ಬೆಳಗಾವಿ | ಆನ್‌ಲೈನ್‌ ಬೆಟ್ಟಿಂಗ್‌ಗೆ ದಂಡುಮಂಡಳಿ ಸಿಇಒ ಬಲಿ

Date:

Advertisements

ಆನ್‌ಲೈನ್ ಬೆಟ್ಟಿಂಗ್ ಮತ್ತು ಜೂಜಾಟದಲ್ಲಿ ಹಣ ಕಳೆದುಕೊಂಡಿದ್ದ ರಕ್ಷಣಾ ಇಲಾಖೆಯ ಅಡಿಯಲ್ಲಿರುವ ದಂಡುಮಂಡಳಿಯ ಸಿಇಒ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.

ಸರ್ಕಾರಿ ಅಧಿಕಾರಿ ಕೆ ಆನಂದ್‌ ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಅವರು ಬೆಳಗಾವಿಯಲ್ಲಿರುವ ರಕ್ಷಣಾ ಇಲಾಖೆಯ ಕ್ಯಾಂಪ್‌ನಲ್ಲಿದ್ದ ಸರ್ಕಾರಿ ನಿವಾಸದಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಕಳೆದ ನಾಲ್ಕು ದಿನಗಳ ಹಿಂದೆಯಷ್ಟೇ ಅವರ ನಿವಾದ ಮೇಲೆ ಸಿಬಿಐ ದಾಳಿ ನಡೆದಿತ್ತು ಎಂದು ತಿಳಿದುಬಂದಿದೆ.

ಅವರ ಮೃತದೇಹ ಬಳಿ ಎರಡು ಡೆತ್‌ನೋಟ್‌ಗಳು ಸಿಕ್ಕಿವೆ. ಒಂದು ಡೆತ್‌ನೋಟ್‌ನಲ್ಲಿ, ತಂದೆ ತಾಯಿಗೆ ಕ್ಷಮೆಯಾಚಿಸಿದ್ದಾರೆ. “ಬೇರೆ ಪ್ರಪಂಚಕ್ಕೆ ಹೋಗುತ್ತಿದ್ದೇನೆ. ನಿಮ್ಮನ್ನ ಸರಿಯಾಗಿ ನೋಡಿಕೊಳ್ಳಲು ಆಗಲಿಲ್ಲ. ಸೋದರ ಅಥವಾ ಸಹೋದರಿಯ ಮಗುವಾಗಿ ಹುಟ್ಟಿ ಬಂದು ನಿಮ್ಮನ್ನು ನೋಡಿಕೊಳ್ಳುತ್ತೇನೆ” ಎಂದು ಬರೆದಿದ್ದಾರೆ.

Advertisements

ಮತ್ತೊಂದು ಡೆತ್‌ನೋಟ್‌ನಲ್ಲಿ, “ಆನ್‌ಲೈನ್ ಮತ್ತು ಆಫ್‌ಲೈನ್‌ ಜೂಜಾಟದಲ್ಲಿ ಸಾಕಷ್ಟು ಹಣ ಕಳೆದುಕೊಂಡಿದ್ದೇನೆ. ಸಾಲ ಮಾಡಿಕೊಂಡಿದ್ದೇನೆ. ಸಾಲ ತೀರಿಸಲು ಆಗುತ್ತಿಲ್ಲ. ಹೀಗಾಗಿ, ಆತ್ಮಹತ್ಯೆ ದಾರಿ ಹಿಡಿದಿದ್ದೇನೆ” ಎಂದು ಬರೆದಿದ್ದಾರೆ.

ಸ್ಥಳಕ್ಕೆ ಬೆಳಗಾವಿ ನಗರ ಪೊಲೀಸ್ ಆಯುಕ್ತ ಸಿದ್ದರಾಮಪ್ಪ ಮತ್ತು ಪೊಲೀಸರು ಬಂದು ಪರಿಶೀಲನೆ ನಡೆಸಿದ್ದಾರೆ.

ಆನಂದ್‌ ಅವರು ಎರಡು ದಿನಗಳಿಂದ ಕೊಠಡಿಯಿಂದ ಹೊರ ಬಂದಿರಲಿಲ್ಲ. ಊಟವನ್ನೂ ತೆಗೆದುಕೊಂಡಿರಲಿಲ್ಲ. ಇದನ್ನು ಗಮನಿಸಿದ ಕ್ಯಾಂಪ್‌ನಲ್ಲಿದ್ದವರು ಪೊಲೀಸರಿಗೆ ಹಾಗೂ ಎಂಎಲ್‌ಆರ್‌ಸಿ ಮುಖ್ಯಸ್ಥರಿಗೆ ಮಾಹಿತಿ ನೀಡಿದ್ದಾರೆ.

ಪೊಲೀಸರು ಬಾಗಿಲು ಮುರಿದು ನೋಡಿದಾಗ, ಮೃತದೇಹ ಪತ್ತೆಯಾಗಿದೆ. ಹಾಸಿಗೆಯಲ್ಲಿ ವಿಷದ ಬಾಟಲಿ ಕೂಡ ಸಿಕ್ಕಿದೆ ಎಂದು ವರದಿಯಾಗಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

Download Eedina App Android / iOS

X