- ಖಾಸಗಿ ಬಸ್ ಪರಿಶೀಲಿಸಿದ ಚುನಾವಣಾ ಅಧಿಕಾರಿಗಳು
- ಓರ್ವ ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ
ಖಾಸಗಿ ಬಸ್ನಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ ₹2 ಕೋಟಿ ಹಣವನ್ನು ಬೆಳಗಾವಿ ಜಿಲ್ಲೆಯ ಹಿರೇಬಾಗೇವಾಡಿ ಟೋಲ್ ಗೇಟ್ನಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಮುಂಬೈಯಿಂದ ಬೆಂಗಳೂರಿಗೆ ಹೊರಟಿದ್ದ ಖಾಸಗಿ ಬಸ್ಸನ್ನು ಚುನಾವಣಾ ಎಫ್ಎಸ್ಟಿ ಹಾಗೂ ಪೊಲೀಸ್ ಅಧಿಕಾರಿಗಳ ತಂಡ ಜಂಟಿಯಾಗಿ ಪರಿಶೀಲನೆ ನಡೆಸಿದಾಗ ಅಕ್ರಮ ಹಣ ಪತ್ತೆಯಾಗಿದೆ.
“ಖಾಸಗಿ ಬಸ್ನಲ್ಲಿ ಹಣ ಸಾಗಾಟ ಮಾಡುತ್ತದ್ದುದಕ್ಕೆ ಸಂಬಂಧಿಸಿದಂತೆ ʼದಾಖಲೆ ಇಲ್ಲದ ಹಣ ಸಾಗಣೆʼ ಪ್ರಕರಣ ದಾಖಲಿಸಿಕೊಂಡಿದ್ದು, ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದೆ. ಓರ್ವ ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ” ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ಯಾದಗಿರಿ | ಪರಸ್ಪರ ಹೊಡೆದಾಡಿಕೊಂಡ ಕಾಂಗ್ರೆಸ್-ಜೆಡಿಎಸ್ ಕಾರ್ಯಕರ್ತರು
ಅಪರಾಧ ಮತ್ತು ಸಂಚಾರ ವಿಭಾಗದ ಡಿಸಿಪಿ ಸ್ನೇಹಾ, ಗ್ರಾಮೀಣ ಎಸಿಪಿ ಗೋಪಾಲಕೃಷ್ಣ ಗೌಡರ, ಬೆಳಗಾವಿ ಗ್ರಾಮೀಣ ಕ್ಷೇತ್ರದ ಚುನಾವಣಾಧಿಕಾರಿ ರಾಜಶೇಖರ್ ಡಂಬಳ, ಸಿಪಿಐ ಅಮರೇಶ್, ಎಫ್ಎಸ್ಟಿ ತಂಡದ ಮುಖ್ಯಸ್ಥ ಶಂಭುಲಿಂಗಪ್ಪ, ರಾಜೇಂದ್ರ ಮೊರಬದ ಇದ್ದರು.