ಬೆಳಗಾವಿ | ನಾನಾ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಮನರೇಗಾ ಕಾರ್ಮಿಕರ ಪ್ರತಿಭಟನೆ

Date:

Advertisements
  • ಮಜದೂರ್ ನವನಿರ್ಮಾಣ ಸಂಘ ವತಿಯಿಂದ ಹೋರಾಟ
  • ತಾಲೂಕು ಪಂಚಾಯತಿ ಕಾರ್ಯನಿರ್ವಹಣಾಧಿಕಾರಿಗೆ ಮನವಿ

ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ ಕೆಲಸ ಮಾಡುತ್ತಿರುವ ಮಹಿಳೆಯರು ತಮ್ಮ ಹಲವು ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಬೆಳಗಾವಿಯಲ್ಲಿ ಪ್ರತಿಭಟನೆ ನಡೆಸಿದ್ದಾರೆ.

ಬೆಳಗಾವಿಯ ತಾಲೂಕು ಪಂಚಾಯತಿ ಎದುರು ‘ಮಜದೂರ್ ನವನಿರ್ಮಾಣ ಸಂಘ’ ನೇತೃತ್ವದಲ್ಲಿ ಬಹಾದ್ದರವಾಡಿ, ಕರ್ಲೆ, ಜಾನೇವಾಡಿ, ಬಾಮನವಾಡಿ ಗ್ರಾಮದ ಮನರೇಗಾ ಕಾರ್ಮಿಕ ಮಹಿಳೆಯರು ಪ್ರತಿಭಟನೆ ನಡೆಸಿದ್ದಾರೆ. ತಾಲೂಕು ಪಂಚಾಯತಿ ಕಾರ್ಯನಿರ್ವಹಣಾಧಿಕಾರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ.

“ಕಿನಯೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಹಾದ್ದರವಾಡಿ, ಕರ್ಲೆ, ಜಾನೇವಾಡಿ, ಬಾಮನವಾಡಿ ಗ್ರಾಮಗಳ ಮನರೇಗಾ ಕಾರ್ಮಿಕರಿಗೆ ಕಳೆದ ಹಲವು ವರ್ಷಗಳಿಂದ ವರ್ಷಕ್ಕೆ 100 ದಿನ ಉದ್ಯೋಗ ಸಿಕ್ಕಿಲ್ಲ” ಎಂದು ಆರೋಪಿಸಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? : ಕೊಪ್ಪಳ | ಪ್ರಜಾಪ್ರಭುತ್ವ ಉಳಿವಿಗಾಗಿ ಜೈಲಿಗೆ ಹೋಗಲೂ ಹೆದರಬಾರದು; ಕುಂ ವೀರಭದ್ರಪ್ಪ ಕರೆ

“ಉದ್ಯೋಗ ಕೊಡಿಸುವಂತೆ ಹಲವಾರು ಬಾರಿ ಕಿನಯೇ ಗ್ರಾಮ ಪಂಚಾಯಿತಿಗೆ ಮನವಿ ಸಲ್ಲಿಸಲು ಹೋಗಿದ್ದೆವು. ಆದರೆ, ಬಡ ಕೂಲಿ ಕಾರ್ಮಿಕರ ಸಮಸ್ಯೆಗಳನ್ನು ಆಲಿಸಲು ಪಂಚಾಯಿತಿಯಲ್ಲಿ ಯಾರೂ ಇರುವುದಿಲ್ಲ, ನಮ್ಮ ಸಮಸ್ಯೆ ಕೇಳಲು ಇವರಿಗೆ ಸಮಯವಿಲ್ಲ” ಎಂದು ದೂರಿದ್ದಾರೆ.

“ಪಂಚಾಯತಿ ವ್ಯಾಪ್ತಿಯ ಕೆಲ ಗ್ರಾಮಗಳ ಮಹಿಳೆಯರು ಪಂಚಾಯಿತಿಯಿಂದ ಜಾಬ್ ಕಾರ್ಡ್ ಪಡೆಯಲು 2 ವರ್ಷ ಕಾಯಬೇಕಾಗಿದ್ದು, ಈ ಗ್ರಾಮಗಳಲ್ಲಿ ವರ್ಷದಲ್ಲಿ ಕೆಲವೇ ದಿನ ಮಾತ್ರ ಕೆಲಸ ಸಿಗುತ್ತಿದೆ. ಸಮಗ್ರ ಮನರೇಗಾ ಕಾಯಿದೆಯಂತೆ ಇಡೀ ಗ್ರಾಮಸ್ಥರಿಗೆ ಇದುವರೆಗೂ ಸರಿಯಾಗಿ ಉದ್ಯೋಗ ಸಿಕ್ಕಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಹೀಗಾಗಿ ಇಲ್ಲಿಯೇ ಉದ್ಯೋಗ ಪಡೆಯಬೇಕು ಎಂದುಕೊಂಡಿರುವ ಬಡ ಕಾರ್ಮಿಕ ಮಹಿಳೆಯರು ಪಂಚಾಯಿತಿಯ ಸಮಯಸಾಧಕ ಕ್ರಮದಿಂದ ಬೇಸತ್ತು ‘ಮಜದೂರ್ ನವನಿರ್ಮಾಣ ಸಂಘ’ದ ರಾಹುಲ್ ಪಾಟೀಲ್ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆಸುತ್ತಿದ್ದು, ಆದಷ್ಟು ಬೇಗ ನಮ್ಮ ಹಲವು ಸಮಸ್ಯೆಗಳನ್ನು ಪೂರೈಸಬೇಕು” ಎಂದು ಮನವಿ ಮಾಡಿಕೊಂಡಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

Download Eedina App Android / iOS

X