ಬೆಳಗಾವಿ | ಪಾಲಿಕೆಯಲ್ಲಿ ಕಡತ ನಾಪತ್ತೆ; ಮೇಯರ್ ವಿರುದ್ಧ ದೂರು ದಾಖಲು

Date:

Advertisements

ಬೆಳಗಾವಿಯಲ್ಲಿ 2023-25ನೇ ಆರ್ಥಿಕ ವರ್ಷದಲ್ಲಿ ತೆರಿಗೆ ಹೆಚ್ಚಳ ಮಾಡುವುದಕ್ಕೆ ಸಂಬಂಧಿಸಿದಂತೆ ಬೆಳಗಾವಿ ಮಹಾನಗರ ಪಲಿಕೆಯ ಮೇಯರ್ ತಪ್ಪಾಗಿ ಸಹಿ ಹಾಕಿದ್ದ ಪತ್ರ ಕಾಣೆಯಾಗಿದೆ. ಈ ಸಂಬಂಧ ಪಾಲಿಕೆಯ ಪರಿಷತ್ ಕಾರ್ಯದರ್ಶಿ ಮತ್ತು ಮೇಯರ್ ವಿರುದ್ಧ ಪಾಲಿಕೆ ಆಯುಕ್ತ ಅಶೋಕ್​ ದುಡಗುಂಟಿ ಅವರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಪಾಲಿಕೆಯ ಕೌನ್ಸಿಲ್ ಸಭೆಯು 2023-24ನೇ ಆರ್ಥಿಕ ವರ್ಷದಲ್ಲಿ ತೆರಿಗೆ ಹೆಚ್ಚಳ ಮಾಡಲು ನಿರ್ಧಿರಿಸಿತ್ತು. ಅದಕ್ಕೆ ಮೇಯರ್ ಅನುಮೋದನೆ ಪಡೆಯಲು ಪತ್ರ ಸಿದ್ದಪಡಿಸಿತ್ತು. ಆದರೆ, ಪತ್ರದಲ್ಲಿ 2023-24 ಬದಲಾಗಿ 24-25 ಎಂದು ನಮೂದಿಸಲಾಗಿತ್ತು. ಅದನ್ನು ಸರಿಯಾಗಿ ಪರಿಶೀಲಿಸದ ಮೇಯರ್ ಸಹಿ ಹಾಕಿದ್ದರು. ಆದರೆ, ಈಗ ಆ ಪತ್ರವೇ ಕಾಣೆಯಾಗಿವೆ.

ಪತ್ರ ಕಾಣೆಯಾಗಿರುವ ಬಗ್ಗೆ ಪಾಲಿಕೆಯ ಸಾಮಾನ್ಯ ಸಭೆಯಲ್ಲಿ ಗದ್ದಲ ನಡೆದಿತ್ತು. ತನಿಖೆ ನಡೆಸಲು ಪಾಲಿಕೆ ನಿರ್ಣಯಿಸಿತ್ತು. ಬಳಿಕ, ಪತ್ರ ಕಾಣೆಯಾಗಿರುವ ಸಂಬಂಧ ತನಿಖೆ ನಡೆಸುವಂತೆ ಸಚಿವ ಸತೀಶ್ ಜಾರಕಿಹೊಳಿ ನೇತೃತ್ವದಲ್ಲಿ ಪಾಲಿಕೆ ಆಯುಕ್ತರು ಬೆಳಗಾವಿ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

Advertisements

“ಪಾಲಿಕೆ ಮೇಯರ್ ಶೋಭಾ ಸೋಮನಾಚೆ ವಿರುದ್ಧ ದೂರು ದಾಖಲಿಸಿದ್ದೇವೆ. ಬಿಜೆಪಿಗರು ಕಡತವನ್ನು ಆಯಕ್ತರೇ ಸರ್ಕಾರಕ್ಕೆ ಸಲ್ಲಿಸುತ್ತಾರೆ. ಅವರನ್ನೇ ಏನೋ ಕೈವಾಡವಿದೆ ಎನ್ನುತ್ತಿದ್ದಾರೆ. ಮೇಯರ್ ಸಹಿ ಮಾಡಿದ ನಂತರವೇ ಆಯುಕ್ತರು ಸರ್ಕಾರಕ್ಕೆ ವರದಿ ಸಲ್ಲಿಸುವುದು. ಹೀಗಾಗಿ, ಕಡತವನ್ನು ಯಾರೋ ಬಚ್ಚಿಟ್ಟಿದ್ದಾರೆ. ಕಡತ ಸಿಕ್ಕ ಬಳಿಕ ಸತ್ಯಾಂಶ ಹೊರಬರುತ್ತದೆ” ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.

“ಪಾಲಿಕೆಯಲ್ಲಿ ಮೇಯರ್ ಅವರೇ ಸುಪ್ರೀಂ ಆಗಿರುತ್ತಾರೆ. ಅವರು ಪತ್ರದಲ್ಲಿದ್ದ ತಪ್ಪನ್ನು ಸರಿ ಮಾಡುವುದು ಬಿಟ್ಟು, ಕಡತವನ್ನು ಕಾಣೆಯಾಗಿಸಿ ತಪ್ಪೆಸದ್ದಾರೆ. ಪೊಲೀಸರು ಯಾವ ರೀತಿಯ ಕ್ರಮ ಕೈಗೊಳ್ಳುತ್ತಾರೆ ಎಂಬುದನ್ನು ಕಾದು ನೋಡೋಣ” ಎಂದು ಜಾರಕಿಹೊಳಿ ಹೇಳಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರು | ನ್ಯಾಯಬೆಲೆ ಅಂಗಡಿಯಲ್ಲಿ ‘ಗೋಣಿಚೀಲ’ಕ್ಕಾಗಿ ಜಗಳ: ಮಹಿಳೆಯ ವಿಡಿಯೋ ಮಾಡಿ ತೇಜೋವಧೆಗೆ ಯತ್ನ!

ನ್ಯಾಯಬೆಲೆ ಅಂಗಡಿಯಲ್ಲಿ 'ಗೋಣಿಚೀಲ' ನೀಡುವಂತೆ ಪಟ್ಟು ಹಿಡಿದದ್ದಲ್ಲದೇ, ಗ್ರಾಹಕನೋರ್ವ ನ್ಯಾಯಬೆಲೆ ಅಂಗಡಿಯವರ...

ಮೈಸೂರು | ಜಿ ಟಿ ದೇವೇಗೌಡರ ದಲಿತ ವಿರೋಧಿ ಹೇಳಿಕೆ ಖಂಡಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಮೈಸೂರು ವಿಶ್ವವಿದ್ಯಾನಿಲಯದ ಸಂಶೋಧಕರ ಸಂಘ ಹಾಗೂ ದಲಿತ ವಿದ್ಯಾರ್ಥಿ ಒಕ್ಕೂಟದ ವಿದ್ಯಾರ್ಥಿಗಳು...

ಹಾವೇರಿ | ಗಣೇಶ ಚತುರ್ಥಿ ಪ್ರಯುಕ್ತ 265 ಹೆಚ್ಚುವರಿ ಸಾರಿಗೆ ಸೌಲಭ್ಯ

ಚತುರ್ಥಿಯ ಪ್ರಯುಕ್ತ ಸಾರ್ವಜನಿಕರು ತಮ್ಮ ಸ್ವಂತ ಊರುಗಳಿಗೆ ತೆರಳಲು ಅನುಕೂಲವಾಗುವಂತೆ ವಾಯವ್ಯ...

ಗದಗ | ಆಗಸ್ಟ್ 25ಕ್ಕೆ ಲೋಕಾಯುಕ್ತ ಜನ ಸಂಪರ್ಕ ಸಭೆ

ಸಾರ್ವಜನಿಕ ಕುಂದು-ಕೊರತೆಗಳ ಅಹವಾಲು ಸ್ವೀಕರಿಸಲು ಆಗಸ್ಟ್ 25 ಸೋಮವಾರದಂದು  ಗದಗ ಶಿರಹಟ್ಟಿ...

Download Eedina App Android / iOS

X