ಬೆಳಗಾವಿ | ಜಿಲ್ಲಾಧಿಕಾರಿ ಮನೆ ಮುಂದಿನ ವಿದ್ಯುತ್ ಕಂಬಕ್ಕೆ ಹಾಲಿನ ವಾಹನ ಡಿಕ್ಕಿ

Date:

  • ಮಂಜು ಮುಸುಕಿದ ವಾತವರಣದಿಂದ ನಡೆದ ಅಪಘಾತ
  • ಜಿಲ್ಲಾಧಿಕಾರಿ ಮನೆ ಮುಂದೆ ತಪ್ಪಿದ ಭಾರಿ ದುರಂತ

ಬೆಳಗಾವಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರ ಸರ್ಕಾರಿ ನಿವಾಸದ ಮುಂದೆ ಇದ್ದ ಹೈ ವೋಲ್ಟೇಜ್ ವಿದ್ಯುತ್ ಕಂಬಕ್ಕೆ ಹಾಲು ಸಾಗಿಸುವ ಗೂಡ್ಸ್‌ ವಾಹನವು ಡಿಕ್ಕಿ ಹೊಡೆದಿದ್ದು, ಭಾರಿ ಅನಾಹುತ ತಪ್ಪಿದಂತಾಗಿದೆ.

ಶನಿವಾರ ಮುಂಜಾನೆ ಈ ಅಪಘಾತ ನಡೆದಿದೆ. ಎಲ್ಲೆಡೆ ಮಂಜು ಮುಸುಕಿದ ವಾತಾವರಣ ಇದ್ದುದ್ದರಿಂದ ಈ ಅಪಘಾತ ಸಂಭವಿಸಿತು ಎಂದು ಗೂಡ್ಸ್‌ ವಾಹನದ ಚಾಲಕ ಪೊಲೀಸರ ಮುಂದೆ ಹೇಳಿಕೆ ನೀಡಿದ್ದಾನೆ.

ಜಿಲ್ಲಾಧಿಕಾರಿ ಮನೆ ಇರುವ ವಿಶ್ವೇಶ್ವರಯ್ಯ ನಗರದಲ್ಲಿ ಸಾರ್ವಜನಿಕರ ಸಂಚಾರ ಹೆಚ್ಚಾಗಿದ್ದು, ಪ್ರತಿ ದಿನ ಮುಂಜಾನೆ ಹಿರಿಯ ನಾಗರಿಕರು ಹಾಗೂ ಮಕ್ಕಳು ವಾಯು ವಿಹಾರಕ್ಕೆಂದು ಬರುತ್ತಿರುತ್ತಾರೆ. ಇವರೆಲ್ಲರೂ ಇದ್ದಾಗ ಅಪಘಾತ ಸಂಭವಿಸಿದ್ದರೆ ಭಾರಿ ಅನಾಯುತ ಆಗುತ್ತಿತ್ತು ಎಂದು ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? : ಜಾರ್ಖಂಡ್ | ಗೋಮಾಂಸ ಹೊಂದಿದ್ದ ವ್ಯಕ್ತಿ ಮೇಲೆ ಗುಂಪು ಹಲ್ಲೆ; ಪೊಲೀಸರ ರಕ್ಷಣೆ

ಹಾಲಿನ ಗೂಡ್ಸ್‌ ವಾಹನವು ಇಲ್ಲಿಗೆ ಬರುವಷ್ಟರಲ್ಲಿ ಕೆಲವು ಘಟಕಗಳಿಗೆ ಹಾಲನ್ನು ಸರಭರಾಜು ಮಾಡಿತ್ತು. ಅಪಘಾತವಾದ ನಂತರ, ಬೇರೊಂದು ವಾಹನ ತಂದು ಗಾಡಿಯಲ್ಲಿದ್ದ ಹಾಲನ್ನು ಸ್ಥಳಾಂತ ಮಾಡಲಾಯಿತು.

ಅಪಘಾತದ ರಭಸಕ್ಕೆ ಗೂಡ್ಸ್‌ ವಾಹನದ ಮುಂಭಾಗವು ನಜ್ಜುಗುಜ್ಜಾಗಿದ್ದು, ಚಾಲಕನಿಗೆ ಸಣ್ಣಪುಟ್ಟಗಾಯಗಳಾಗಿವೆ. ಬೆಳಗಾವಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಪ್ರಾಣಕ್ಕೆ ಯಾವುದೇ ಅಪಾಯವಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಲಕ್ಷ್ಮೇಶ್ವರ | ದೊಡ್ಡೂರಲ್ಲಿ ವಾರ್ಡ್ ಸಭೆ; ಗ್ರಾಮದ ಕುಂದು ಕೊರತೆಗಳ ಚರ್ಚೆ

ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ದೊಡ್ಡೂರ ಗ್ರಾಮದಲ್ಲಿ 1ನೇ ವಾರ್ಡ್ ಸಭೆಯನ್ನು...

ಕೊಪ್ಪಳ | ವಿಜಯನಗರ ಸಾಮ್ರಾಜ್ಯದ ಮೂಲ ನೆಲೆ ಕುಮ್ಮಟದುರ್ಗ; ಶಾಸಕ ಗಾಲಿ ಜನಾರ್ದನರೆಡ್ಡಿ

ವಿಶ್ವದ ಶ್ರೀಮಂತ ರಾಜ ಮನೆತನಗಳಲ್ಲಿ ಒಂದಾದ ಐತಿಹಾಸಿಕ ವಿಜಯನಗರ ಸಾಮ್ರಾಜ್ಯದ ಮೂಲ...

ವಿಜಯಪುರ | ಅಂಬೇಡ್ಕರ 67ನೇ ಮಹಾ ಪರಿನಿರ್ವಾಣ ಶೋಕ ಆಚರಿಸಿದ ದಲಿತ ವಿದ್ಯಾರ್ಥಿ ಪರಿಷತ್

ವಿಜಯಪುರ ನಗರದ ದಲಿತ ವಿದ್ಯಾರ್ಥಿ ಪರಿಷತ್ ಜಿಲ್ಲಾ ಕಚೇರಿಯಲ್ಲಿ ಡಾ. ಬಾಬಾ...

ರಾಷ್ಟ್ರದ ಭವಿಷ್ಯ ಯುವ ಸಮೂಹದ ಕೈಯಲ್ಲಿದೆ : ಮುಖ್ಯ ಆಯುಕ್ತ ತುಷಾರ್ ಗಿರಿನಾಥ್

"ರಾಷ್ಟ್ರದ ಭವಿಷ್ಯ ಯುವ ಸಮೂಹದ ಕೈಯಲ್ಲಿದ್ದು, ಎಲ್ಲರೂ ಮತದಾರರ ಪಟ್ಟಿಯಲ್ಲಿ ಸೇರ್ಪಡೆಯಾಗಿ...