ಬೆಳಗಾವಿ | ವೃದ್ಧನ ಕೊಲೆ ಪ್ರಕರಣ; ಮೂವರು ಆರೋಪಿಗಳ ಬಂಧನ

Date:

Advertisements

ಬೆಳಗಾವಿ ಜಿಲ್ಲೆಯ ನಿಪ್ಪಾಣಿಯ ವೃದ್ಧ ಅಪ್ಪಾಸಾಬ ಭೀಮಾ ನಾಯಿಕರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಖಡಕಲಾಟ ಪೊಲೀಸರು ಬಂಧಿಸಿದ್ದಾರೆ.

ವಾಳಕಿ ಗ್ರಾಮ ನಿವಾಸಿಗಳಾದ ಸಂತೋಷ ಪರಶರಾಮ ನಾಯಿಕ(30), ಹೊಳೆಪ್ಪಾ ಅಲಿಯಾಸ್ ಬಚ್ಚನ ಮಾರುತಿ ಘಸ್ತಿ(23) ಮತ್ತು ಮಹೇಶ ಸುರೇಶ ಬೇರಡ(20) ಬಂಧಿತ ಆರೋಪಿಗಳು.

ನಮ್ಮ ತಂದೆ ಅಪ್ಪಾಸಾಬ ಭೀಮಾ ನಾಯಿಕ(64) ಕಾಣೆಯಾಗಿದ್ದಾರೆ ಎಂದು ಚಿಕ್ಕೋಡಿ ತಾಲೂಕಿನ ವಾಳಕಿ ಗ್ರಾಮದ ಕಾಕಾಸಾಹೇಬ ಅಪ್ಪಾಸಾಬ ನಾಯಿಕ ಅವರು ಸಮೀಪದ ಖಡಕಲಾಟ ಪೊಲೀಸ್‌ ಠಾಣೆಯಲ್ಲಿ ಆಗಸ್ಟ್ 11ರಂದು ದೂರು ದಾಖಲಿಸಿದ್ದರು.

Advertisements

ಜನವರಿ 9ರಂದು ಕಾಕಾಸಾಹೇಬ ಅವರು ಮತ್ತೆ ಠಾಣೆಗೆ ಬಂದು, ಮೂವರು ಸೇರಿ ನನ್ನ ತಂದೆಯನ್ನು ಕೊಲೆ ಮಾಡಿ ಶವವನ್ನು ಮಹಾರಾಷ್ಟ್ರದ ಫೋಂಡಾ ಘಾಟ್‌ನಲ್ಲಿ ಎಸೆದಿದ್ದಾರೆಂದು ಪೊಲೀಸರಿಗೆ ತಿಳಿಸಿದ್ದರು.

ಈ ಸುದ್ದಿ ಓದಿದ್ದೀರಾ?: ಬೆಳಗಾವಿ | ಅಂಗನವಾಡಿಗೆ ನುಗ್ಗಿ ಶಿಕ್ಷಕಿ ಮೇಲೆ ಅತ್ಯಾಚಾರಕ್ಕೆ ಯತ್ನ

ಆರೋಪಿ ಸಂತೋಷ ಪರಶರಾಮ ನಾಯಿಕ ಸಾರಾಯಿ ಕುಡಿದು ಅಮಲಿನಲ್ಲಿ ಕೊಲೆಯ ಮಾಹಿತಿಯನ್ನು ವಾಳಕಿ ಗ್ರಾಮದ ಕೆಂಪಣ್ಣ ನಾಯಿಕ ಅವರ ಮುಂದೆ ಹೇಳಿದ್ದಾನೆಂದು ಕಾಕಾಸಾಹೇಬ ಪೊಲೀಸರಿಗೆ ನೀಡಿರುವ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಸ್ಥಳೀಯ ಸಿಪಿಐ ಬಿ ಎಸ್ ತಳವಾರ ನೇತೃತ್ವದಲ್ಲಿ ಖಡಕಲಾಟ ಠಾಣೆಯ ಪ್ರಭಾರ ಪಿಎಸ್‌ಐ ಬಿ ಕೆ ಪಾಟೀಲ, ಸ್ಥಳೀಯ ಗ್ರಾಮೀಣ ಪಿಎಸ್‌ಐ ಶಿವರಾಜ ನಾಯಿಕವಾಡಿ, ಸ್ಥಳೀಯ ಬಿಸಿಪಿಎಸ್‌ ಪಿಎಸ್‌ಐ ರಮೇಶ ಪವಾರ ಮತ್ತು ಸಿಬ್ಬಂದಿಗಳು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಆರೋಪಿಗನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಶವದ ಕುರುಹುಗಳ ಬಗ್ಗೆ ಪೊಲೀಸರು ಪತ್ತೆ ಕಾರ್ಯ ಮುಂದುವರೆಸಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಮಹಾರಾಷ್ಟ್ರದಲ್ಲಿ ಮಳೆ – ಬೆಳಗಾವಿ ಜಿಲ್ಲೆಯ ನದಿ ತೀರದ ಗ್ರಾಮಗಳಲ್ಲಿ ಪ್ರವಾಹದ ಆತಂಕ

ಮಹಾರಾಷ್ಟ್ರದ ಕೊಂಕಣ ಭಾಗದಲ್ಲಿ ಭಾರೀ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಅಲ್ಲಿ ಇರುವ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

Download Eedina App Android / iOS

X