ಲಂಚ ಪಡೆಯುತ್ತಿದ್ದಾಗ ಐಟಿ ಅಧಿಕಾರಿಯನ್ನೇ ಖೆಡ್ಡಾಕ್ಕೆ ಬೀಳಿಸಿದ ಪೊಲೀಸರು!

Date:

ಚಿನ್ನಾಭರಣ ಅಂಗಡಿಯೊಂದರ ಮಾಲೀಕನಿಂದ ಐದು ಲಕ್ಷ ರೂ. ಹಣಕ್ಕೆ ಬೇಡಿಕೆ ಇಟ್ಟು, ಲಂಚದ ಹಣ ಪಡೆಯುತ್ತಿದ್ದ ವೇಳೆ ಐಟಿ ಅಧಿಕಾರಿಯೊಬ್ಬನನ್ನು ರೆಡ್‍ಹ್ಯಾಂಡ್ ಆಗಿ ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.

- Advertisement -

ಐಟಿ ಅಧಿಕಾರಿ ಅವಿನಾಶ್ ಟೊಣಪೆ ಎಂಬಾತ ಚಿಕ್ಕೋಡಿ ಅಂಕಲಿಯ ಪರಶುರಾಮ್ ಬಂಕಾಪುರ ಎಂಬವರ ಬಳಿ 10 ಲಕ್ಷ ರೂ. ನೀಡುವಂತೆ ಬೇಡಿಕೆ ಇಟ್ಟಿದ್ದರು. ಈ ಬಗ್ಗೆ ಪರಶುರಾಮ್ ಪೊಲೀಸರಿಗೆ ಮಾಹಿತಿ ನೀಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...

ಇದರಂತೆ ಆರೋಪಿಯನ್ನು ಸೆರೆ ಹಿಡಿಯಲು ಯೋಜನೆ ರೂಪಿಸಿದ್ದ ಪೊಲೀಸರು, ಕವರ್‌ನಲ್ಲಿ 40 ಸಾವಿರ ಹಣ ಇಟ್ಟುಕೊಂಡು ಟೊಣಪೆ ಹೇಳಿದ ಜಾಗಕ್ಕೆ ಹೋಗಿ ನಿಂತಿದ್ದರು. ಖಾಸಗಿ ಡೆಂಟಲ್ ಕಾಲೇಜ್ ಮೈದಾನದಲ್ಲಿ ಹಣ ಪಡೆಯುತ್ತಿದ್ದ ವೇಳೆ ಸಿನಿಮೀಯ ರೀತಿ ದಾಳಿ ಮಾಡಿ, ಮಫ್ತಿಯಲ್ಲಿದ್ದ ಪೊಲೀಸರು ಐಟಿ ಅಧಿಕಾರಿಯನ್ನು ವಶಕ್ಕೆ ಪಡೆದಿದ್ದಾರೆ.

ಐಟಿ ಅಧಿಕಾರಿ ಅವಿನಾಶ್ ಟೊಣಪೆ ವಶಕ್ಕೆ ಪಡೆದ ಬೆಳಗಾವಿ ಪೊಲೀಸರು ಎಪಿಎಂಸಿ ಠಾಣೆಗೆ ಕರೆತಂದು ತನಿಖೆ ನಡೆಸಿದ್ದಾರೆ. ಮಾರ್ಕೆಟ್ ಎಸಿಪಿ ನಾರಾಯಣ ಬರಮನಿ ನೇತೃತ್ವದಲ್ಲಿ ಐಟಿ ಅಧಿಕಾರಿ ವಿಚಾರಣೆ ನಡೆಸಿದ್ದಾರೆ. ಪೊಲೀಸರು ಅಧಿಕಾರಿಯನ್ನು ವಶಕ್ಕೆ ಪಡೆದಿರುವ ದೃಶ್ಯ, ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಕೆಲ ದಿನಗಳ ಹಿಂದೆಯಷ್ಟೇ ಐಟಿ ಅಧಿಕಾರಿ ಅವಿನಾಶ್ ಟೊಣಪೆ ನೇತೃತ್ವದ ತಂಡ ಅಂಕಲಿ ಗ್ರಾಮದಲ್ಲಿರುವ ಬಂಕಾಪುರ ಚಿನ್ನದಂಗಡಿ ಮೇಲೆ ದಾಳಿ ಮಾಡಿತ್ತು. ಆ ಬಳಿಕ ಐದು ಲಕ್ಷ ಹಣಕ್ಕೆ ಬೇಡಿಕೆ ಇಟ್ಟಿದ್ದರು.

ಬೆಂಗಳೂರಿನಲ್ಲಿ ಅಪಾರ್ಟ್​ಮೆಂಟ್​​ ಒಂದರ ಮೇಲೆ ದಾಳಿ ಮಾಡಿದ್ದ ಐಟಿ ಅಧಿಕಾರಿಗಳು ಸುಮಾರು 42 ಕೋಟಿ ರೂಪಾಯಿ ಹಣವನ್ನು ವಶಕ್ಕೆ ಪಡೆದಿರುವ ಸುದ್ದಿ ರಾಜ್ಯದಲ್ಲಿ ಸದ್ದು ಮಾಡುತ್ತಿರುವ ನಡುವೆಯೇ ಬೆಳಗಾವಿಯಲ್ಲಿ ಐಟಿ ಅಧಿಕಾರಿ ಪೊಲೀಸರ ಕೈಗೆ ಸಿನಿಮೀಯ ರೀತಿಯಲ್ಲಿ ಸಿಕ್ಕಿ ಬಿದ್ದಿರುವುದು ಚರ್ಚೆಗೆ ಕಾರಣವಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | UAPA, NSA ಕಾಯ್ದೆಗಳು ಸಂವಿಧಾನಿಕ ಹಕ್ಕುಗಳ ದಮನಕ್ಕೆ ಅಸ್ತ್ರವಾಗುತ್ತಿವೆ : ಪ್ರೊ. ಫಣಿರಾಜ್

ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಬಂಧನವಾಗಿ ಆರು ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ,...

ಉಡುಪಿ | ಕಟ್‌ಬೇಲ್ತೂರು ರೈಲ್ವೆ ಸೇತುವೆ ಅಪಾಯಕಾರಿ ತಿರುವು ಸರಿಪಡಿಸಲು ಆಗ್ರಹಿಸಿ ಸಿಪಿಎಂ ಪ್ರತಿಭಟನೆ

ಕಟ್‌ಬೇಲ್ತೂರು ಗ್ರಾಮದ ರೈಲ್ವೆ ಸೇತುವೆಯಲ್ಲಿರುವ ಅಪಾಯಕಾರಿ ತಿರುವನ್ನು ತಕ್ಷಣ ಸರಿಪಡಿಸಿ, ಸಾರ್ವಜನಿಕರ...

ಉಡುಪಿ | ಮಲ್ಪೆ–ತೀರ್ಥಹಳ್ಳಿ ಹೆದ್ದಾರಿ ಕಾಮಗಾರಿ ಅಂತಿಮ ಹಂತ; ಬಾಕಿ ಭೂಸ್ವಾಧೀನಕ್ಕೆ ಕೋಟ ಶ್ರೀನಿವಾಸ ಪೂಜಾರಿ ಸೂಚನೆ

ರಾಷ್ಟ್ರೀಯ ಹೆದ್ದಾರಿ 169ಎರ ಮಲ್ಪೆ–ಕರಾವಳಿ ಬೈಪಾಸ್‌ವರೆಗಿನ ಬಾಕಿ ಉಳಿದಿರುವ ಭೂಸ್ವಾಧೀನ ಪ್ರಕ್ರಿಯೆಯನ್ನು...