ಬೆಳಗಾವಿ | ನಷ್ಟದ ಆತಂಕ ಎದುರಿಸುತ್ತಿರುವ ಸೋಯಾಬೀನ್ ಬೆಳೆದ ಬೆಳೆಗಾರರು!

Date:

Advertisements

ಬೆಳಗಾವಿ ಜಿಲ್ಲೆಯ ಸವದತ್ತಿ, ರಾಮದುರ್ಗ, ಬೈಲಹೊಂಗಲ, ಗೋಕಾಕ, ಕಿತ್ತೂರು, ಬೆಳಗಾವಿ ತಾಲೂಕುಗಳಲ್ಲಿ ರೈತರು ಸೋಯಾಬೀನ್ ಬೆಳೆ ಬೆಳೆದಿದ್ದು, ಸರಿಯಾದ ಇಳುವರಿ ಮತ್ತು ಬೆಲೆ ಸಿಗದೆ ಸಂಕಷ್ಟದಲ್ಲಿದ್ದಾರೆ.

ಈ ಕುರಿತು ಈ ದಿನ.ಕಾಮ್ ಜೊತೆ ಸೊಯಾಬೀನ್ ಬೆಳೆಗಾರರಾದ ಬೆಳಗಾವಿ ತಾಲೂಕಿನ ಕೆ.ಕೆ.ಕೊಪ್ಪ ಗ್ರಾಮದ ಶೇಖಪ್ಪ ಅಕ್ಕನ್ನವರ ಮಾತನಾಡಿ, ಈ ವರ್ಷದ ಅತಿಯಾದ ಮಳೆಯಿಂದ ತಂಪಾಗಿ ಹೂವು ಉದುರಿ, ಕೆಂಪು ರೋಗ ಬಂದಿದೆ. ಇದರಿಂದ ಇಳುವರಿಯೂ ಕಡಿಮೆ ಬಂದಿದೆ. ಇದರ ಜೊತೆಗೆ ಸೋಯಾಬೀನ್ ಬೆಳೆಗೆ ಸರಿಯಾದ ಬೆಲೆಯೂ ಇಲ್ಲ ಎಂದು ತಿಳಿಸಿದ್ದಾರೆ.

ಒಂದು ಎಕರೆಯಲ್ಲಿ ಒಳ್ಳೆಯ ಇಳುವರಿ ಬಂದರೆ 8ರಿಂದ 9 ಕ್ವಿಂಟಾಲ್ ಬರುತ್ತದೆ. ಆದರೆ ಈ ವರ್ಷ ಕೇವಲ 3ರಿಂದ 4 ಕ್ವಿಂಟಲ್ ಇಳುವರಿ ಬಂದಿದೆ. ಹಿಂದಿನ ವರ್ಷ ಒಂದು ಕ್ವಿಂಟಾಲ್ ಸೋಯಾಬೀನ್‌ಗೆ 7 ರಿಂದ 8 ಸಾವಿರದವರೆಗೆ ಮಾರಾಟವಾಗಿತ್ತು. ಈ ವರ್ಷ 4 ಸಾವಿರದವರೆಗೆ ಮಾತ್ರ ಬೆಲೆ ಇದೆ. ಒಂದು ಎಕರೆ ಸೋಯಾಬೀನ್ ಬೆಳೆಯಲು ಸುಮಾರು 15 ಸಾವಿರ ರೂಪಾಯಿ ವೆಚ್ಚ ತಗಲುತ್ತದೆ. ಈ ವೆಚ್ಚವನ್ನು ಸಹ ಭರಿಸಲು ಆಗುವುದಿಲ್ಲ. ಸೋಯಾಬೀನ್ ಬೆಳೆ ಬೆಳೆದ ರೈತರ ಬದುಕು ಮೂರಾಬಟ್ಟೆ ಆಗಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

Advertisements

ಭಾರತೀಯ ಕೃಷಿಕ ಸಮಾಜದ ಮುಖಂಡರಾದ ಸಿದಗೌಡ ಮೋದಗಿ ಮಾತನಾಡಿ, ಸೋಯಾಬೀನ್ ಸೂಕ್ಷ್ಮ ಹವಾಮಾನದಲ್ಲಿ ಬೆಳೆಯುವಂತಹ ಬೆಳೆ. ಹಿಂದಿನ ವರ್ಷ ಬರಗಾಲದಿಂದ ಸೋಯಾಬಿನ್ ಇಳುವರಿ ಕಡಿಮೆ ಆಗಿತ್ತು. ಈ ವರ್ಷ ಅತಿಯಾದ ಮಳೆಯಿಂದ ಉತ್ಪನ್ನ ಕುಂಠಿತವಾಗಿದೆ ಎಂದು ತಿಳಿಸಿದ್ದಾರೆ.

ಸೋಯಾಬೀನ್ ಮಾರಾಟಕ್ಕೆ ಒಂದು ಸೂಕ್ತ ಮಾರುಕಟ್ಟೆ ಇಲ್ಲ.‌ ದಲ್ಲಾಳಿಗಳು ನೇರವಾಗಿ ರೈತರ ಊರುಗಳಲ್ಲಿ ಬಂದು ಖರಿದಿಸುತ್ತಾರೆ ಹಾಗೂ ತೂಕದಲ್ಲಿ ಮೋಸ ಮಾಡುತ್ತಾರೆ. ನಾವು ಈ ಕುರಿತು ಖಾಸಗಿ ಮಾರುಕಟ್ಟೆಯನ್ನು ಬಂದ್ ಮಾಡಿ ಸರ್ಕಾರಿ ಮಾರುಕಟ್ಟೆಯನ್ನು ಪ್ರಾರಂಭಿಸಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದ್ದೇವೆ. ರೈತರು ಸಹ ಕೃಷಿ ಮಾರುಕಟ್ಟೆಗೆ ಬಂದು ಮಾರಾಟ ಮಾಡುವಂತಾಗಬೇಕು ಹಾಗೂ ಸರ್ಕಾರ ಸೋಯಾಬೀನ್ ಬೆಳೆದ ರೈತರಿಗೆ 10 ಸಾವಿರ ಬೆಂಬಲ ಬೆಲೆ ಕೊಡಬೇಕು ಎಂದು ಹೇಳಿದರು‌

ಬೆಳಗಾವಿ ಜಿಲ್ಲೆಯಲ್ಲಿ ಸೋಯಾಬೀನ್ ಬೆಳೆದ ರೈತರು ಬಿತ್ತನೆಗೆ ಮಾಡಿದ ಬೀಜ ಗೊಬ್ಬರ ಔಷಧಿ, ಆಳುಗಳ ಖರ್ಚು ಸಹ ಭರಿಸಲು ಸಾಧ್ಯವಿಲ್ಲದೆ ಕಂಗಾಲಾಗಿದ್ದಾರೆ ಸರ್ಕಾರವು ರೈತರ ನೆರವಿಗೆ ಬರುವುದು ಅವಶ್ಯವಾಗಿದೆ.

ಸುನಿಲ್
ಸುನಿಲ್ ಹಂಪನ್ನವರ
+ posts

ಬೆಳಗಾವಿ ಜಿಲ್ಲಾ ಸಂಯೋಜಕರು

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಸುನಿಲ್ ಹಂಪನ್ನವರ
ಸುನಿಲ್ ಹಂಪನ್ನವರ
ಬೆಳಗಾವಿ ಜಿಲ್ಲಾ ಸಂಯೋಜಕರು

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

Download Eedina App Android / iOS

X