ಬೆಳಗಾವಿ | ಬಿಜೆಪಿ ಕಾರ್ಯಕರ್ತರ ಗದ್ದಲ ತಡೆಯಲು ವಿಫಲ ಆರೋಪ; ಇಬ್ಬರು ಪೊಲೀಸರ ಅಮಾನತು

Date:

Advertisements

ಬೆಳಗಾವಿ ನಗರದಲ್ಲಿ ಸೋಮವಾರ ನಡೆದ ಕಾಂಗ್ರೆಸ್‌ ಸಮಾವೇಶದಲ್ಲಿ ಬಿಜೆಪಿ ಕಾರ್ಯಕರ್ತರ ಗದ್ದಲ ತಡೆಯಲು ವಿಫಲರಾದ ಕಾರಣ ನೀಡಿ, ನಗರದ ಖಡೇಬಜಾರ್ ಠಾಣೆಯ ಕಾನ್‌ಸ್ಟೆಬಲ್ ಬಿ ಎ ನೌಕುಡಿ ಮತ್ತು ಕ್ಯಾಂಪ್ ಠಾಣೆಯ ಕಾನ್‌ಸ್ಟೆಬಲ್ ಮಲ್ಲಪ್ಪ ಹಡಗಿನಾಳ ಅವರನ್ನು ಅಮಾನತುಗೊಳಿಸಿ ಉತ್ತರ ವಲಯ ಐಜಿಪಿ ಚೇತನಸಿಂಗ್‌ ರಾಥೋಡ್‌ ಆದೇಶ ಹೊರಡಿಸಿದ್ದಾರೆ.

“ಇಡೀ ಸಮಾವೇಶದ ಆಗು–ಹೋಗುಗಳ ಮೇಲೆ ನಿಗಾ ಇಡಲು ಇಬ್ಬರಿಗೂ ಜವಾಬ್ದಾರಿ ವಹಿಸಲಾಗಿತ್ತು. ಕಪ್ಪು ಬಾವುಟ ಪತ್ತೆ ಮಾಡುವಲ್ಲಿ, ಗಲಾಟೆಯ ವಿಷಯ ಮೇಲಧಿಕಾರಿಗಳಿಗೆ ತಿಳಿಸುವಲ್ಲಿ ಈ ಇಬ್ಬರು ಸಿಬ್ಬಂದಿ ಲೋಪ ಎಸಗಿದ್ದಾರೆ. ಜವಾಬ್ದಾರಿ ಸರಿಯಾಗಿ ನಿರ್ವಹಿಸದ ಕಾರಣ ಅಮಾನತು ಮಾಡಲಾಗಿದೆ” ಎಂದು ಆದೇಶದಲ್ಲಿ ತಿಳಿಸಿದ್ದಾರೆ.

ಸಮಾವೇಶದ ಸ್ಥಳಕ್ಕೆ ನುಗ್ಗಿದ ಬಿಜೆಪಿಯ ಆರು ಕಾರ್ಯಕರ್ತೆಯರು ಕಪ್ಪು ಬಾವುಟ ಪ್ರದರ್ಶಿಸಿದ್ದರು. ಸಿಎಂ ವಿರುದ್ಧ ಘೋಷಣೆ ಕೂಗಿದ್ದರು. ಈ ಎಲ್ಲದರ ಮಧ್ಯೆ ಭದ್ರತಾ ವೈಫಲ್ಯ ಬಗ್ಗೆ ಸಿಟ್ಟಿಗೆದ್ದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಎಎಸ್‌ಪಿ ನಾರಾಯಣ ಭರಮಣಿ ಅವರ ಮೇಲೆ ಕೈ ಎತ್ತಲು ಮುಂದಾಗಿದ್ದರು.

Advertisements

ಈ ಸುದ್ದಿ ಓದಿದ್ದೀರಾ? ಬೆಳಗಾವಿ : ಕಾಶ್ಮೀರದಲ್ಲಿ ಭಯೋತ್ಪಾದಕರು ಹತ್ಯೆ ಮಾಡಿದಾಗ ಒಬ್ಬ ಪೊಲೀಸ್‌ ಅಲ್ಲಿರಲಿಲ್ಲ

“ಕಾರ್ಯಕ್ರಮದಲ್ಲಿ ಹಿರಿಯ ಅಧಿಕಾರಿಗಳ ಲೋಪವೂ ಕಂಡುಬಂದಿದೆ. ಅವರನ್ನು ಬಿಟ್ಟು ಕಾನ್‌ಸ್ಟೆಬಲ್‌ಗಳನ್ನು ಅಮಾನತು ಮಾಡಲಾಗಿದೆ. ಇದು ʼಗುಬ್ಬಿ ಮೇಲೆ ಬ್ರಹ್ಮಾಸ್ತ್ರ ಪ್ರಯೋಗʼವೆಂಬಂತಿದೆ” ಎಂಬ ಸಂದೇಶ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದೆ.

ಸಮಾವೇಶದ ಬಳಿಕ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಸಿಎಂ ಸಿದ್ದರಾಮಯ್ಯ ಎಲ್ಲ ಪೊಲೀಸ್‌ ಅಧಿಕಾರಿಗಳ ಸಭೆ ನಡೆಸಿದರು. ಲೋಪದ ಬಗ್ಗೆ ತೀವ್ರ ತರಾಟೆ ತೆಗೆದುಕೊಂಡು ಶಿಸ್ತಿನ ಕ್ರಮ ಅನಿವಾರ್ಯವಾಗುತ್ತದೆ ಎಂಬ ಎಚ್ಚರಿಕೆಯನ್ನೂ ನೀಡಿದರೆಂಬುದು ಮೂಲಗಳಿಂದ ತಿಳಿದುಬಂದಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

Download Eedina App Android / iOS

X