ಬೆಳಗಾವಿ | ಬೆಳೆಗಳಿಗೆ ಡ್ರೋನ್ ಮೂಲಕ ಪೋಷಕಾಂಶ ಸಿಂಪಡಣೆ; ಸಚಿವ ಸತೀಶ್ ಜಾರಕಿಹೊಳಿ‌ ಚಾಲನೆ

Date:

Advertisements

ಬೆಳೆಗಳಿಗೆ ಡ್ರೋನ್‌ ಮೂಲಕ ಪೋಷಕಾಂಶ ಸಿಂಪಡಣೆ ಮಾಡುವುದು ಕೃಷಿ ಚಟುವಟಿಕೆಗಳಿಗೆ ಅನುಕೂಲ ಮಾಡಿಕೊಡುವ ಒಳ್ಳೆಯ ಪದ್ಧತಿಯಾಗಿದೆ. ರೈತರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಬೆಳಗಾವಿ ಉಸ್ತುವಾರಿ ಸಚಿವ ಸತೀಶ್‌ ಜಾರಕಿಹೊಳಿ ತಿಳಿಸಿದರು.

ಬೆಳಗಾವಿ ಜಿಲ್ಲಾ ಪಂಚಾಯತ್, ಕೃಷಿ ಇಲಾಖೆ ಹಾಗೂ ರೋಟರಿ ಕ್ಲಬ್ ವತಿಯಿಂದ ಹತ್ತರಗಿ ಬಳಿಯ ಕೃಷಿ ಜಮೀನಿನಲ್ಲಿ ಆಯೋಜಿಸಲಾದ ಸೋಯಾ ಮತ್ತು ಅವರೆ ಬೆಳೆಗಳಿಗೆ ಡ್ರೋನ್ ಮೂಲಕ ಪೋಷಕಾಂಶಗಳ ಸಿಂಪಡಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

“ಡ್ರೋನ್‌ ಮೂಲಕ ಪೋಷಕಾಂಶ ಸಿಂಪಡಣೆ ಮಾಡುವುದರಿಂದ ಕೃಷಿ ಚಟುವಟಿಕೆಗಳಿಗೆ ಅನುಕೂಲವಾಗುತ್ತದೆ ಮತ್ತು ವೇಗವಾಗಿ ಕೃಷಿ ಚಟುವಟಿಕೆ ನಿರ್ವಹಿಸಲು ಸಾಧ್ಯವಾಗುತ್ತದೆ. ರೈತರು ಹೊಸ ತಂತ್ರಜ್ಞಾನದ ಮೂಲಕ ಕೃಷಿ ಚಟುವಟಿಕೆಗಳಲ್ಲಿ ಬೆಳವಣಿಗೆಯಾಗಬೇಕು” ಎಂದರು.

Advertisements

ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಶಿವನಗೌಡ ಪಾಟೀಲ ಮಾತನಾಡಿ, “37 ಡ್ರೋನ್‌ಗಳನ್ನು ಸೋಯಾ, ಅವರೆ ಬೆಳೆಗಳಿಗೆ ಪೋಷಕಾಂಶಗಳ ಸಿಂಪಡಣೆಗೆ ಬಳಕೆ ಮಾಡಲಾಗುತ್ತಿದೆ. ರೈತರು ಬೆಳೆದ ವಿವಿಧ ಬೆಳೆಗಳಿಗೆ ಪೋಷಕಾಂಶ ಮತ್ತು ರಸಗೊಬ್ಬರಗಳನ್ನು ಸಿಂಪಡಣೆ ಮಾಡಲು ಈ ವಿಧಾನ ಅನುಕೂಲವಾಗಿದೆ” ಎಂದು ಹೇಳಿದರು.

“ಪ್ರತಿ ಎಕರೆ ಸಿಂಪಡಣೆಗೆ ಕೇವಲ ₹400 ಖರ್ಚಾಗುತ್ತದೆ. ಡ್ರೋನ್ ಮೂಲಕ ವಿವಿಧ ಬೆಳೆಗಳಿಗೆ ಕೀಟನಾಶಕ, ರಸಗೊಬ್ಬರ ಸಿಂಪಡಣೆ ಮಾಡಬಹುದು. ರೈತರಿಗೆ ತಾಂತ್ರಿಕತೆಯ ಅರಿವು ಮೂಡಿಸುವ ಉದ್ದೇಶದಿಂದ ಈ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ” ಎಂದು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಕಲಬುರಗಿ | ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಅನುಮತಿ; ರಾಜ್ಯಪಾಲರ ಅಧಿಕಾರ ದುರುಪಯೋಗಕ್ಕೆ ಸಿಪಿಐಎಂ ಖಂಡನೆ

“ಜಿಲ್ಲೆಯ ರೈತ ಸಮುದಾಯವು ರೈತ ಸಂಪರ್ಕ ಕೇಂದ್ರ ಅಥವಾ ಕೃಷಿ ಇಲಾಖೆಯನ್ನು ಸಂಪರ್ಕಿಸಿ ಡ್ರೋನ್ ಬಳಕೆ ಬಗ್ಗೆ ಮಾಹಿತಿ ಪಡೆಯಬೇಕು. ಈಗಾಗಲೇ ಕಿತ್ತೂರು ಬೈಲಹೊಂಗಲ ಬಾಗೇವಾಡಿಯಲ್ಲಿ ಕಬ್ಬುಬೆಳೆಗೆ ಡ್ರೋನ್ ಬಳಕೆ ಮಾಡಲಾಗುತ್ತಿದೆ” ಎಂದು ತಿಳಿಸಿದರು.

ಕೃಷಿ ಇಲಾಖೆಯ ಉಪ ನಿರ್ದೇಶಕರು, ಹುಕ್ಕೇರಿ ತಹಶೀಲ್ದಾರ್ ಮಂಜುಳಾ ನಾಯಕ, ರೋಟರಿ ಕ್ಲಬ್ ಪದಾಧಿಕಾರಿಗಳು‌ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

Download Eedina App Android / iOS

X