ಬೆಳಗಾವಿ | ಡಿಸಿಸಿ ಬ್ಯಾಂಕ್ ಚುನಾವಣೆ; ಲಾಂಗು, ಮಚ್ಚು ಹಿಡಿದು ಪುಂಡರ ಓಡಾಟ!

Date:

Advertisements

ಬೆಳಗಾವಿಯಲ್ಲಿ ಡಿಸಿಸಿ ಬ್ಯಾಂಕ್ ಚುನಾವಣೆ ನಡೆಯುತ್ತಿದ್ದು, ಚುನಾವಣಾ ಕಣದಲ್ಲಿ ಉಮೇಶ್ ಕತ್ತಿ ಮತ್ತು ಸತೀಶ್ ಜಾರಕಿಹೊಳಿ‌ ಬೆಂಬಲಿತ ಸದಸ್ಯರ ನಡುವೆ ಜಿದ್ದಾಜಿದ್ದಿ ನಡೆಯುತ್ತಿದೆ. ಚುನಾವಣೆ ವೇಳೆ ಮತದಾನ ಮಾಡಬೇಕಿರುವ ಕೃಷಿ ಪತ್ತಿನ ಸಹಕಾರಿ ಸಂಘದ ಸದಸ್ಯರ ಕಾವಲಿಗಾಗಿ ಕೆಲವು ಪುಂಡರು ಹುಕ್ಕೇರಿಯಲ್ಲಿ ರಾಜಾರೋಷವಾಗಿಯೇ ಲಾಂಗು, ಮಚ್ಚು ಹಿಡಿದು ಓಡಾಡುತ್ತಿದ್ದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವಿಡಿಯೋದಲ್ಲಿರುವವರು ಕತ್ತಿ ಬೆಂಬಲಿಗರು ಎಂದು ಹೇಳಲಾಗುತ್ತಿದೆ.

ವಿಡಿಯೋದಲ್ಲಿ; ಹುಕ್ಕೇರಿ ತಾಲೂಕಿನ ಬೆಲ್ಲದ ಬಾಗೇವಾಡಿಯ ವಿಶ್ವರಾಜ್ ಸುಗರ್ಸ್‌ ಕಟ್ಟಡದ ಸುತ್ತಮುತ್ತ ಪುಂಡರು ಲಾಂಗು, ಮಚ್ಚು ಹಿಡಿದು ಓಡಾಡುವ ದೃಶ್ಯಗಳು ಕಂಡುಬಂದಿವೆ. ಸಾರ್ವಜನಿಕವಾಗಿ ಪುಂಡರು ಮಾರಕಾಸ್ತ್ರ ಹಿಡಿದು ಓಡಾಡುತ್ತಿರುವುದು ಜನರಲ್ಲಿ ಭೀತಿ ಹುಟ್ಟುಹಾಕಿದೆ. ಮಾತ್ರವಲ್ಲದೆ, ಜನಾಕ್ರೋಶಕ್ಕೂ ಕಾರಣವಾಗಿದೆ.

ಕತ್ತಿ ಬೆಂಬಲಿತ ಸದಸ್ಯರನ್ನು ವಿರೋಧಿ ಬಣವು ತಮ್ಮ ತೆಕ್ಕೆಗೆ ತೆಗೆದುಕೊಳ್ಳಬಾರದು ಅಥವಾ ಅಪಹರಿಸಬಾರದೆಂದು ಸದಸ್ಯರನ್ನು ಕಾವಲು ಕಾಯಲಾಗುತ್ತಿದೆ ಎಂದು ಹೇಳಲಾಗಿದೆ. ಸದಸ್ಯರನ್ನು ಕಾವಲು ಕಾಯಲು ಪುಂಡರು ಮಾರಕಾಸ್ತ್ರಗಳನ್ನು ಹಿಡಿದು, ಅಡ್ಡಾಡುತ್ತಿದ್ದಾರೆ ಎಂದು ಆರೋಪಿಸಲಾಗಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಸ್ತೆಗುಂಡಿ ಬಗ್ಗೆ ಸಾರ್ವಜನಿಕರು ಮಾಹಿತಿ‌ ನೀಡುವ ವ್ಯವಸ್ಥೆ ರಾಜ್ಯದಲ್ಲಿ ಮಾತ್ರ: ಡಿಸಿಎಂ ಡಿ ಕೆ ಶಿವಕುಮಾರ್

ರಸ್ತೆಗುಂಡಿಗಳನ್ನು ಸಾರ್ವಜನಿಕಕರು ಗಮನಿಸಿ ಸರ್ಕಾರಕ್ಕೆ ತಿಳಿಸುವ ವ್ಯವಸ್ಥೆ ಇಡೀ ದೇಶದಲ್ಲಿ ಎಲ್ಲಾದರೂ...

ಜನಮನ ಗೆದ್ದ ತುಮಕೂರು ದಸರಾ ಉತ್ಸವ : ಡಾ. ಜಿ.ಪರಮೇಶ್ವರ

 ತುಮಕೂರು ದಸರಾ ಉತ್ಸವವು ನಾಡಿನಾದ್ಯಂತ ಜನರ ಮನಸ್ಸನ್ನು ಗೆಲ್ಲುವ ಮೂಲಕ ಐತಿಹಾಸಿಕ...

NCRB report-2023 | ಹಲವು ಅಪರಾಧ ಕೃತ್ಯಗಳಲ್ಲಿ ಕರ್ನಾಟಕಕ್ಕೆ ಕುಖ್ಯಾತಿ

ಭಾರತದ ವಿವಿಧ ರಾಜ್ಯಗಳಲ್ಲಿ 2023ರಲ್ಲಿ ನಾನಾ ರೀತಿಯಲ್ಲಿ ನಡೆದಿರುವ ದಾಖಲಿತ ಅಪರಾಧ...

Download Eedina App Android / iOS

X