ಬೆಳಗಾವಿಯಲ್ಲಿ ‘ಭಗವಾಧ್ವಜ’ ಹಾರಿಸಲು ಮುಂದಾದ ನಗರಸಭಾ ಸದಸ್ಯರು; ಪೊಲೀಸರಿಂದ ತಡೆ

Date:

Advertisements
  • ಬೆಳಗಾವಿ ಜಿಲ್ಲೆ ನಿಪ್ಪಾಣಿ ನಗರಸಭೆ ಮೇಲೆ ತ್ರಿವರ್ಣ ಧ್ವಜ ಹಾರಿಸಿದ ಬಳಿಕ ಯತ್ನ
  • ಮಂಗಳೂರಿನ ಸುರತ್ಕಲ್‌ ಬಸ್‌ ನಿಲ್ದಾಣದ ಬಳಿಯೂ ಪ್ರತ್ಯಕ್ಷವಾಗಿದ್ದ ‘ಭಗವಾಧ್ವಜ

ಸ್ವಾತಂತ್ರ್ಯೋತ್ಸವದ ಸಂಭ್ರಮದ ನಡುವೆಯೇ ನಗರಸಭಾ ಸದಸ್ಯರಿಬ್ಬರು ‘ಭಗವಾಧ್ವಜ’ ಹಾರಿಸಲು ಮುಂದಾದ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ.

ಬೆಳಗಾವಿಯ ನಿಪ್ಪಾಣಿ ನಗರಸಭೆ ಮೇಲೆ ಮರಾಠಿ ಭಾಷಿಕ ನಿಪ್ಪಾಣಿ ನಗರಸಭಾ ಸದಸ್ಯರಾದ ವಿನಾಯಕ ವಾಡೆ ಹಾಗೂ ಸಂಜಯ ಸಾಂಗಾವಕರ್ ಅವರು ಭಗವಾಧ್ವಜ ಹಾರಿಸಲು ಮುಂದಾಗಿದ್ದಾರೆ. ಇದನ್ನು ಗಮನಿಸಿದ ಮಹಿಳಾ ಪೊಲೀಸ್ ಅಧಿಕಾರಿಯೊಬ್ಬರು ಅವರನ್ನು ಪ್ರಶ್ನಿಸಿದ್ದಾರೆ. ಈ ವೇಳೆ ವಾಗ್ವಾದ ನಡೆದು, ಅವರ ಪ್ರಯತ್ನವನ್ನು ವಿಫಲಗೊಳಿಸಿದ್ದಾರೆ.

‘ಇವತ್ತು ಸ್ವಾತಂತ್ರ್ಯ ದಿನ. ಇದನ್ನು ಹಾರಿಸಲು ನಿಮಗೆಷ್ಟು ಧೈರ್ಯ. ಇದಕ್ಕೆ ನಾವು ಅವಕಾಶ ಕೊಡುವುದಿಲ್ಲ’ ಎಂದು ಸ್ಪಷ್ಟವಾಗಿ ವಿರೋಧ ವ್ಯಕ್ತಪಡಿಸಿದ್ದರಿಂದ ಕೊನೆಗೆ ಇಬ್ಬರೂ ಹಿಂದೆ ಸರಿದಿದ್ದಾರೆ.

Advertisements

ಮಾಜಿ ಸಚಿವೆ ಶಾಸಕಿ ಶಶಿಕಲಾ ಜೊಲ್ಲೆ ಹಾಗೂ ಸ್ಥಳೀಯ ಅಧಿಕಾರಿಗಳ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣದ ಬಳಿಕ ಈ ಘಟನೆ ನಡೆದಿದೆ.

ಮಂಗಳೂರಿನ ಸುರತ್ಕಲ್‌ನಲ್ಲೂ ಪ್ರತ್ಯಕ್ಷವಾಗಿದ್ದ ಭಗವಾಧ್ವಜ

ಮಂಗಳೂರಿನ ಸುರತ್ಕಲ್ ಬಸ್ ಸ್ಟಾಂಡ್‌ನಲ್ಲಿಯೂ ಕೂಡ ಸಂಘಪರಿವಾರದ ಕಾರ್ಯಕರ್ತರು ಭಗವಾಧ್ವಜ ಹಾರಿಸಿ, ತಿರಂಗಾ ಧ್ವಜಕ್ಕೆ ಅಪಮಾನ ಮಾಡಿದ್ದಾರೆ. ಭಗವಾಧ್ವಜಕ್ಕೆ ಪೊಲೀಸರು ಭದ್ರತೆ ನೀಡಿ, ಕಾವಲು ಕಾಯುತ್ತಿದ್ದಾರೆ ಎಂಬ ಸುದ್ದಿ ಹರಿದಾಡಿತ್ತು.

WhatsApp Image 2023 08 15 at 3.37.05 PM

ಮೊದಲು ಹರಿದಾಡಿದ್ದ ಫೋಟೋ

ಈ ಹಿನ್ನೆಲೆಯಲ್ಲಿ ಮಂಗಳೂರು ನಗರ ಕಮಿಷನರ್ ಕುಲದೀಪ್ ಕುಮಾರ್ ಜೈನ್ ಅವರನ್ನು ಸಂಪರ್ಕಿಸಿದಾಗ, “ನಿನ್ನೆ ಅಖಂಡ ಭಾರತ ಸಂಕಲ್ಪ ಕಾರ್ಯಕ್ರಮದಡಿ ರಾತ್ರಿ ವಿಶ್ವ ಹಿಂದೂ ಪರಿಷತ್ ಪಂಜಿನ ಮೆರವಣಿಗೆ ಆಯೋಜಿಸಿತ್ತು. ಆ ಕಾರ್ಯಕ್ರಮದ ಭಾಗವಾಗಿ ಆ ಧ್ವಜವನ್ನು ಹಾಕಿದ್ದಾರೆ. ಬೆಳಗ್ಗೆ ಬಂದು ಅವರೇ ತೆಗೆದಿದ್ದಾರೆ’ ಎಂದು ಸ್ಪಷ್ಟೀಕರಣ ನೀಡಿದ್ದಾರೆ.

WhatsApp Image 2023 08 15 at 4.54.04 PM

ಮಂಗಳೂರು ಕಮಿಷನರ್ ಸ್ಪಷ್ಟೀಕರಣ ನೀಡಿ ಕಳುಹಿಸಿರುವ ಫೋಟೋ

‘ಪೊಲೀಸರು ರಾತ್ರಿ ಗಸ್ತಿನ ಕರ್ತವ್ಯದ ಭಾಗವಾಗಿ ಪ್ರತಿನಿತ್ಯ ಅಲ್ಲೇ ವಾಹನ ನಿಲ್ಲಿಸಿದ್ದರು. ಭಗವಾಧ್ವಜಕ್ಕಾಗಿ ಕಾವಲು ನಿಂತಿದ್ದಲ್ಲ. ಬೆಳಗ್ಗೆ ಯಾರೋ ಫೋಟೋ ತೆಗೆದು ಹರಿಯಬಿಟ್ಟಿದ್ದಾರೆ. ಸದ್ಯ ಆ ಧ್ವಜ ಅಲ್ಲಿ ಇಲ್ಲ. ಬೆಳಗ್ಗೆಯೇ ಸಂಘಟಕರು ಬಂದು ತೆಗೆದಿದ್ದಾರೆ’ ಎಂದು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

  1. ಭಾರತ ಹಲವು ಮತಗಳ ಸಮ್ಮಿಶ್ರಣ
    ಸರ್ವಜನಾಂಗದ ಶಾಂತಿಯ ತೋಟ ರಸಿಕರ ಕಂಗಳ ಸೆಳೆಯುವ ನೋಟ
    ಇದೆಲ್ಲವನ್ನೂ ನಮ್ಮ ಬುಡಕಟ್ಟು ಮೂಲನಿವಾಸಿಗಳು ಅಂದಿನಿಂದ ಇಂದಿನವರೆಗೂ ಸ್ವೀಕರಿಸಿಕೊಂಡು ಬಂದಿದ್ದಾರೆ
    ಸ್ಯಾಡಿಷ್ಟಗಳು ಹಿಂದು ಮೂಲಭೂತವಾದಿಗಳು ಮಾಡುವ ಈ ಹೀನಕೃತ್ಯದಿಂದ ಇವರು ದೇಶದ್ರೋಹಿಗಳಾಗಿ ಬದಲಾಗುತ್ತಿದ್ದಾರೆ

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | SBUDA ದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ : ಸುಂದರೇಶ್

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ...

ಮಾಲೂರು | ‘ಕೆಲಸ ನೀಡದಿದ್ದರೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ’!

ಮಾಲೂರಿನ ವರ್ಗಾ ಕಂಪನಿ ಮುಚ್ಚುವುದನ್ನು ವಿರೋಧಿಸಿ ಇಂದು ಮಾಲೂರಿನಲ್ಲಿ ಕಾರ್ಮಿಕರು ಬೃಹತ್...

ಬೆಳಗಾವಿ : ಜಿಲ್ಲೆಯಲ್ಲಿ ಮೋಡ ಕವಿದ ಹವಾಮಾನ – ಅಲ್ಪ ಮಳೆಯ ಸಾಧ್ಯತೆ

ಬೆಳಗಾವಿ ಜಿಲ್ಲೆಯಲ್ಲಿ ತಾಪಮಾನ 20 ರಿಂದ 25 ಡಿಗ್ರಿ ಸೆಲ್ಸಿಯಸ್ ದಾಖಲಾಗುವ...

ಗಣೇಶ ಚತುರ್ಥಿಗೆ ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲು

ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಇಲಾಖೆಯು ಬೆಂಗಳೂರು-ಮಂಗಳೂರು...

Download Eedina App Android / iOS

X