ಬೆಳಗಾವಿ | ಇಂಗ್ಲಿಷ್‌ ಬ್ಯಾನರ್ ಹರಿದು ಕರವೇ ಕಾರ್ಯಕರ್ತರ ಆಕ್ರೋಶ; ವಶಕ್ಕೆ ಪಡೆದ ಪೊಲೀಸರು

Date:

Advertisements

ಬೆಳಗಾವಿಯ ಸುವರ್ಣಸೌಧದಲ್ಲಿ ಡಿಸೆಂಬರ್ 4ರಿಂದ ಚಳಿಗಾಲದ ಅಧಿವೇಶನ ಆರಂಭವಾಗಲಿದೆ. ಅದಕ್ಕೂ ಮುನ್ನ ಕರ್ನಾಟಕ ರಕ್ಷಣಾ ವೇದಿಕೆ (ಕರವೇ-ನಾರಾಯಣಗೌಡ ಬಣ) ಬೆಳಗಾವಿಯಲ್ಲಿ ಸದ್ದು ಮಾಡುತ್ತಿದೆ. ನಗರದಲ್ಲಿ ಹಾಕಲಾಗಿರುವ ಕನ್ನಡೇತರ ಬ್ಯಾನರ್‌ಗಳನ್ನು ಕರವೇ ಕಾರ್ಯಕರ್ತರು ಹರಿದು ಹಾಕಿದ್ದಾರೆ.

ನಗರದ ನಾನಾ ಬಡಾವಣೆಗಳಲ್ಲಿ ಹಾಕಲಾಗಿದ್ದ ಇಂಗ್ಲಿಷ್‌ ಸೇರಿದಂತೆ ಅನ್ಯ ಭಾಷೆಗಳ ಬ್ಯಾನರ್‌ಗಳು, ಫ್ಲೆಕ್ಸ್‌ಗಳನ್ನು ಹರಿದು ಹಾಕಿರುವ ಕಾರ್ಯಕರ್ತರು ಚೆನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಕನ್ನಡವಿಲ್ಲದೆ ಬರೀ ಇಂಗ್ಲಿಷ್ ಭಾಷೆಯಲ್ಲೇ ಜಾಹಿರಾತು ಸೇರಿದಂತೆ ವಿವಿಧ ಬ್ಯಾನರ್‌ಗಳನ್ನು ಹಾಕಿರುವವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ. ಅಲ್ಲದೆ, ಎಂಇಎಸ್‌ ಮಹಾವೇಳವನ್ನು ತಡೆಯುವಂತೆ ಒತ್ತಾಯಿಸಿದ್ದಾರೆ.

ಕರವೇ ಕಾರ್ಯಕರ್ತರು ಜಾಹೀರಾತು ಫಲಕಗಳನ್ನು ಹರಿಯುವ ವೇಳೆ, ಅವರನ್ನು ತಡೆಯಲು ಪೊಲೀಸರು ಯತ್ನಿಸಿದ್ದಾರೆ. ಪೊಲೀಸರು ಮತ್ತು ಕಾರ್ಯಕರ್ತರ ನಡುವೆ ವಾಗ್ವಾದ ನಡೆದಿದೆ. ಕರವೇ ಕಾರ್ಯಕರ್ತರು ತಂದಿದ್ದ ಮಸಿ ಮತ್ತು ಕಪ್ಪು ಬಣ್ಣದ ಬಾಟಲಿಗಳನ್ನು ಪೊಲೀಸರು ಕಸಿದುಕೊಂಡಿದ್ದಾರೆ. ಇಪ್ಪತ್ತಕ್ಕೂ ಹೆಚ್ಚು ಕಾರ್ಯಕರ್ತರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

Advertisements

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | ಮಿತಿ ಮೀರಿರುವ ಮಾದಕ ವಸ್ತು ಸೇವನೆ ಆಧುನಿಕತೆಗೆ ಮಾರಕವಾಗಿದೆ: ಗಾಂಧಿವಾದಿ ಪ್ರಸನ್ನ

ಮಾದಕ ವಸ್ತು ಮುಕ್ತ ಭಾರತವನ್ನು ಕಟ್ಟುವ ಸಕಲೇಶಪುರದ ಜನತೆಯ ಜತೆಗೆ ನಾನೂ...

ಚಿತ್ರದುರ್ಗ | ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಅನ್ಯಾಯ ಸರಿಪಡಿಸಿ; ಮಹಾನಾಯಕ ದಲಿತ ಸೇನೆ

ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಪ್ರತ್ಯೇಕ ಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯ ಎತ್ತಿ...

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

Download Eedina App Android / iOS

X