ಬೆಳಗಾವಿ | ಸಂತೋಷ್‌ ಆತ್ಮಹತ್ಯೆ ಪ್ರಕರಣ; ಸಿಐಡಿ ತನಿಖೆಗೆ ಗುತ್ತಿಗೆದಾರನ ತಾಯಿ ಮನವಿ

Date:

Advertisements

ನನ್ನ ಮಗನ ಆತ್ಮಹತ್ಯೆ ಪ್ರಕರಣದ ತನಿಖೆ ಸರಿಯಾಗಿ ನಡೆದಿಲ್ಲ. ಹಾಗಾಗಿ ಪ್ರಕರಣವನ್ನು ಸಿಐಡಿ ತನಿಖೆಗೆ ಒಳಪಡಿಸುವಂತೆ ಮನವಿ ಮಾಡಿದ್ದೇವೆ‌. ಇದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಒಪ್ಪಿದ್ದಾರೆ ಎಂದು ಗುತ್ತಿಗೆದಾರ ಸಂತೋಷ್ ಪಾಟೀಲ ಅವರ ತಾಯಿ ಪಾರ್ವತಿ ಹೇಳಿದರು.

ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ನನ್ನ ಮಗ ಸಂತೋಷನು ಈಶ್ವರಪ್ಪ ಅವರಿಗೆ ಕಮಿಷನ್ ಕೊಟ್ಟಿದ್ದೇವೆ ಎಂದಿದ್ದ. ಆದರೆ, ಈ ಪ್ರಕರಣದಲ್ಲಿ ಈಶ್ವರಪ್ಪ ಅವರಿಗೆ ಕ್ಲೀನ್ ಚಿಟ್ ಕೊಡಲಾಗಿದೆ. ನನ್ನ ಮಗನಿಗೆ ನ್ಯಾಯ ಸಿಕ್ಕಿಲ್ಲ” ಎಂದು ಕಣ್ಣೀರು ಹಾಕಿದರು.

“ಬಿ ಎಸ್ ಯಡಿಯೂರಪ್ಪ ಅವರಿಗೆ ನನ್ನ ಮಗ ಅಪ್ಪಾಜಿ ಎಂದು ಕರೆಯುತ್ತಿದ್ದ. ಸೊಸೆಗೆ ನೌಕರಿ ಕೊಡುವುದಾಗಿ ಸರ್ಕಾರ ಭರವಸೆ ನೀಡಿತ್ತು. ಅದೂ ಈಡೇರಿಲ್ಲ. ಕಾಮಗಾರಿ‌ಗೆ ಕೈಗೊಂಡ ಹಣವನ್ನೂ ಕೊಡಲಿಲ್ಲ” ಎಂದು ಆರೋಪಿಸಿದರು.

Advertisements

ಈ ಸುದ್ದಿ ಓದಿದ್ದೀರಾ? ವಿಜಯಪುರ | ಸಮರ್ಪಕ ಬಸ್‌ ವ್ಯವಸ್ಥೆಗೆ ಡಿವಿಪಿ ಆಗ್ರಹ

“ಈ ಪ್ರಕರಣದಲ್ಲಿ ‘ಬಿ’ ರಿಪೋರ್ಟ್ ಬಂದ ನಂತರ, ಈಶ್ವರಪ್ಪ ಅವರ ಮನೆಯಲ್ಲಿ ಕುಟುಂಬಸ್ಥರು ಸಿಹಿ ತಿಂದರು. ಅವರಿಗೆ ನಮ್ಮಂತಹ ಪರಿಸ್ಥಿತಿ ಬಂದಿದ್ದರೆ, ಸಿಹಿ ತಿನ್ನುತ್ತಿದ್ದರಾ?” ಎಂದು ಬೇಸರ ವ್ಯಕ್ತಪಡಿಸಿದರು.

“ಮಗ ಆತ್ಮಹತ್ಯೆ ಮಾಡಿಕೊಂಡ ಬಳಿಕ ಈವರೆಗೂ ಬಿಜೆಪಿ ಸರ್ಕಾರದ ಒಬ್ಬ ಪ್ರತಿನಿಧಿಯೂ ನಮ್ಮ ಮನೆಗೆ ಭೇಟಿ ನೀಡಿಲ್ಲ. ಈಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮರುತನಿಖೆ ನಡೆಸುತ್ತೇವೆ ಎಂದಿದ್ದಾರೆ. ಅವರು ಏನು ಮಾಡುತ್ತಾರೆಯೇ ನೋಡೋಣ” ಎಂದು ಹೇಳಿದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಳ್ಳಾರಿ | ನಶಿಸಿ ಹೋಗುತ್ತಿರುವ ತೊಗಲುಗೊಂಬೆ ಪ್ರದರ್ಶನ ಉಳಿಸಿ ಬೆಳೆಸಬೇಕು: ಜೋಳದರಾಶಿ ತಿಮ್ಮಪ್ಪ

ನಶಿಸಿ ಹೋಗುತ್ತಿರುವ ತೊಗಲು ಗೊಂಬೆ ಪ್ರದರ್ಶನ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ...

ಭಟ್ಕಳ | ಮಗಳ ಅಶ್ಲೀಲ ವಿಡಿಯೊ ವೈರಲ್ ಮಾಡುವುದಾಗಿ ಬೆದರಿಕೆ: ಮೂವರ ಬಂಧನ

ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ನಗರದ ಕಿದ್ವಾಯಿ ರಸ್ತೆಯೊಂದರ ತರಕಾರಿ ವ್ಯಾಪಾರಿಯನ್ನು...

ಬೆಳಗಾವಿ : ಬಸ್ ಲಾರಿ ಡಿಕ್ಕಿ 20 ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ತಿಗಡಿ ಕ್ರಾಸ್ ಹತ್ತಿರ ಭಾನುವಾರ ಬೆಳಿಗ್ಗೆ...

ಮಂಗಳೂರು | ಸ್ನಾತಕೋತ್ತರದತ್ತ ಮುಖಮಾಡದ ಪದವೀಧರರು: ಪ್ರವೇಶಾತಿ ಗಡುವು ವಿಸ್ತರಣೆ

ನಾಲ್ಕು ದಶಕಗಳಷ್ಟು ಹಳೆಯದಾದ ಮಂಗಳೂರು ವಿಶ್ವವಿದ್ಯಾಲಯ(MU), ನಿರೀಕ್ಷಿತ ಸಂಖ್ಯೆಯ ಪ್ರವೇಶಗಳನ್ನು ಪಡೆಯಲು...

Download Eedina App Android / iOS

X