ಬೆಳಗಾವಿ | ಕನ್ನಡ ಪರ ಹೋರಾಟಗಾರರ ವಿರುದ್ದದ ಪ್ರಕರಣ ವಾಪಸ್‌ ಪಡೆಯಲು ಆಗ್ರಹ

Date:

ಬೆಳಗಾವಿಯಲ್ಲಿ ಕನ್ನಡ ಪರ ಹೋರಾಟಗಾರರ ವಿರುದ್ಧ ದಾಖಲಾಗಿರುವ ಪ್ರಕರಣಗಳನ್ನು ಸರ್ಕಾರ ತಕ್ಷಣವೇ ಹಿಂಪಡೆಯಬೇಕೆಂದು ಕನ್ನಡ ಪರ ಹೋರಾಟಗಾರರು ಒತ್ತಾಯಿಸಿದ್ದಾರೆ. ಮೇಕೆದಾಟು ಹೋರಾಟಗಾರರ ಕೇಸ್ ಹಿಂಪಡೆಯಲು ಮುಂದಾಗಿರುವ ಸರ್ಕಾರ, ಗಡಿ ಜಿಲ್ಲೆ ಹೋರಾಟಗಾರರನ್ನು ಮರೆತಿದೆ ಎಂದು ಆರೋಪಿಸಿ ಹೋರಾಟಗಾರರು ಆಕ್ರೋಶ ಹೊರಹಾಕಿದ್ದಾರೆ.

- Advertisement -

ಅಭಿವೃದ್ಧಿ ಸೇರಿದಂತೆ ಎಲ್ಲ ವಿಚಾರದಲ್ಲಿಯೂ ಉತ್ತರ ಕರ್ನಾಟಕ ತಾರತಮ್ಯಕ್ಕೆ ಒಳಗಾಗುತ್ತಿದೆ. ಈಗ ಹೋರಾಟಗಾರರ ವಿಚಾರದಲ್ಲೂ‌ ಸರ್ಕಾರ ಮಲತಾಯಿ ಧೋರಣೆ ಅನುಸರಿಸುತ್ತಿದೆ ಎಂಬ ಅನುಮಾನ ಮೂಡಿದೆ ಎನ್ನುತ್ತಿದ್ದಾರೆ ಹೋರಾಟಗಾರರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...

ತೀವ್ರ ವಿರೋಧದ ಮಧ್ಯೆ ಬೆಳಗಾವಿ ಮಹಾನಗರ ಪಾಲಿಕೆ ಮುಂದೆ 2020ರಲ್ಲಿ ಕನ್ನಡ ಧ್ವಜವನ್ನು ನೆಟ್ಟು ಕನ್ನಡ ಸಂಘಟನೆಗಳು ಸಂಭ್ರಮಿಸಿದ್ದವು. ಇದಾದ ಒಂದು ವರ್ಷದ ಬಳಿಕ ಆ ಧ್ವಜ ಹಳೆಯದಾಗಿದ್ದು, ಹರಿದು ಹೋಗಿದೆ. ಹಾಗಾಗಿ, ಹೊಸ ಧ್ವಜ ಹಾರಿಸಬೇಕು. ನೀವು ಧ್ವಜ ಬದಲಿಸದಿದ್ದರೆ ನಾವೇ ಬದಲಿಸುತ್ತೇವೆ ಎಂದು ಕನ್ನಡ ಹೋರಾಟಗಾರರು ಪಾಲಿಕೆ ಅಧಿಕಾರಿಗಳಿಗೆ ಕೇಳಿಕೊಂಡಿದ್ದರು. ಈ ವೇಳೆ ಅವರನ್ನು ತಡೆದ ಪೊಲೀಸರು ಹೋರಾಟಗಾರರನ್ನು ಬಂಧಿಸಿದ್ದರು. ಬೆಳಗಾವಿಯ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ಜೂನ್ 5, 2021ರಲ್ಲಿ ಈ ಸಂಬಂಧ ಕೇಸ್ ದಾಖಲಾಗಿತ್ತು.

ಕೋವಿಡ್ ನಿಯಮಾವಳಿ ಉಲ್ಲಂಘಿಸಿ ಪ್ರತಿಭಟನೆ ಮಾಡಿದ್ದಿರಿ ಎಂದು 51(ಬಿ) ವಿಪತ್ತು ನಿರ್ವಹಣಾ ಕಾಯ್ದೆ 2005ರಡಿ ಹೋರಾಟಗಾರರನ್ನು ಬಂಧಿಸಲಾಗಿತ್ತು. ಸದ್ಯ ಬೆಳಗಾವಿಯ ಜೆಎನ್ಎಫ್​ಸಿ 2ನೇ ನ್ಯಾಯಾಲಯದಲ್ಲಿ ಶ್ರೀನಿವಾಸ ತಾಳೂಕರ್, ಅಕ್ಬರ್ ಸೆಡೇಕರ್, ರೇಷ್ಮಾ ಕಿತ್ತೂರು, ವಾಜೀದ್ ಹಿರೇಕೊಡಿ, ನಾಗೇಶ ಕೊಪ್ಪದ ಸೇರಿ 11 ಜನ ಕನ್ನಡ ಹೋರಾಟಗಾರರ ಮೇಲೆ ವಿಚಾರಣೆ ನಡೆಯುತ್ತಿದೆ.

ಕನ್ನಡ ಪರ ಹೋರಾಟಗಾರ ಶ್ರೀನಿವಾಸ ತಾಳೂಕರ್, ಗಡಿಯಲ್ಲಿ ಕನ್ನಡ ಉಳಿಸಲು ಪ್ರತಿಕ್ಷಣವೂ ಹೋರಡುವ ನಾವು ಕೋರ್ಟ್​ಗೆ ಅಲೆದಾಡುವ ಸ್ಥಿತಿ ನಿರ್ಮಾಣವಾಗಿದೆ. ಮೇಕೆದಾಟು ಹೋರಾಟಗಾರ ಕೇಸ್ ಹಿಂಪಡೆಯುತ್ತೇವೆ ಎನ್ನುವ ಸರ್ಕಾರ, ಬೆಳಗಾವಿಯ ಕನ್ನಡ ಹೋರಾಟಗಾರರ ಬಗ್ಗೆ ಮಾತನಾಡುತ್ತಿಲ್ಲ. ಗಡಿ ಭಾಗದ ಹೋರಾಟಗಾರರಿಗೆ ಶಕ್ತಿ ತುಂಬಬೇಕಾದ ಸರ್ಕಾರವೇ ಹೀಗೆ ತಾರತಮ್ಯ ಮಾಡಿದರೆ ಹೇಗೆ ಎಂದು ಪ್ರಶ್ನಿಸಿದರು.

ಕನ್ನಡ ಪರ ಹೋರಾಟಗಾರ ವಿಜಯಕುಮಾರ್ ಮಾತನಾಡಿ, ‌ಗಡಿ ಕನ್ನಡ ಹೋರಾಟಗಾರರ ಮೇಲೆ ಪೊಲೀಸರು ಸುಳ್ಳು ಕೇಸ್ ದಾಖಲಿಸಿದ್ದು ಖಂಡನೀಯ. ತಕ್ಷಣವೇ ಕೇಸ್ ಹಿಂಪಡೆಯುವಂತೆ ಕನ್ನಡ ಸಂಘಟನೆ ಒಕ್ಕೂಟವು ಸಿಎಂ ಸಿದ್ದರಾಮಯ್ಯ ಅವರನ್ನು ಶೀಘ್ರವೇ ಭೇಟಿ ಮಾಡಿ ಮನವಿ ಸಲ್ಲಿಸಲಿದೆ. ಏನೆನೋ ಅಪರಾಧ ಮಾಡಿದವರ ಕೇಸ್ ಹಿಂಪಡೆದು ರಾಜಮರ್ಯಾದೆ ಕೊಡ್ತಾರೆ. ಆದರೆ, ಕನ್ನಡ ಹೋರಾಟಗಾರರಿಗೆ ಈ ರೀತಿ ಅನ್ಯಾಯ ಮಾಡುವುದು ಸರಿಯಲ್ಲ, ಎಂದು ಕಿಡಿಕಾರಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | UAPA, NSA ಕಾಯ್ದೆಗಳು ಸಂವಿಧಾನಿಕ ಹಕ್ಕುಗಳ ದಮನಕ್ಕೆ ಅಸ್ತ್ರವಾಗುತ್ತಿವೆ : ಪ್ರೊ. ಫಣಿರಾಜ್

ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಬಂಧನವಾಗಿ ಆರು ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ,...

ಉಡುಪಿ | ಕಟ್‌ಬೇಲ್ತೂರು ರೈಲ್ವೆ ಸೇತುವೆ ಅಪಾಯಕಾರಿ ತಿರುವು ಸರಿಪಡಿಸಲು ಆಗ್ರಹಿಸಿ ಸಿಪಿಎಂ ಪ್ರತಿಭಟನೆ

ಕಟ್‌ಬೇಲ್ತೂರು ಗ್ರಾಮದ ರೈಲ್ವೆ ಸೇತುವೆಯಲ್ಲಿರುವ ಅಪಾಯಕಾರಿ ತಿರುವನ್ನು ತಕ್ಷಣ ಸರಿಪಡಿಸಿ, ಸಾರ್ವಜನಿಕರ...

ಉಡುಪಿ | ಮಲ್ಪೆ–ತೀರ್ಥಹಳ್ಳಿ ಹೆದ್ದಾರಿ ಕಾಮಗಾರಿ ಅಂತಿಮ ಹಂತ; ಬಾಕಿ ಭೂಸ್ವಾಧೀನಕ್ಕೆ ಕೋಟ ಶ್ರೀನಿವಾಸ ಪೂಜಾರಿ ಸೂಚನೆ

ರಾಷ್ಟ್ರೀಯ ಹೆದ್ದಾರಿ 169ಎರ ಮಲ್ಪೆ–ಕರಾವಳಿ ಬೈಪಾಸ್‌ವರೆಗಿನ ಬಾಕಿ ಉಳಿದಿರುವ ಭೂಸ್ವಾಧೀನ ಪ್ರಕ್ರಿಯೆಯನ್ನು...