ಬೆಳಗಾವಿ | ಡೀಸೆಲ್ ದರ ಏರಿಕೆ, ಬಸ್ ಟಿಕೆಟ್ ದರ ಏರಿಕೆ ಅನಿವಾರ್ಯ: ವಾಯವ್ಯ ಕರ್ನಾಟಕ ಸಾರಿಗೆ ಅಧ್ಯಕ್ಷ ರಾಜು ಕಾಗೆ

Date:

Advertisements

ಡೀಸೆಲ್ ದರ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಬಸ್ ದರ ಏರಿಕೆ ಅನಿವಾರ್ಯ ಎಂದು ವಾಯವ್ಯ ಕರ್ನಾಟಕ ಸಾರಿಗೆ ಅಧ್ಯಕ್ಷ ಮತ್ತು ಕಾಗವಾಡ ಶಾಸಕರಾದ ರಾಜು ಕಾಗೆ ತಿಳಿಸಿದ್ದಾರೆ.

ಈ ಸಂಬಂಧ ಹೇಳಿಕೆ ನೀಡಿರುವ ಅವರು, ಡಿಸೇಲ್ ಮತ್ತು ಬಸ್ ವಾಹನಗಳ ಬಿಡಿ ಭಾಗಗಳ ದರ ಹೆಚ್ಚಳವಾಗಿರುವುದು ಟಿಕೆಟ್ ದರ ಹೆಚ್ಚಳ ಮಾಡಬೇಕಾಗಿದೆ. ಸುಮಾರು ನಾಲ್ಕು ವರ್ಷಗಳಿಂದ ಬಸ್‌ ಟಿಕೆಟ್ ದರ ಹೆಚ್ಚಳ ಮಾಡಿಲ್ಲ. ಅಷ್ಟೇ ಅಲ್ಲದೆ, ಬಸ್ ವಾಹನ ಬಿಡಿಭಾಗಗಳು ಸೇರಿದಂತೆ ಡಿಸೆಲ್ ಏರಿಕೆಯ ಕಾರಣ ಬಸ್ ಟಿಕೆಟ್ ದರ ಹೆಚ್ಚಳ ಮಾಡುವ ಕುರಿತು ಚಿಂತನೆ ನಡೆದಿದೆ ಆದರೆ ಇನ್ನು ಸಂಪೂರ್ಣವಾಗಿ ನಿರ್ಣಯ ಕೈಗೊಂಡಿಲ್ಲ ಎಂದು ತಿಳಿಸಿದ್ದಾರೆ.

ಸರ್ಕಾರದ ಶಕ್ತಿ ಯೋಜನೆಯಿಂದ ಸಾರಿಗೆ ಇಲಾಖೆಗೆ ಹೆಚ್ಚಿನ ಆದಾಯ ಬರುತ್ತಿದೆ. 400 ಬಸ್ಸುಗಳನ್ನು ಸಹ ಹೆಚ್ಚಿಗೆ ಖರೀದಿಸಲಾಗಿದೆ. ಹಾಗೆಯೇ ಹಳೆಯ ಬಸ್‌ಗಳನ್ನು ಮಾರಾಟ ಮಾಡಲಾಗುತ್ತಿದೆ. ಈಗ ಹೊಸದಾಗಿ 10 ಬಸ್‌ಗಳು ಬಂದಿವೆ ಮತ್ತು ಆ ಬಸ್ ಗಳ ಪ್ರಾಯೋಗಿಕ ಚಾಲನೆಯು ನಡೆದಿದೆ ಎಂದು ತಿಳಿಸಿದರು.

Advertisements

ಇದನ್ನು ಓದಿದ್ದೀರಾ? ಹೃದಯ ವಿದ್ರಾವಕ ಘಟನೆ | ಸಿಗದ ಆ್ಯಂಬುಲೆನ್ಸ್: ಮೃತಪಟ್ಟ ಮಕ್ಕಳನ್ನು ಹೆಗಲ ಮೇಲೆ ಹೊತ್ತೊಯ್ದ ಪೋಷಕರು!

ಒಂದು ವಾರದೊಳಗೆ 400 ಬಸ್‌ಗಳು ವಾಯುವ್ಯ ಕರ್ನಾಟಕ ಸಾರಿಗೆ ಸಂಸ್ಥೆಗೆ ಬರಲಿವೆ. ನಂತರ ಅಥಣಿ, ಕಾಗವಾಡ, ಚಿಕ್ಕೋಡಿ, ಬೆಳಗಾವಿ, ಬಾಗಲಕೋಟ ವಿವಿಧ ಭಾಗಗಳಲ್ಲಿ ಅವಶ್ಯಕತೆಗೆ ಅನುಗುಣವಾಗಿ ಹಂಚಿಕೆ ಮಾಡಿ ಪ್ರಯಾಣಿಕರಿಗೆ ಅನುಕೂಲ ಮಾಡಿ ಕೊಡಲಾಗುವುದು ಎಂದು ಶಾಸಕ ರಾಜು ಕಾಗೆ ತಿಳಿಸಿದ್ದಾರೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಮಹಾರಾಷ್ಟ್ರದಲ್ಲಿ ಮಳೆ – ಬೆಳಗಾವಿ ಜಿಲ್ಲೆಯ ನದಿ ತೀರದ ಗ್ರಾಮಗಳಲ್ಲಿ ಪ್ರವಾಹದ ಆತಂಕ

ಮಹಾರಾಷ್ಟ್ರದ ಕೊಂಕಣ ಭಾಗದಲ್ಲಿ ಭಾರೀ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಅಲ್ಲಿ ಇರುವ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

Download Eedina App Android / iOS

X