ಬೆಳಗಾವಿ | ಕುಂಭಮೇಳದಲ್ಲಿ ಕಾಲ್ತುಳಿತ; ನಾಲ್ವರು ಸಾವು, ಒಬ್ಬರಿಗೆ ಗಾಯ

Date:

Advertisements

ಉತ್ತರ ಪ್ರದೇಶದ ಪ್ರಯಾಗ್ ರಾಜ್‌ನ ಕುಂಭಮೇಳದಲ್ಲಿ ಕಾಲ್ತುಳಿತ ಸಂಭವಿಸಿದ್ದು, ಕಾರ್ಯಕ್ರಮಕ್ಕೆ ತೆರಳಿದ್ದ ಬೆಳಗಾವಿಯ ಇಬ್ಬರು ಮಕ್ಕಳು ಸೇರಿದಂತೆ ನಾಲ್ಕು ಮಂದಿ ಸಾವನ್ನಪ್ಪಿದ್ದು, ಒಬ್ಬರು ಗಾಯಗೊಂಡಿದ್ದಾರೆ.

ನಗರದ ವಡಗಾಂವಿಯ ನಿವಾಸಿ ಜ್ಯೋತಿ ಹತ್ತರವಾಠ ಹಾಗೂ ಇವರ ಪುತ್ರಿ ಮೇಘಾ ಹತ್ತರವಾಠ, ಶೆಟ್ಟಿಗಲ್ಲಿಯ ಅರುಣ ಕೋಪರ್ಡೆ, ಶಿವಾಜಿ ನಗರದ ನಿವಾಸಿ ಮಹಾದೇವಿ ಮೃತಪಟ್ಟಿದ್ದು, ಸರೋಜಿನಿ ನಡುವಿನಹಳ್ಳಿ ಗಾಯಗೊಂಡಿದ್ದಾರೆ.

ಗಾಯಗೊಂಡವರು ಬೇರೆ ಬೇರೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವುದಾಗಿ ತಿಳಿದುಬಂದಿದ್ದು, ಘಟನೆಯ ನಂತರ ಅನೇಕರು ತಮ್ಮ ಕುಟುಂಬ ಸದಸ್ಯರು ಮತ್ತು ಆಪ್ತರಿಂದ ಬೇರ್ಪಟ್ಟಿದ್ದಾರೆ.

Advertisements

“ಬೆಳಗಾವಿಯಿಂದ ಸುಮಾರು 60 ಮಂದಿ ಎರಡು ಬಸ್‌ಗಳಲ್ಲಿ ಪ್ರಯಾಗ್ ರಾಜ್‌ಗೆ ಪ್ರಯಾಣಿಸಿ ಪವಿತ್ರ ಸ್ನಾನ ಮಾಡಲು ಮಧ್ಯರಾತ್ರಿ 1ಕ್ಕೆ ಗಂಗಾ-ಯಮುನಾ ಸಂಗಮ ತಲುಪಿದೆವು. ಇದ್ದಕ್ಕಿದ್ದಂತೆ, ಕಾಲ್ತುಳಿತ ಪ್ರಾರಂಭವಾಯಿತು. ಜನರು ನಮ್ಮನ್ನು ತುಳಿಯಲಾರಂಭಿಸಿದರು. ನಮ್ಮಲ್ಲಿ ಅನೇಕರು ಸ್ಥಳಾಂತರಗೊಂಡಿದ್ದು, ಕೆಲವರು ಕಾಲ್ತುಳಿತಕ್ಕೊಳಗಾಗಿದ್ದೇವೆ” ಎಂದು ಗಾಯಾಳು ಸರೋಜಿನಿ ನಡುವಿನಹಳ್ಳಿ ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ಮೈಸೂರು | ಕುಂಭಮೇಳಕ್ಕೆ ತೆರಳಿದ್ದ ಯುವಕರು ಅಪಘಾತದಲ್ಲಿ ದುರ್ಮರಣ

“ಜಿಲ್ಲಾಡಳಿತವು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದು, ಬೆಳಗಾವಿಯಿಂದ ಜನರನ್ನು ಕರೆದೊಯ್ದಿದ್ದ ಟ್ರಾವೆಲ್ ಏಜೆನ್ಸಿಯೊಂದಿಗೆ ಆಡಳಿತವು ನಿರಂತರವಾಗಿ ಸಂಪರ್ಕದಲ್ಲಿದೆ. ಬೆಳಗಾವಿಯ ನಾಲ್ವರು ಸಾವನ್ನಪ್ಫಿರುವ ಮಾಹಿತಿ ಖಚಿತವಾಗಿದೆ. ಅವರ ಶವಗಳನ್ನು ತರಲು ಕ್ರಮ ವಹಿಸಲಾಗಿದೆ ಮತ್ತು ಸಂತ್ರಸ್ತರಿಗೆ ಅಗತ್ಯ ನೆರವು ನೀಡಲಾಗುವುದು” ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

Download Eedina App Android / iOS

X