಾತಖಾಂಡೆ, ಎಂಇಎಸ್ ನ ಬಸವರಾಜ ಮಾರುತಿ ಮೋದಗೇಕರ, ಎಐಎಂಐಎಂನ ಶಾಹಿದಖಾನ್ ಪಠಾಣ ತಲಾ 2 ನಾಮಪತ್ರ ಸಲ್ಲಿಸಿದ್ದರು. 2 ನಿಮಿಷ ಅವಕಾಶದ ಬಳಿಕ ರಾಜು ಭಾತಖಾಂಡೆ ಹಾಗೂ ಶಾಹಿದಖಾನ್ ಪಠಾಣ ಉಮೇದುವಾರಿಕೆ ಹಿಂಪಡೆದರು.

ಮಂಗೇಶ ಹಾಗೂ ಬಸವಾರಾಜ ಮಧ್ಯೆ ಚುನಾವಣೆ ನಡೆಯಿತು. ಮಂಗೇಶ ಪರವಾಗಿ 40 ವಿರುದ್ಧವಾಗಿ 5 ಮತಗಳು ಚಲಾವಣೆಯಾದವು. ತಟಸ್ಥವಾಗಿ ಇರುವ ಆಯ್ಕೆಗೆ ಯಾರೂ ಕೈ ಎತ್ತಲಿಲ್ಲ. ಬಸವಾರಾಜ ಪರವಾಗಿ 20, ವಿರೋಧವಾಗಿ 40 ಮತಗಳು ಬಂದವು.

ಅತಿ ಹೆಚ್ಚು ಮತ ಪಡೆದ ಮಂಗೇಶ ಅವರನ್ನು ಮೇಯರ್ ಎಂದು ಘೋಷಿಸಲಾಯಿತು. ಉಪಮೇಯರ್ ಸ್ಥಾನಕ್ಕೆ ವಾಣಿ ವಿಲಾಸ ಜೋಶಿ, ದೀಪಾಲಿ ಟೊಪ್ಪಗಿ, ಶ್ರೀಮತಿ ಖುರ್ಷಿದ್ ಮುಲ್ಲಾ, ಲಕ್ಷ್ಮೀ ಲೋಕರಿ ತಲಾ 2 ನಾಮಪತ್ರ ಸಲ್ಲಿದ್ದರು. ಖುರ್ಷಿದ್ ಮುಲ್ಲಾ ಹಾಗೂ ದೀಪಾಲಿ ಉಮೇದುವಾರಿಕೆ ವಾಪಸ್ ಪಡೆದರು.

ಈ ಸುದ್ದಿ ಓದಿದ್ದೀರಾ? ಅಥಣಿ | ʼಪರಿಶಿಷ್ಟರಿಗೆ 50 ವರ್ಷಗಳಿಂದ ಮರೀಚಿಕೆಯಾದ ಮೂಲಸೌಕರ್ಯʼ

ಕಣದಲ್ಲಿ ಉಳಿದ ವಾಣಿ ವಿಲಾಸ ಜೋಶಿ ಪರವಾಗಿ 40 ವಿರೋಧವಾಗಿ‌ 19 ಮತಗಳು ಬಂದವು. ಲಕ್ಷ್ಮೀ ಲೋಕರಿ ಪರವಾಗಿ 20 ವಿರೋಧವಾಗಿ 40 ಮತಗಳು ಬಂದವು. ಹೆಚ್ಚು ಮತ ಪಡೆದ ವಾಣಿ ಅವರನ್ನು ಉಪಮೇಯರ್ ಎಂದು‌ ಘೋಷಿಸಲಾಯಿತು.

ಸಚಿವೆ ಲಕ್ಷ್ಮೀ ಹೆಬ್ಬಾಳಕರ, ಸತೀಶ ಜಾರಕಿಹೊಳಿ, ಶಾಸಕ ಆಸಿಫ್ ಸೇಠ್, ಸಂಸದೆ ಪ್ರಿಯಾಂಕ ಜಾರಕಿಹೊಳಿ ಹಾಗೂ ಒಬ್ಬ ಪಾಲಿಕೆ ಸದಸ್ಯ ಗೈರಾದರು. 65 ಮತದಾರ ಪೈಕಿ 60 ಮಂದಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಸ್ತೂರಿ ರಂಗನ್ ವರದಿ ಅಧಿಸೂಚನೆ ತಕ್ಷಣ ಹಿಂಪಡೆಯಿರಿ: ಕಾಂಗ್ರೆಸ್ ಆಗ್ರಹ

ಪಶ್ಚಿಮ ಘಟ್ಟ ಹಾಗೂ ಅದರ ತಪ್ಪಲು ಪ್ರದೇಶಗಳ ನಿವಾಸಿಗಳಿಗೆ ಮಾರಕವಾಗಿರುವ ಕಸ್ತೂರಿ...

ಕಲಬುರಗಿ | ₹16 ಸಾವಿರ ಕೋಟಿ ವೆಚ್ಚಕ್ಕೆ ಲೆಕ್ಕವೆಲ್ಲಿ? 371(ಜೆ) ಕುರಿತು ಶ್ವೇತಪತ್ರಕ್ಕೆ ಸಿಪಿಐ,ಎಐಕೆಎಸ್ ಪಟ್ಟು

ಕಲ್ಯಾಣ ಕರ್ನಾಟಕ ಅಭಿವೃದ್ಧಿಗಾಗಿ 371(ಜೆ) ಅಡಿಯಲ್ಲಿ ಇದುವರೆಗೆ ಖರ್ಚು ಮಾಡಿರುವ ₹16...

ಉಡುಪಿ | UAPA, NSA ಕಾಯ್ದೆಗಳು ಸಂವಿಧಾನಿಕ ಹಕ್ಕುಗಳ ದಮನಕ್ಕೆ ಅಸ್ತ್ರವಾಗುತ್ತಿವೆ : ಪ್ರೊ. ಫಣಿರಾಜ್

ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಬಂಧನವಾಗಿ ಆರು ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ,...

ಉಡುಪಿ | ಕಟ್‌ಬೇಲ್ತೂರು ರೈಲ್ವೆ ಸೇತುವೆ ಅಪಾಯಕಾರಿ ತಿರುವು ಸರಿಪಡಿಸಲು ಆಗ್ರಹಿಸಿ ಸಿಪಿಎಂ ಪ್ರತಿಭಟನೆ

ಕಟ್‌ಬೇಲ್ತೂರು ಗ್ರಾಮದ ರೈಲ್ವೆ ಸೇತುವೆಯಲ್ಲಿರುವ ಅಪಾಯಕಾರಿ ತಿರುವನ್ನು ತಕ್ಷಣ ಸರಿಪಡಿಸಿ, ಸಾರ್ವಜನಿಕರ...