ಬೆಳಗಾವಿ | ಕಾಗವಾಡ ತಾಲೂಕಿಗೆ ಕಿತ್ತೂರು ರಾಣಿ ಚೆನ್ನಮ್ಮ ವೀರಜ್ಯೋತಿ

Date:

Advertisements

ಕಿತ್ತೂರು ಉತ್ಸವದ ಭಾಗವಾಗಿ ವೀರರಾಣಿ ಕಿತ್ತೂರು ಚೆನ್ನಮ್ಮ ಜ್ಯೋತಿಯು ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಸಂಚರಿಸಲಿದೆ. ಅಕ್ಟೋಬರ್‌ 17ರಂದು ವೀರ ಜ್ಯೋತಿಯು, ಕಾಗವಾಡ ತಾಲೂಕನ್ನು ತಲುಪಿದ್ದು, ತಾಲೂಕಿನ ಜನತೆ ಸಂಭ್ರಮದಿಂದ, ವೀರ ಜ್ಯೋತಿಯನ್ನು ಬರಮಾಡಿಕೊಂಡರು. ಅಕ್ಟೊಬರ್‌ 23ರಿಂದ 25ರವರೆಗೆ ಕಿತ್ತೂರು ಉತ್ಸವ ನಡೆಯಲಿದೆ.

ಬೆಂಗಳೂರಿನಿಂದ ಹೊರಟ ವೀರ ಜ್ಯೋತಿ ಕಾಗವಾಡ ತಾಲ್ಲೂಕಿನ ಮಂಗಸೂಳಿ ಗ್ರಾಮಕ್ಕೆ ತಲುಪಿದೆ. ವೀರ ಜ್ಯೋತಿಯನ್ನು ತಾಲೂಕು ಆಡಳಿತ ಸ್ವಾಗತಿಸಿತು. ತಹಸೀಲ್ದಾರ್‌ ರಾಜೇಶ್ ಬುರ್ಲಿ ಪೂಜೆ ಸಲ್ಲಿಸಿ‌, ಮಾಲಾರ್ಪಣೆ ಮಾಡಿ ಬರಮಾಡಿಕೊಂಡರು. ಅಂಗನವಾಡಿ ಕಾರ್ಯಕರ್ತೆಯರು ಆರತಿ ಎತ್ತಿ, ಜಯ ಘೋಷಗಳೊಂದಿಗೆ ಮೆರವಣಿಗೆ ಮೂಲಕ, ಕಾಗವಾಡ ತಾಲ್ಲೂಕಿನ ಉಗಾರ ಗ್ರಾಮಕ್ಕೆ ಜ್ಯೋತಿಯನ್ನು ಬೀಳ್ಕೊಟ್ಟರು.

ಈ ವೇಳೆ ಮಾತನಾಡಿದ ಕಾಗವಾಡ ತಾಲೂಕಿನ ತಹಸೀಲ್ದಾರ್‌, “ವೀರರಾಣಿ ಚೆನ್ನಮ್ಮನ ಸಾಹಸ ಶೌರ್ಯ ನಾಡಿನ ಜನರಿಗೆ ತಿಳಿಸುವ ಉದ್ದೇಶದಿಂದ ವೀರಜ್ಯೋತಿ ಸಂಚಾರಕ್ಕೆ ಮುಖ್ಯಮಂತ್ರಿಗಳು ಚಾಲನೆ ನೀಡಿದ್ದಾರೆ. ಈಗ ಕಾಗವಾಡ ತಾಲೂಕಿಗೆ ಬಂದಿದೆ”  ಎಂದು ತಿಳಿಸಿದರು.

Advertisements

ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಬಾಳು ಬಜಂತ್ರಿ, ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಆರ್. ಮುಂಜೆ, ಸಿಡಿಪಿಒ ಸಂಜುಕುಮಾರ ಸದಲಗೆ, ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯ ರವೀಂದ್ರ ಪೂಜಾರಿ, ಸಂಜಯ ತಳವಲಕರ, ಕಂದಾಯ ನಿರೀಕ್ಷಕ ಎಸ್.ಬಿ. ಮುಲ್ಲಾ, ಎಎಸ್‌ಐಬಿಎಂ ರಜಾಕನವರ ಬಾಬಾಸಾಹೇಬ ಪಾಟೀಲ್, ದೀಪಕ ಕುಟ್ಟವಾಡೆ, ಸಂಜೀವ ಸೂರ್ಯವಂಶಿ ಭಾಗಿಯಾಗಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X