ಬೆಳಗಾವಿ | ಸಂಕಷ್ಟದಲ್ಲಿ ಚರ್ಮ ಕುಶಲಕರ್ಮಿಗಳು; ಅಧಿವೇಶನದಲ್ಲಿ ಚರ್ಚೆಗೆ ಒತ್ತಾಯ

Date:

ಚರ್ಮ ಕುಶಲಕರ್ಮಿಗಳ ಬಗ್ಗೆ ಬೆಳಗಾವಿ ಅಧಿವೇಶನದಲ್ಲಿ ಚರ್ಚಿಸಿ, ನೆರವಿಗೆ ಬರುವಂತೆ ಕುಶಲಕರ್ಮಿಗಳು ಆಗ್ರಹಿಸುತ್ತಿದ್ದಾರೆ.

- Advertisement -

ಕೊಲ್ಹಾಪುರಿ ಚಪ್ಪಲಿಗೆ ಮಹಾರಾಷ್ಟ್ರದ ಕೊಲ್ಹಾಪುರದ ಹೆಸರು ಬಂದಿದ್ದರೂ ತಯಾರಾಗುವುದು ಮಾತ್ರ ಕರ್ನಾಟಕದಲ್ಲಿ. ಆದರೆ, ಸರಿಯಾದ ಮಾರುಕಟ್ಟೆ ಸೌಲಭ್ಯವಿಲ್ಲದೇ ಚರ್ಮ ಉದ್ಯೋಗವನ್ನೇ ನಂಬಿ ಜೀವನ ಸಾಗಿಸುತ್ತಿರುವ ಬೆಳಗಾವಿ ಜಿಲ್ಲೆಯ ಒಂದೂವರೆ ಲಕ್ಷಕ್ಕೂ ಹೆಚ್ಚು ಕುಟುಂಬಗಳು ಸಂಕಷ್ಟಕ್ಕೆ ಸಿಲುಕಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...

ಜಿಲ್ಲೆಯ ಚಿಕ್ಕೋಡಿ ಉಪವಿಭಾಗದ ಅಥಣಿ, ನಿಪ್ಪಾಣಿ, ರಾಯಬಾಗ ಸೇರಿದಂತೆ ಒಂದೂವರೆ ಲಕ್ಷಕ್ಕೂ ಹೆಚ್ಚು ಚರ್ಮ ಕುಶಲಕರ್ಮಿಗಳಿದ್ದಾರೆ. ಹಲವು ವರ್ಷಗಳಿಂದ ಈ ಕುಟುಂಬಗಳು ಚರ್ಮದ ಚಪ್ಪಲಿ ತಯಾರಿಸುತ್ತಿವೆ. ಅಥಣಿ ಸೇರಿ ವಿವಿಧೆಡೆ ತಯಾರಾಗುವ ವಿಶಿಷ್ಟ ಶೈಲಿಯ ಚಪ್ಪಲಿಗೆ ಹೆಸರು ಬಂದಿದ್ದು ಮಾತ್ರ ಮಹಾರಾಷ್ಟ್ರದ ಕೊಲ್ಹಾಪುರದ್ದು.

ಮಾರುಕಟ್ಟೆಯಲ್ಲಿ ಬಂದಿರುವ ದೊಡ್ಡ ದೊಡ್ಡ ಬ್ರ್ಯಾಂಡ್​ಗಳ ಮಧ್ಯೆ ಅಥಣಿಯ ಚಪ್ಪಲಿ ತಯಾರಿಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಅದರಲ್ಲೂ ಚರ್ಮ ಕುಶಲಕರ್ಮಿಗಳ ಬಳಿಯೂ ಶೇಕಡ 12ರಷ್ಟು ಜಿಎಸ್​ಟಿ ವಸೂಲಾತಿ ಮಾಡಲಾಗುತ್ತಿದ್ದು, ನಮಗೆ ತೊಂದರೆಯಾಗಿದೆ ಎಂದು ಅಖಿಲ ಕರ್ನಾಟಕ ಚರ್ಮಕಾರ ಸಮಾಜ ಮಹಾಒಕ್ಕೂಟ ಅಧ್ಯಕ್ಷ ಅನಿಲ್ ಕುಮಾರ್ ಸೌದಾಗರ್ ಆರೋಪಿಸಿದ್ದಾರೆ.

ಅಷ್ಟೇ ಅಲ್ಲದೇ ಅಥಣಿಯಲ್ಲಿ ತಯಾರಾಗಿ ವಿದೇಶಕ್ಕೆ ಚಪ್ಪಲಿಗಳು ರಫ್ತಾಗುತ್ತಿತ್ತು. ಅದನ್ನೂ ಸಹ ಈಗ ಸ್ಥಗಿತಗೊಳಿಸಿದ್ದಾರೆ. ಮೊದಲು ರಾಜ್ಯ ಸರ್ಕಾರ 60:40 ಅನುಪಾತದಲ್ಲಿ ಸಬ್ಸಿಡಿ ಸೌಲಭ್ಯ ನೀಡುತ್ತಿತ್ತು. ಇದನ್ನು ಕಡಿತ ಮಾಡಿದ್ದು ಚರ್ಮ ಕುಶಲಕರ್ಮಿಗಳು ಸಂಕಷ್ಟದಲ್ಲಿದ್ದಾರೆ.

ಹೀಗಾಗಿ ಬೆಳಗಾವಿಯಲ್ಲಿ ಡಿಸೆಂಬರ್ 4ರಿಂದ ನಡೆಯುವ ಅಧಿವೇಶನದಲ್ಲಿ ಚರ್ಮಕುಶಲಕರ್ಮಿಗಳ ಸಂಕಷ್ಟದ ಬಗ್ಗೆ ಚರ್ಚೆ ಮಾಡಬೇಕು. ಚರ್ಮ ಕುಶಲಕರ್ಮಿಗಳ ಅನುಕೂಲಕ್ಕಾಗಿ ಪ್ರತ್ಯೇಕ ನಿಗಮ ಮಂಡಳಿ ಸ್ಥಾಪನೆ ಮಾಡಿ 200ಕೋಟಿ ರೂ. ಹಣ ಮೀಸಲಿಡಬೇಕು ಎಂದು ಆಗ್ರಹಿಸಿದ್ದಾರೆ.

ಅಷ್ಟೇ ಅಲ್ಲದೇ ಹೊರದೇಶದಿಂದ ಚರ್ಮವನ್ನು ಆಮದು ಮಾಡಿಕೊಳ್ಳುವುದನ್ನು ಸ್ಥಗಿತಗೊಳಿಸಿದ್ದಾರೆ. ಇತ್ತ ವಿದೇಶಕ್ಕೆ ಚಪ್ಪಲಿಗಳ ರಫ್ತು ಸ್ಥಗಿತಗೊಳಿಸಿದ್ದರಿಂದ ಚರ್ಮ ಕುಶಲಕರ್ಮಿಗಳ ಮೇಲೆ ಪರಿಣಾಮ ಬೀರಿದೆ ಎಂದು ಆರೋಪಿಸಿದ್ದಾರೆ.

ಇನ್ನು ಕೊಲ್ಹಾಪುರ ಬ್ರ್ಯಾಂಡ್​ಗೆ ಪರ್ಯಾಯವಾಗಿ ರಾಜ್ಯದಲ್ಲಿ ಅಥಣಿ ಬ್ರ್ಯಾಂಡ್ ಚರ್ಮದ ಚಪ್ಪಲಿ ಹೆಸರಿನಡಿ ಮಾರಾಟ ಮಾಡಬೇಕೆಂದು ಹಿಂದಿನ ಸರ್ಕಾರ ಘೋಷಣೆ ಮಾಡಿತ್ತು. ಆದರೆ, ಮಾರ್ಕೆಟಿಂಗ್ ವ್ಯವಸ್ಥೆ ಸರಿ ಇಲ್ಲ ಎಂದು ಚರ್ಮ ಕುಶಲಕರ್ಮಿಗಳು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ನೆರೆಯ ಮಹಾರಾಷ್ಟ್ರ ಬ್ರ್ಯಾಂಡ್​ಗೆ ನಮ್ಮ ರಾಜ್ಯದ ಕಾರ್ಮಿಕರು ಕೆಲಸ ಮಾಡುತ್ತಿದ್ದಾರೆ. ಇದರ ಬದಲಿಗೆ ಕರ್ನಾಟಕ ಬ್ರ್ಯಾಂಡ್​ನ್ನೇ ಬೆಳೆಸಬೇಕೆಂಬ ಉದ್ದೇಶದಿಂದ ಅಥಣಿ ಬ್ರ್ಯಾಂಡ್ ಆರಂಭಿಸಲಾಗಿದ್ದು, ಇದರ ಮಾರ್ಕೆಟಿಂಗ್​ಗೆ ಕ್ರಮ ವಹಿಸಬೇಕು.

ಈಗ ಚರ್ಮದ ಚಪ್ಪಲಿಗಳ ತಯಾರಿಕೆಗೆ ಅತ್ಯಾಧುನಿಕ ಯಂತ್ರೋಪಕರಣಗಳು ಬಂದಿದ್ದು, ಯಂತ್ರೋಪಕರಣಗಳ ಖರೀದಿಗೆ ಸರ್ಕಾರ ನೆರವು ನೀಡಬೇಕು. ಮೊದಲಿನಂತೆಯೇ 60:40 ಅನುಪಾತದಡಿ ಸಬ್ಸಿಡಿ ನೀಡುವ ಯೋಜನೆ ರೂಪಿಸಬೇಕು.

ಈಗಾಗಲೇ ಡಾ.ಬಾಬು ಜಗಜೀವನರಾಂ ಚರ್ಮ ಕೈಗಾರಿಕೆಗಳ ಅಭಿವೃದ್ಧಿ ನಿಗಮಕ್ಕೂ ಹೆಚ್ಚಿನ ಅನುದಾನ ಬಿಡುಗಡೆ ಮಾಡಿ ಅತ್ಯುತ್ತಮ ಗುಣಮಟ್ಟದ ಅಥಣಿ ಬ್ರ್ಯಾಂಡ್ ಚಪ್ಪಲಿಗಳ ಮಾರಾಟಕ್ಕೆ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸುವಂತೆ ಆಗ್ರಹಿಸುತ್ತಿದ್ದಾರೆ.

ಒಟ್ಟಾರೆಯಾಗಿ ರಾಜ್ಯಾದ್ಯಂತ 18 ಲಕ್ಷಕ್ಕೂ ಹೆಚ್ಚು ಚರ್ಮ ಕುಶಲಕರ್ಮಿಗಳು ಇದ್ದು ಸಂಕಷ್ಟಕ್ಕೆ ಸಿಲುಕಿದ್ದಾರೆ. ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಡಿಸೆಂಬರ್ 4ರಿಂದ ನಡೆಯುವ ಚಳಿಗಾಲದ ಅಧಿವೇಶನದಲ್ಲಿ ಈ ಬಗ್ಗೆ ಚರ್ಚಿಸಬೇಕು. ಈಗಾಗಲೇ ಡಾ.ಬಾಬು ಜಗಜೀವನರಾಂ ಚರ್ಮ ಕೈಗಾರಿಕೆಗಳ ಅಭಿವೃದ್ಧಿ ನಿಗಮವಿದ್ದರೂ ಚರ್ಮ ಕುಶಲಕರ್ಮಿಗಳಿಗೆ ಪ್ರತ್ಯೇಕ ನಿಗಮ ಸ್ಥಾಪನೆ ಮಾಡಬೇಕೆಂಬುದು ಚರ್ಮ ಕುಶಲಕರ್ಮಿಗಳ ಹಕ್ಕೊತ್ತಾಯ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | UAPA, NSA ಕಾಯ್ದೆಗಳು ಸಂವಿಧಾನಿಕ ಹಕ್ಕುಗಳ ದಮನಕ್ಕೆ ಅಸ್ತ್ರವಾಗುತ್ತಿವೆ : ಪ್ರೊ. ಫಣಿರಾಜ್

ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಬಂಧನವಾಗಿ ಆರು ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ,...

ಉಡುಪಿ | ಕಟ್‌ಬೇಲ್ತೂರು ರೈಲ್ವೆ ಸೇತುವೆ ಅಪಾಯಕಾರಿ ತಿರುವು ಸರಿಪಡಿಸಲು ಆಗ್ರಹಿಸಿ ಸಿಪಿಎಂ ಪ್ರತಿಭಟನೆ

ಕಟ್‌ಬೇಲ್ತೂರು ಗ್ರಾಮದ ರೈಲ್ವೆ ಸೇತುವೆಯಲ್ಲಿರುವ ಅಪಾಯಕಾರಿ ತಿರುವನ್ನು ತಕ್ಷಣ ಸರಿಪಡಿಸಿ, ಸಾರ್ವಜನಿಕರ...

ಉಡುಪಿ | ಮಲ್ಪೆ–ತೀರ್ಥಹಳ್ಳಿ ಹೆದ್ದಾರಿ ಕಾಮಗಾರಿ ಅಂತಿಮ ಹಂತ; ಬಾಕಿ ಭೂಸ್ವಾಧೀನಕ್ಕೆ ಕೋಟ ಶ್ರೀನಿವಾಸ ಪೂಜಾರಿ ಸೂಚನೆ

ರಾಷ್ಟ್ರೀಯ ಹೆದ್ದಾರಿ 169ಎರ ಮಲ್ಪೆ–ಕರಾವಳಿ ಬೈಪಾಸ್‌ವರೆಗಿನ ಬಾಕಿ ಉಳಿದಿರುವ ಭೂಸ್ವಾಧೀನ ಪ್ರಕ್ರಿಯೆಯನ್ನು...