ಬೆಳಗಾವಿ | ಮಾನವ ಕಳ್ಳಸಾಗಣೆ ಹಾಗೂ ಜೀತಪದ್ಧತಿ ತಡೆ ಕಾರ್ಯಾಗಾರ

Date:

Advertisements

ಮನುಷ್ಯನಿಗೆ ಸಮಯ ಪ್ರಜ್ಞೆ ಇಲ್ಲ, ಭಾರತ ಪ್ರಕಾಶಿಸುತ್ತಿದೆ ಎಂದುಕೊಂಡಿದ್ದೇವೆ. ಆದರೆ ಭಾರತ ಪ್ರಕಾಶಿಸುತ್ತಿಲ್ಲ ಎಂದು ಪಿಎಸ್‌ಐ ಭಿಮಾಶಂಕರ ಗುಳೆದವರು ಹೇಳಿದರು.

ಬೆಳಗಾವಿಯ ಜಿಲ್ಲಾ ಪಂಚಾಯತ್ ಸಭಾ ಭವನದಲ್ಲಿ ಸ್ಪಂದನಾ ಸಂಸ್ಥೆ, ಪೋಲಿಸ್ ಇಲಾಖೆಯ ಸಹಯೋಗದಲ್ಲಿ ಮಾನವ ಕಳ್ಳಸಾಗಾಣಿಕೆ ಹಾಗೂ ಜೀತ ಕಾರ್ಮಿಕ ಪದ್ಧತಿ ತಡೆಗಟ್ಟುವ ಕುರಿತು ನಡೆದ ಜಿಲ್ಲಾಮಟ್ಟದ ಕಾರ್ಯಗಾರದಲ್ಲಿ ಮಾತನಾಡಿದರು.

“ನಮ್ಮ ಪೊಲೀಸ್ ಇಲಾಖೆಯಲ್ಲಿ ನಿತ್ಯವೂ ದೌರ್ಜನ್ಯಕ್ಕೊಳಗಾದ ಪ್ರಕರಣಗಳನ್ನು ನೋಡುತ್ತಿರುತ್ತೇವೆ. ಅವುಗಳನ್ನು ತಡೆಯಲು ನಾವೂ ಕೂಡ ಪ್ರಯತ್ನ ಮಾಡುತ್ತೇವೆ. ಆದರೂ ಕೂಡ ದೌರ್ಜನ್ಯಗಳು ನಿಲ್ಲುತ್ತಿಲ್ಲ. ಯಾಕೆಂದರೆ ಹಿರಿಯರ ಬುದ್ಧಿ ಮಾತುಗಳನ್ನು ಅಪರಾಧಿಗಳು ಕೇಳುತ್ತಿಲ್ಲ. ಭಾರತದಲ್ಲಿ ಶೇ.95 ರಷ್ಟು ಶಿಕ್ಷಣವಂತರಿದ್ಧಾರೆ. ಪೋಲಿಸ ಇಲಾಖೆ ಮತ್ತು ನಾವುಗಳೆಲ್ಲರೂ ಸೇರಿ ಮಾನವ ಕಳ್ಳಸಾಗಾಣಿಕೆ ಮತ್ತು ಜೀತಪದ್ಧತಿ ನಿಲ್ಲಿಸೋಣ” ಎಂದು ಹೇಳಿದರು.

Advertisements

ನ್ಯಾಯವಾದಿ ಮತ್ತು ಸಾಮಾಜಿಕ ಹೋರಾಟಗಾರ ಬಿ ಎಲ್ ಪಾಟಿಲ್ ಮಾತನಾಡಿ, “ಸಂಘ ಸಂಸ್ಥೆಗಳು ಮಾನವ ಕಳ್ಳಸಾಗಾಣಿಕೆ ಮತ್ತು ಜೀತಪದ್ಧತಿ ಹಾಗೂ ಲೈಂಗಿಕ ಶೋಷಣೆಯ ಸಮಸ್ಯೆಗಳ ವಿರುದ್ಧ ಹೋರಾಡುತ್ತಿದ್ದು, ಆ ಸಂದರ್ಭದಲ್ಲಿ ಪೊಲೀಸ್ ಇಲಾಖೆಯೂ ಸಹಾಯ ಮಾಡಬೇಕು” ಎಂದು ಮನವಿ ಮಾಡಿದರು.

ಸ್ಪಂದನಾ ಸಂಸ್ಥೆಯ ವಿ ಸುಶೀಲಾ ಮಾತನಾಡಿ, ಬೆಳಗಾವಿ ಜಿಲ್ಲೆಯಲ್ಲಿ ಈವರೆಗೆ ನಡೆದಿರುವ ಜೀತಪದ್ಧತಿ ಮತ್ತು ಅದರಿಂದ ಕಾರ್ಮಿಕರಿಗಾದ ತೊಂದರೆಗಳು ಹಾಗೂ ಮಾನವ ಕಳ್ಳಸಾಗಣಿಕೆಯ ಕುರಿತಾಗಿ ಪೂರ್ಣವಾಗಿ ಮಾಹಿತಿ ನೀಡಿದರು.

ಈ ಸುದ್ದಿ ಓದಿದ್ದೀರಾ? ಧಾರವಾಡ | ರೆಡಿಮೇಡ್ ಬಟ್ಟೆ ಕಂಪನಿಗೆ ದಂಡ ವಿಧಿಸಿದ ಗ್ರಾಹಕರ ಆಯೋಗ

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಹಿರಿಯ ಸಿವಿಲ್ ನ್ಯಾಯಧೀಶರು ಮಾತನಾಡಿ, “ಮಾನವ ಕಳ್ಳಸಾಗಾಣಿಕೆ ಮತ್ತು ಜೀತಪದ್ಧತಿ‌ ತಡೆಯಲು ನಾವೂ ಕೂಡ ಮುಂದಾಗೋಣ” ಎಂದು ತಿಳಿಸಿದರು‌‌.

ಕಾರ್ಯಕ್ರಮದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ, ಕಾರ್ಮಿಕ ಇಲಾಖೆಯ ಅಧಿಕಾರಿಗಳು, ಜಿಲ್ಲಾ ಪಂಚಾಯತ್ ಅಧಿಕಾರಿಗಳು ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | SBUDA ದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ : ಸುಂದರೇಶ್

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ...

ಮಾಲೂರು | ‘ಕೆಲಸ ನೀಡದಿದ್ದರೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ’!

ಮಾಲೂರಿನ ವರ್ಗಾ ಕಂಪನಿ ಮುಚ್ಚುವುದನ್ನು ವಿರೋಧಿಸಿ ಇಂದು ಮಾಲೂರಿನಲ್ಲಿ ಕಾರ್ಮಿಕರು ಬೃಹತ್...

ಬೆಳಗಾವಿ : ಜಿಲ್ಲೆಯಲ್ಲಿ ಮೋಡ ಕವಿದ ಹವಾಮಾನ – ಅಲ್ಪ ಮಳೆಯ ಸಾಧ್ಯತೆ

ಬೆಳಗಾವಿ ಜಿಲ್ಲೆಯಲ್ಲಿ ತಾಪಮಾನ 20 ರಿಂದ 25 ಡಿಗ್ರಿ ಸೆಲ್ಸಿಯಸ್ ದಾಖಲಾಗುವ...

ಗಣೇಶ ಚತುರ್ಥಿಗೆ ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲು

ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಇಲಾಖೆಯು ಬೆಂಗಳೂರು-ಮಂಗಳೂರು...

Download Eedina App Android / iOS

X