ಬೆಳಗಾವಿ | ಲಿಂಗತ್ವ ಅಲ್ಪಸಂಖ್ಯಾತರಿಗೆ ನಮ್ಮ ಕ್ಲಿನಿಕ್‌ ಸ್ಥಾಪನೆ

Date:

Advertisements

ಲಿಂಗತ್ವ ಅಲ್ಪಸಂಖ್ಯಾತರ ಆರೋಗ್ಯ ಮತ್ತು ಮಾನಸಿಕ ಸ್ಥಿತಿಯನ್ನು ಸುಧಾರಿಸಲು ನಮ್ಮ ಕ್ಲಿನಿಕ್ ಸ್ಥಾಪನೆ ಮಾಡಲಾಗಿದೆ ಎಂದು ಲಿಂಗತ್ವ ಅಲ್ಪಸಂಖ್ಯಾತ ಸಮುದಾಯದ ನೇತೃತ್ವ ವಹಿಸಿರುವ ಕಿರಣ್‌ ಬೇಡಿ ತಿಳಿಸಿದರು.

ಬೆಳಗಾವಿಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರಿಗಾಗಿ ಸ್ಥಾಪನೆಯಾಗಿರುವ ನಮ್ಮ ಕ್ಲಿನಿಕ್‌ಅನ್ನು ಉದ್ಘಾಟಿಸಿ ಅವರು ಮಾತನಾಡಿದರು. “ಲಿಂಗತ್ವ ಅಲ್ಪಸಂಖ್ಯಾತರ ಆರೋಗ್ಯದಲ್ಲಿ ತೊಂದರೆಯಾದರೆ ನಮ್ಮ ಕ್ಲಿನಿಕ್‌ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆಯಬಹುದು. ವಿಶ್ರಾಂತಿಯನ್ನೂ ಪಡೆಯಬಹುದು. ಜೊತೆಗೆ ಲಿಂಗತ್ವ ಬದಲಾವಣೆ ಬಯಸುವವರಿಗೆ ಲಿಂಗ ಬದಲಾವಣೆ ಶಸ್ತ್ರ ಚಿಕಿತ್ಸೆಯನ್ನೂ ಮಾಡಲಾಡುತ್ತದೆ” ಎಂದು ತಿಳಿಸಿದರು.

ಈ ದಿನ‌.ಕಾಮ್ನೊಂದಿಗೆ ಮಾತನಾಡಿದ ಕಿರಣ್ ಬೇಡಿ, “ಮಾನಸಿಕವಾಗಿ ಖಿನ್ನತೆಗೊಳದವರಿಗೆ ಮಾನಸಿಕ ತಜ್ಞರಿಂದ ಆಪ್ತಸಮಾಲೋಚನೆ ಮಾಡಲಾಗುತ್ತದೆ. ಹಾರ್ಮೋನ್‌ಗಳ ತೊಂದರೆಯಿಂದ ಮಾನಸಿಕ ಕಿನ್ನತೆಗೆ ಒಳಗಾದಾಗ ಅವರಿಗೆ ಆಪ್ತಸಮಾಲೋಚನೆ ಮಾಡಿ, ಅವರನ್ನು ಆರೋಗ್ಯವಂತರನ್ನಾಗಿ ಮಾಡಲು, ಲಿಂಗತ್ವ ಅಲ್ಪಸಂಖ್ಯಾತ ಸಮುದಾಯದ ಸಮಸ್ಯೆಗಳನ್ನು ಕೇಳಲು, ಅವರಿಗೆ ವಿಶ್ರಾಂತಿ ಪಡೆಯಲು ಅನುಕೂಲವಾಗಲಿದೆ. ನಗರದಲ್ಲಿ ನಮ್ಮ ಕ್ಲಿನಿಕ್ ಸ್ಥಾಪಿಸಿರುವುದು ಲಿಂಗತ್ವ ಅಲ್ಪಸಂಖ್ಯಾತ ಸಮುದಯಾದವರಿಗೆ ಒಳ್ಳೆಯ ರೀತಿಯಲ್ಲಿ ಉಪಯೋಗವಾಗಬೇಕಿದೆ” ಎಂದು ತಿಳಿಸಿದರು.

Advertisements

ಈ ಸುದ್ದಿ ಓದಿದ್ದೀರಾ? ಕೊಪ್ಪಳ | ಗ್ರಾಮದ ಜನರಲ್ಲಿ ವಾಂತಿ-ಭೇದಿ; ಐವರು ಆಸ್ಪತ್ರೆಗೆ ದಾಖಲು

ಕಾರ್ಯಕ್ರಮದಲ್ಲಿ ಎಸಿಪಿ ಸ್ನೇಹಾ, ಮಹಿಳಾ ಪೊಲೀಸ್ ಠಾಣೆಯ ಪಿಎಸ್‌ಐ ರುಕ್ಮಿಣಿ, ಸಂಗಮ ಸಂಸ್ಥೆಯ ನಿರ್ಧೇಶಕ ರಾಜು, ಹ್ಯುಮ್ಯಾನಿಟಿ ಸಂಸ್ಥೆಯ ತಾನಾಜಿ ಸಾಬ್, ಸಂಗಮ ಸಂಸ್ಥೆಯ ಪ್ರಭಾವತಿ ಹಾಗೂ ಲಿಂಗತ್ವ ಅಲ್ಪಸಂಖ್ಯಾತ ಸಮುದಾಯದ ಸದಸ್ಯರು ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

Download Eedina App Android / iOS

X