ಬೆಳಗಾವಿ | ರಾಷ್ಟ್ರಿಯ ಹೆದ್ದಾರಿಯಲ್ಲಿ ಸರಣಿ ಅಪಘಾತ: ಓರ್ವ ಸಾವು; 15 ಜನರಿಗೆ ಗಾಯ

Date:

Advertisements

ಬೆಳಗಾವಿ ಜಿಲ್ಲೆಯ ನಿಪ್ಪಾಣಿ ನಗರದ ಹೊರವಲಯದ ಸ್ತವನಿಧಿ ಘಟ್ಟದಲ್ಲಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುರುವಾರ ಟ್ರಕ್ ಮತ್ತು ಕ್ರೂಸರ್ ಕಾಲು ದ್ವಿಚಕ್ರ ವಾಹನಗಳ ಮಧ್ಯೆ ಸಂಭವಿಸಿದ ಸರಣಿ ಅಪಘಾತದಲ್ಲಿ ಓರ್ವ ಸಾವನ್ನಪ್ಪಿ, 15 ಜನರು ಗಾಯಗೊಂಡ ಘಟನೆ ನಡೆದಿದೆ.

ಮೃತಪಟ್ಟ ವ್ಯಕ್ತಿಯನ್ನು ಖಾನಾಪುರ ತಾಲ್ಲೂಕಿನ ಜಾಂಬೋಟಿಯ ನಾರಾಯಣ ನಾಗು ಪಾರವಾಳಕರ(65) ಎಂದು ಗುರುತಿಸಲಾಗಿದೆ.

ಜಾಂಬೋಟಿಯ ರೇಷ್ಮಾ ಕುಡತುರಕರ(45), ಶಂಕರ ಪಾರವಾಳಕರ(28) ಗಂಭೀರವಾಗಿ ಗಾಯಗೊಂಡಿದ್ದು, ವೈದ್ಯಕೀಯ ಚಿಕಿತ್ಸೆಗಾಗಿ ಬೆಳಗಾವಿಯ ಆಸ್ಪತ್ರೆಗೆ ದಾಖಲಿಸಲಾಗಿದೆ. 15 ಜನರಿಗೆ ಸಣ್ಣ–ಪುಟ್ಟ ಗಾಯವಾಗಿವೆ.

Advertisements
bgm2

ಈ ಅವಘಡದಲ್ಲಿ ಮೋಹನ್ ಪರ್ವಾಡ್ಕ‌ರ್ (57), ವಿದ್ಯಾ ಮೋಹನ್ ಪರ್ವಾಡ್ಕ‌ರ್ (47), ಪ್ರತೀಕ್ಷಾ ( 22), ಪ್ರಿಯಾಂಕಾ (25), ಪೂನಂ ಮಹೇಶ್‌ ಡಿಯೋಲೆ (26), ಆಯೇಷಾ ಮಹೇಶ್ ಡಿಯೋಲೆ (5), ಆಯುಷ್‌ ಮಹೇಶ್‌ ದೀಪಾವಳಿ (3), ಸುಹಾಸ್ ಬಬ್ಲಿ ಪರ್ವಾಡ್ಕರ್ (40), ಸ್ವಾತಿ ಸುಹಾಸ್‌ ಪರ್ವಾಡ್ಕರ್ (12), ವೈಷ್ಣವಿ ಮೋಹನ್ ಘಾಡೆ (25), ಪ್ರಮೋದ್ ಮಾರುತಿ ಪರ್ವಡ್ಕ‌ರ್ (26) ಎಂಬವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ತಮಿಳುನಾಡಿನಿಂದ ನಿಪ್ಪಾಣಿ ಮಾರ್ಗವಾಗಿ ಮುಂಬೈಗೆ ಹೊರಟಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ, ಜೀಪ್‌ಗೆ ಗುದ್ದಿತು. ಆ ವಾಹನ ರಸ್ತೆಯ ಮತ್ತೊಂದು ಬದಿಯಲ್ಲಿದ್ದ ಎರಡು ಕಾರು ಮತ್ತು ಒಂದು ದ್ವಿಚಕ್ರ ವಾಹನಕ್ಕೆ ಅಪ್ಪಳಿಸಿತು. ಜೀಪ್‌ನಲ್ಲಿದ್ದು ಈ ಸಂದರ್ಭದಲ್ಲಿ ಕಾರಿನಲ್ಲಿದ್ದ ವ್ಯಕ್ತಿ ಮೃತಪಟ್ಟಿದ್ದಾರೆ.

ಇದನ್ನು ಓದಿದ್ದೀರಾ? ತನಗೆ ಏಡ್ಸ್‌ ರಕ್ತ ಇಂಜೆಕ್ಟ್‌ ಮಾಡಲು ಸಂಚು ಹೂಡಿದ್ದ ಮುನಿರತ್ನ; ದೇಶವನ್ನೇ ತೊರೆಯಲು ನಿರ್ಧರಿಸಿದ್ದ ಆರ್ ಅಶೋಕ್

ಜಾಂಬೋಟಿ ಗ್ರಾಮಸ್ಥರು ಕೊಲ್ಹಾಪುರದ ಮಹಾಲಕ್ಷ್ಮಿ ದೇವಿ ಮತ್ತು ಜ್ಯೋತಿಬಾ ದೇವಸ್ಥಾನಕ್ಕೆ ಹೊರಟಿದ್ದರು ಎಂದು ಪೋಲಿಸರು ತಿಳಿಸಿದ್ದಾರೆ. ಸ್ಥಳೀಯ ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

bgm1
ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X