ಬೆಳಗಾವಿಯಲ್ಲಿ ‘ಭಗವಾಧ್ವಜ’ ಹಾರಿಸಲು ಮುಂದಾದ ನಗರಸಭಾ ಸದಸ್ಯರು; ಪೊಲೀಸರಿಂದ ತಡೆ

Date:

  • ಬೆಳಗಾವಿ ಜಿಲ್ಲೆ ನಿಪ್ಪಾಣಿ ನಗರಸಭೆ ಮೇಲೆ ತ್ರಿವರ್ಣ ಧ್ವಜ ಹಾರಿಸಿದ ಬಳಿಕ ಯತ್ನ
  • ಮಂಗಳೂರಿನ ಸುರತ್ಕಲ್‌ ಬಸ್‌ ನಿಲ್ದಾಣದ ಬಳಿಯೂ ಪ್ರತ್ಯಕ್ಷವಾಗಿದ್ದ ‘ಭಗವಾಧ್ವಜ

ಸ್ವಾತಂತ್ರ್ಯೋತ್ಸವದ ಸಂಭ್ರಮದ ನಡುವೆಯೇ ನಗರಸಭಾ ಸದಸ್ಯರಿಬ್ಬರು ‘ಭಗವಾಧ್ವಜ’ ಹಾರಿಸಲು ಮುಂದಾದ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ.

- Advertisement -

ಬೆಳಗಾವಿಯ ನಿಪ್ಪಾಣಿ ನಗರಸಭೆ ಮೇಲೆ ಮರಾಠಿ ಭಾಷಿಕ ನಿಪ್ಪಾಣಿ ನಗರಸಭಾ ಸದಸ್ಯರಾದ ವಿನಾಯಕ ವಾಡೆ ಹಾಗೂ ಸಂಜಯ ಸಾಂಗಾವಕರ್ ಅವರು ಭಗವಾಧ್ವಜ ಹಾರಿಸಲು ಮುಂದಾಗಿದ್ದಾರೆ. ಇದನ್ನು ಗಮನಿಸಿದ ಮಹಿಳಾ ಪೊಲೀಸ್ ಅಧಿಕಾರಿಯೊಬ್ಬರು ಅವರನ್ನು ಪ್ರಶ್ನಿಸಿದ್ದಾರೆ. ಈ ವೇಳೆ ವಾಗ್ವಾದ ನಡೆದು, ಅವರ ಪ್ರಯತ್ನವನ್ನು ವಿಫಲಗೊಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

‘ಇವತ್ತು ಸ್ವಾತಂತ್ರ್ಯ ದಿನ. ಇದನ್ನು ಹಾರಿಸಲು ನಿಮಗೆಷ್ಟು ಧೈರ್ಯ. ಇದಕ್ಕೆ ನಾವು ಅವಕಾಶ ಕೊಡುವುದಿಲ್ಲ’ ಎಂದು ಸ್ಪಷ್ಟವಾಗಿ ವಿರೋಧ ವ್ಯಕ್ತಪಡಿಸಿದ್ದರಿಂದ ಕೊನೆಗೆ ಇಬ್ಬರೂ ಹಿಂದೆ ಸರಿದಿದ್ದಾರೆ.

ಮಾಜಿ ಸಚಿವೆ ಶಾಸಕಿ ಶಶಿಕಲಾ ಜೊಲ್ಲೆ ಹಾಗೂ ಸ್ಥಳೀಯ ಅಧಿಕಾರಿಗಳ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣದ ಬಳಿಕ ಈ ಘಟನೆ ನಡೆದಿದೆ.

ಮಂಗಳೂರಿನ ಸುರತ್ಕಲ್‌ನಲ್ಲೂ ಪ್ರತ್ಯಕ್ಷವಾಗಿದ್ದ ಭಗವಾಧ್ವಜ

ಮಂಗಳೂರಿನ ಸುರತ್ಕಲ್ ಬಸ್ ಸ್ಟಾಂಡ್‌ನಲ್ಲಿಯೂ ಕೂಡ ಸಂಘಪರಿವಾರದ ಕಾರ್ಯಕರ್ತರು ಭಗವಾಧ್ವಜ ಹಾರಿಸಿ, ತಿರಂಗಾ ಧ್ವಜಕ್ಕೆ ಅಪಮಾನ ಮಾಡಿದ್ದಾರೆ. ಭಗವಾಧ್ವಜಕ್ಕೆ ಪೊಲೀಸರು ಭದ್ರತೆ ನೀಡಿ, ಕಾವಲು ಕಾಯುತ್ತಿದ್ದಾರೆ ಎಂಬ ಸುದ್ದಿ ಹರಿದಾಡಿತ್ತು.

WhatsApp Image 2023 08 15 at 3.37.05 PM

ಮೊದಲು ಹರಿದಾಡಿದ್ದ ಫೋಟೋ

ಈ ಹಿನ್ನೆಲೆಯಲ್ಲಿ ಮಂಗಳೂರು ನಗರ ಕಮಿಷನರ್ ಕುಲದೀಪ್ ಕುಮಾರ್ ಜೈನ್ ಅವರನ್ನು ಸಂಪರ್ಕಿಸಿದಾಗ, “ನಿನ್ನೆ ಅಖಂಡ ಭಾರತ ಸಂಕಲ್ಪ ಕಾರ್ಯಕ್ರಮದಡಿ ರಾತ್ರಿ ವಿಶ್ವ ಹಿಂದೂ ಪರಿಷತ್ ಪಂಜಿನ ಮೆರವಣಿಗೆ ಆಯೋಜಿಸಿತ್ತು. ಆ ಕಾರ್ಯಕ್ರಮದ ಭಾಗವಾಗಿ ಆ ಧ್ವಜವನ್ನು ಹಾಕಿದ್ದಾರೆ. ಬೆಳಗ್ಗೆ ಬಂದು ಅವರೇ ತೆಗೆದಿದ್ದಾರೆ’ ಎಂದು ಸ್ಪಷ್ಟೀಕರಣ ನೀಡಿದ್ದಾರೆ.

WhatsApp Image 2023 08 15 at 4.54.04 PM

ಮಂಗಳೂರು ಕಮಿಷನರ್ ಸ್ಪಷ್ಟೀಕರಣ ನೀಡಿ ಕಳುಹಿಸಿರುವ ಫೋಟೋ

‘ಪೊಲೀಸರು ರಾತ್ರಿ ಗಸ್ತಿನ ಕರ್ತವ್ಯದ ಭಾಗವಾಗಿ ಪ್ರತಿನಿತ್ಯ ಅಲ್ಲೇ ವಾಹನ ನಿಲ್ಲಿಸಿದ್ದರು. ಭಗವಾಧ್ವಜಕ್ಕಾಗಿ ಕಾವಲು ನಿಂತಿದ್ದಲ್ಲ. ಬೆಳಗ್ಗೆ ಯಾರೋ ಫೋಟೋ ತೆಗೆದು ಹರಿಯಬಿಟ್ಟಿದ್ದಾರೆ. ಸದ್ಯ ಆ ಧ್ವಜ ಅಲ್ಲಿ ಇಲ್ಲ. ಬೆಳಗ್ಗೆಯೇ ಸಂಘಟಕರು ಬಂದು ತೆಗೆದಿದ್ದಾರೆ’ ಎಂದು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಜನಪ್ರತಿನಿಧಿಗಳನ್ನು ಕಡೆಗಣಿಸಿ ಕಾಮಗಾರಿ ನಡೆಸಿದರೆ ಸಹಿಸುವುದಿಲ್ಲ: ಶಾಸಕ ಡಾ.ಕೊತ್ತೂರು ಜಿ ಮಂಜುನಾಥ್ ಗರಂ

ಸ್ಥಳೀಯ ಜನಪ್ರತಿನಿಧಿಗಳ ಗಮನಕ್ಕೆ ತರದೆ ಹಾಗೂ ಶಿಷ್ಟಾಚಾರ ಪಾಲಿಸದೆ ಏಕಾಏಕಿ ಕಾಮಗಾರಿಗಳನ್ನು...

ಕೊಲ್ಹಾರ | ಶಾಸಕರಿಲ್ಲದ ಪ್ರಜಾಸೇವಾ ಆಂದೋಲನ: ಅಹವಾಲು ಹೊತ್ತುಬಂದವರಿಗೆ ನಿರಾಸೆ, ಅಧಿಕಾರಿಗಳಿಂದ ಪರಿಹಾರದ ಭರವಸೆ

ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಶಾಸಕರಿಲ್ಲದೆ ಪ್ರಜಾಸೇವಾ ಆಂದೋಲನ ನಡೆಯಿತು. ಇದರಿಂದಾಗಿ...

ಬಾಗಲಕೋಟೆ | ಹಾವು ಕಚ್ಚಿದರೆ ಕ್ಷಣವೂ ತಡಮಾಡದೆ, ಸರ್ಕಾರಿ ಆಸ್ಪತ್ರೆಯತ್ತ ಧಾವಿಸಿ: ಡಾ. ಮಹೇಶ ಕೋಣಿ

ಹಾವು ಕಡಿತಕ್ಕೆ ಒಳಗಾದವರು ಆತಂಕಕ್ಕೊಳಗಾಗಿ ನಾಟಿ ಚಿಕಿತ್ಸೆ, ನಕಲಿ ವೈದ್ಯರ ಮೊರೆ...

ರಾಯಚೂರು | ಕೆ. ಶಾಂತಪ್ಪ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿರುವುದು ಸಂತಸದ ವಿಚಾರ: ಬೋಸರಾಜು

ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಕೆ. ಶಾಂತಪ್ಪ ಅವರು ಜವಾಬ್ದಾರಿ...