ಬೆಳಗಾವಿ | ನಕಲಿ ನೋಟು ಸಾಗಾಟ; ಐವರು ಆರೋಪಿಗಳ ಬಂಧನ

Date:

Advertisements

ಬೆಳಗಾವಿ ಜಿಲ್ಲೆಯಲ್ಲಿ ನಕಲಿ ನೋಟು ಜಾಲವನ್ನು ಭೇದಿಸುವಲ್ಲಿ ಪೋಲಿಸರು ಯಶಸ್ವಿಯಾಗಿದ್ದಾರೆ. ಗೋಕಾಕ ಬೆಳಗಾವಿ ರಸ್ತೆಯ ಕಡಬಗಟ್ಟಿ ಗ್ರಾಮದ ಮೂಲಕ ಸಾಗುವ ರಸ್ತೆಯಲ್ಲಿ ಕೋಟಾ ನೋಟು ಸಾಗುತ್ತಿದ್ದ ವೇಳೆ ಕಾರೊಂದನ್ನು ತಪಾಸಣೆ ಮಾಡಿದಾಗ ₹100 ಹಾಗೂ ₹500 ರ ಮುಖಬೆಲೆಯ ನಕಲಿ ನೋಟುಗಳು ಪತ್ತೆಯಾಗಿದ್ದು, ಐವರು ಆರೋಪಿ ಆರೋಪಿಗಳನ್ನು ಬಂಧಿಸಿದ್ದಾರೆ.

ಗಸ್ತು ಪೊಲೀಸರು ನಡೆಸುತ್ತಿದ್ದ ಪೊಲೀಸರು ಕಾರೊಂದನ್ನು ತಪಾಸಣೆ ಮಾಡಿದಾಗ ಪ್ರಕರಣ ಬೆಳಕಿಗೆ ಬಂದಿದೆ. 100 ಹಾಗೂ 500 ಮುಖಬೆಲೆಯ ನಕಲಿ ನೋಟುಗಳು ಪತ್ತೆಯಾಗಿವೆ. ಆರೋಪಿಗಳ ಬಳಿ 500 ರೂಪಾಯಿ ಮುಖ ಬೆಲೆಯ 6 ಸಾವಿರದ 792 ನಕಲಿ ನೋಟುಗಳು ಪತ್ತೆಯಾಗಿವೆ.

WhatsApp Image 2024 07 08 at 10.12.13 AM

ಪ್ರಕರಣ ಸಂಬಂಧ ಐವರನ್ನು ಬಂಧಿಸಲಾಗಿದ್ದು, ಬಂಧಿತ ಆರೋಪಿಗಳು ಮಹಾಲಿಂಗಪುರದ ಸದ್ದಾಂ ಮೂಸಾ ಯಡಹಳ್ಳಿ, ರವಿ ಚನ್ನಪ್ಪ ಹ್ಯಾಗಡಿ, ದುಂಡಪ್ಪ ಮಹಾದೇವ ವನಶೆಣವಿ ಮತ್ತು ವಿಠ್ಠಲ ಹಣಮಂತ ಹೊಸಕೋಟಿ, ಮೂಡಲಗಿ ತಾಲೂಕಿನ ಅರಭಾವಿಯ ಅನ್ವರ್ ಮೊಹಮ್ಮದ್ ಸಲೀಂ ಯಾದವಾಡ ಎಂದು ಗುರುತಿಸಲಾಗಿದೆ.

Advertisements

ನಕಲಿ ನೋಟು ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಭೀಮಾಶಂಕರ ಗುಳೇದ್, “ಆರೋಪಿಗಳು ಖೋಟಾ ನೋಟು ಪ್ರಿಂಟ್ ಮಾಡಿ ಚಲಾವಣೆ ಮಾಡುತ್ತಿದ್ದರು ಹಾಗೂ ದುಪ್ಪಟ್ಟು ಹಣ ನೀಡುವ ಆಸೆ ತೋರಿಸಿ ವಹಿವಾಟು ನಡೆಸುತ್ತಿದ್ದರು. ಜಿಲ್ಲೆಯ ಹಲವೆಡೆ ಅಸಲಿ ನೋಟು ಎಂದು ನಂಬಿಸಿ ಮೋಸ ಮಾಡುತ್ತಿದ್ದರು” ಎಂದು ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ರೋಬೊಟ್ ಆತ್ಮಹತ್ಯೆ | ‘ಸು ಅಂದ್ರೆ ಸುಕ್ರುಂಡೆ’ ಅನ್ನುವ ನಮ್ಮ ಡೀಯರ್ ಮೀಡಿಯಾ!

ಖೋಟಾ ನೋಟು ಸಾಗಿಸುತ್ತಿದ್ದ ಆರೋಪಿಗಳಿಂದ ಪ್ರಿಂಟ್ ತೆಗೆಯಲು ಉಪಯೋಗಿಸುತ್ತಿದ್ದ ಕಂಪ್ಯೂಟರ್, ಸಿಪಿಯು, ಪ್ರಿಂಟರ್ ಮಷಿನ್, ಸ್ಕ್ರೀನಿಂಗ್ ಬೋರ್ಡ್, ಪೈಂಟ್, ಶೈನಿಂಗ್, ಡಿಕೋಟಿಂಗ್ ಪೌಡರ್, ಪ್ರಿಂಟಿಂಗ್ ಪೇಪರ್, ಆರು ಮೊಬೈಲ್, ಒಂದು ಬಿಳಿ ಬಣ್ಣದ ಕಾರು ಸೇರಿದಂತೆ ಸುಮಾರು 5,23,900 ರೂ. ಮೌಲ್ಯದ ವಸ್ತುಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ ಎಂದು ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ.

nakali 1 ನಕಲಿ ನೋಟು 1

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ಮೈಸೂರು | ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದ ಅತ್ತಿಗೋಡು ಸರ್ಕಾರಿ ಪ್ರೌಢಶಾಲೆ

ಕರ್ನಾಟಕದಲ್ಲಿ ಸರ್ಕಾರಿ ಶಾಲೆಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಸಾಕಷ್ಟು ಸವಾಲುಗಳನ್ನು ಸಹ ಎದುರಿಸುತ್ತಿದೆ....

ಗದಗ | ಹಾಸ್ಟೆಲ್‌ ವಿದ್ಯಾರ್ಥಿನಿ ಕೊಲೆ ಪ್ರಕರಣ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಎಸ್‌ಎಫ್‌ಐ ಆಗ್ರಹ

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕೋವೆರ ಹಟ್ಟಿಯ ವರ್ಷಿತಾ ಎಂಬ ಪದವಿ...

ಬೆಳ್ತಂಗಡಿ | ಸೌಜನ್ಯ ಹೋರಾಟಗಾರರ ಮೇಲೆ ನಿರಂತರ ಎಫ್‌ಐಆರ್: ಗಿರೀಶ್ ಮಟ್ಟಣ್ಣನವರ್ ಆಕ್ರೋಶ

ಗುರುವಾರ ಸೌಜನ್ಯಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಬಂಧನದ ವೇಳೆ ಪೊಲೀಸರ...

Download Eedina App Android / iOS

X