25ಕ್ಕೂ ಅಧಿಕ ಮಂದಿ ಮನರೇಗಾ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಗೂಡ್ಸ್ ವಾಹನ ಪಲ್ಟಿಯಾಗಿ ಭೀಕರ ಅಪಘಾತ ಸಂಭವಿಸಿರುವ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಹೊಸೂರ ಗ್ರಾಮದ ಹೊರವಲಯದ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ.
ಯಮಕನಮರಡಿ ಗ್ರಾಮದಿಂದ ಹಿಡಕಲ್ ಡ್ಯಾಮ್ಗೆ ಮನರೇಗಾ ಕೆಲಸಕ್ಕಾಗಿ ಕೂಲಿ ಕಾರ್ಮಿಕರು ಗೂಡ್ಸ್ ವಾಹನದಲ್ಲಿ ತೆರಳುತ್ತಿದ್ದರು.
ಅಡ್ಡ ಬಂದ ಬುಲೆಟ್ ವಾಹನವನ್ನು ತಪ್ಪಿಸಲು ಹೋಗಿ ಗೂಡ್ಸ್ ಗಾಡಿಯ ಚಾಲಕ ನಿಯಂತ್ರಣ ತಪ್ಪಿದ್ದಾನೆ.
ಈ ಸುದ್ದಿ ಓದಿದ್ದೀರಾ? ರಾಯಚೂರು | ಬಸ್-ಟ್ರಾಕ್ಟರ್ ಮುಖಾಮುಖಿ; ಓರ್ವ ಮಹಿಳೆ ಸಾವು, 18 ಮಂದಿಗೆ ಗಾಯ
ಚಾಲಕನ ನಿಯಂತ್ರಣ ತಪ್ಪಿದ ಗೂಡ್ಸ್ ವಾಹನ ಪಲ್ಟಿಯಾಗಿದ್ದು, ಕೆಲ ಕೂಲಿ ಕಾರ್ಮಿಕರ ಕೈ, ಕಾಲು ಮುರಿದಿದೆ. 25ಕ್ಕೂ ಅಧಿಕ ಮಂದಿ ಮನರೇಗಾ ಕೂಲಿ ಕಾರ್ಮಿಕರಿಗೆ ಗಂಭೀರ ಗಾಯಗಳಾಗಿದ್ದು, ಗಾಯಾಳುಗಳನ್ನು ಬಿಮ್ಸ್ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ.